AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ 2 ಜಿಲ್ಲೆಗಳಲ್ಲಿ 1,400 ಕೋಟಿ ರೂ. ಹೂಡಿಕೆಗೆ ಮುಂದಾದ ಲಂಕಾ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್

Muttiah Muralitharan: ಚಾಮರಾಜನಗರ ಹೊರತುಪಡಿಸಿ ಧಾರವಾಡ ಜಿಲ್ಲೆಯಲ್ಲೂ ಬಂಡವಾಳ ಹೂಡಿಕೆ ಹೆಚ್ಚಿಸಲು ಮುರಳೀಧರನ್ ಉತ್ಸುಕರಾಗಿದ್ದಾರೆ. ಸದ್ಯ ಚಾಮರಾಜನಗರದಲ್ಲಿ 1000 ಕೋಟಿ ವೆಚ್ಚದ ಕಾರ್ಖಾನೆ ಸ್ಥಾಪನೆ ಕಾಮಗಾರಿ ನಡೆಯುತ್ತಿದೆ. ಧಾರವಾಡದಲ್ಲೂ ಹೂಡಿಕೆ ಆಗುವುದರಿಂದ ರಾಜ್ಯಕ್ಕೆ ಒಟ್ಟು 1400 ಕೋಟಿ ರೂ. ಬಂಡವಾಳ ಹರಿದುಬರುತ್ತಿದೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಕರ್ನಾಟಕದ 2 ಜಿಲ್ಲೆಗಳಲ್ಲಿ 1,400 ಕೋಟಿ ರೂ. ಹೂಡಿಕೆಗೆ ಮುಂದಾದ ಲಂಕಾ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್
ಮುತ್ತಯ್ಯ ಮುರಳೀಧರನ್, ಎಂಬಿ ಪಾಟೀಲ್
ಪೃಥ್ವಿಶಂಕರ
|

Updated on: Jun 19, 2024 | 3:45 PM

Share

ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ (Muttiah Muralitharan) ಕರ್ನಾಟಕದಲ್ಲಿ ಭಾರಿ ಹೂಡಿಕೆಗೆ ಮುಂದಾಗಿದ್ದಾರೆ. ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಉದ್ಯಮ ಲೋಕದಲ್ಲಿ ತಮ್ಮ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಮುರಳೀಧರನ್, ‘ಮುತ್ತಯ್ಯ ಬ್ರಿವರೇಜಸ್ ಮತ್ತು ಕನ್ಫೆಕ್ಷನರೀಸ್’ ಹೆಸರಿನ ತಂಪು ಪಾನೀಯಗಳ ಉತ್ಪಾದನಾ ಘಟಕವನ್ನು ಕನಾರ್ಟಟಕದ ಗಡಿನಾಡ ಜಿಲ್ಲೆ ಚಾಮರಾಜನಗರದ (Chamarajanagar) ಬದನಗುಪ್ಪೆಯಲ್ಲಿ ತೆರೆಯಲಿದ್ದಾರೆ. ಇದಕ್ಕಾಗಿ ಕರ್ನಾಟಕ ಸರ್ಕಾರದೊಂದಿಗೆ ಒಪ್ಪಂದ ಕೂಡ ಮಾಡಿಕೊಂಡಿದ್ದಾರೆ. ಅಲ್ಲದೆ ಮುರಳೀಧರನ್ ಧಾರವಾಡ ಜಿಲ್ಲೆಯಲ್ಲಿ ಹೂಡಿಕೆ ಮಾಡಲು ಇಚ್ಛಿಸಿದ್ದು, ಒಟ್ಟು 1400 ಕೋಟಿ ರೂ.ಗಳನ್ನು ಕರ್ನಾಟಕದಲ್ಲಿ ಹೂಡಿಕೆ ಮಾಡಲು ಮುರುಳೀಧರನ್ ಮುಂದಾಗಿದ್ದಾರೆ.

ಸಚಿವ ಎಂಬಿ ಪಾಟೀಲ್ ಮಾಹಿತಿ

ಕರ್ನಾಟಕದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಈ ಒಪ್ಪಂದದ ಬಗ್ಗೆ ಮಾಹಿತಿ ನೀಡಿದ್ದಾರೆ. ಸದ್ಯ ಚಾಮರಾಜನಗರ ಜಿಲ್ಲೆಯ ಬದನಗುಪ್ಪೆಯಲ್ಲಿ ಕಾರ್ಖಾನೆ ಸ್ಥಾಪನೆ ಕಾಮಗಾರಿ ನಡೆಯುತ್ತಿದೆ. ಎಂ.ಬಿ.ಪಾಟೀಲ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ಮುರಳೀಧರನ್ ಮತ್ತು ಅವರ ಕಂಪನಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಭೆಯ ನಂತರ ಮಾಡಿದ ಪೋಸ್ಟ್‌ನಲ್ಲಿ, ಮುತ್ತಯ್ಯ ಮುರಳೀಧರನ್ ಕರ್ನಾಟಕದಲ್ಲಿ ತಮ್ಮ ವ್ಯವಹಾರವನ್ನು ವಿಸ್ತರಿಸಲು ಬಯಸಿದ್ದಾರೆ. ತಮ್ಮ ತಾಯ್ನಾಡಿನಲ್ಲಿ ತಮ್ಮ ವ್ಯಾಪಾರವನ್ನು ಬೆಳೆಸಲು ಪ್ರಯತ್ನಿಸುತ್ತಿರುವ ಅವರು ಇದಕ್ಕಾಗಿ ತಮ್ಮ ರಾಜ್ಯವನ್ನು ಆಯ್ಕೆ ಮಾಡಿದ್ದಾರೆ.

2 ಜಿಲ್ಲೆಗಳಲ್ಲಿ ಹೂಡಿಕೆ

ಚಾಮರಾಜನಗರ ಹೊರತುಪಡಿಸಿ ಧಾರವಾಡ ಜಿಲ್ಲೆಯಲ್ಲೂ ಬಂಡವಾಳ ಹೂಡಿಕೆ ಹೆಚ್ಚಿಸಲು ಮುರಳೀಧರನ್ ಉತ್ಸುಕರಾಗಿದ್ದಾರೆ. ಸದ್ಯ ಚಾಮರಾಜನಗರದಲ್ಲಿ 1000 ಕೋಟಿ ವೆಚ್ಚದ ಕಾರ್ಖಾನೆ ಸ್ಥಾಪನೆ ಕಾಮಗಾರಿ ನಡೆಯುತ್ತಿದೆ. ಧಾರವಾಡದಲ್ಲೂ ಹೂಡಿಕೆ ಆಗುವುದರಿಂದ ರಾಜ್ಯಕ್ಕೆ ಒಟ್ಟು 1400 ಕೋಟಿ ರೂ. ಬಂಡವಾಳ ಹರಿದುಬರುತ್ತಿದೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಜನವರಿಯಿಂದ ಆರಂಭ

ಮಾಧ್ಯಮಗಳ ವರದಿ ಪ್ರಕಾರ ಈಗಾಗಲೇ 46 ಎಕರೆ ಭೂಮಿಯನ್ನು ತಂಪು ಪಾನೀಯ ಉತ್ಪಾದನೆಗೆ ಮಂಜೂರು ಮಾಡಲಾಗಿದ್ದು, ಆ ಜಮೀನಿನಲ್ಲಿ ಕಾರ್ಖಾನೆ ಸ್ಥಾಪಿಸುವ ಕಾರ್ಯ ನಡೆಯುತ್ತಿದೆ. 2025ರ ಜನವರಿ ವೇಳೆಗೆ ಕಾರ್ಖಾನೆ ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!