AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saurav Ganguly: ಸಿಎಂ ಮಮತಾ ಬ್ಯಾನರ್ಜಿ- ಗಂಗೂಲಿ ಭೇಟಿ: ರಾಜಕೀಯಕ್ಕೆ ಬರುತ್ತಾರಾ ದಾದಾ?

Saurav Ganguly - Mamata Banerjee : ದಾದಾ ಕ್ರಿಕೆಟ್ ಬಿಟ್ಟು ರಾಜಕೀಯ ಸೇರಲಿದ್ದಾರೆ ಎಂಬ ಊಹಾಪೋಹಗಳು ಪಶ್ಚಿಮ ಬಂಗಾಳದಲ್ಲಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗುವ ಮೂಲಕ ಸೌರವ್ ಗಂಗೂಲಿ ಕುತೂಹಲ ಮೂಡಿಸಿದ್ದಾರೆ.

Saurav Ganguly: ಸಿಎಂ ಮಮತಾ ಬ್ಯಾನರ್ಜಿ- ಗಂಗೂಲಿ ಭೇಟಿ: ರಾಜಕೀಯಕ್ಕೆ ಬರುತ್ತಾರಾ ದಾದಾ?
Saurav Ganguly - CM Mamata Banerjee
TV9 Web
| Edited By: |

Updated on:Jan 16, 2023 | 7:25 PM

Share

ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ (Saurav Ganguly) ಸೋಮವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿದ್ದಾರೆ. ನಬನ್ನಾದಲ್ಲಿರುವ ಸಿಎಂ  ಕಚೇರಿಗೆ ಆಗಮಿಸಿದ ಗಂಗೂಲಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಆದರೆ ಈ ಭೇಟಿಯ ಉದ್ದೇಶವೇನು ಎಂಬುದು ಇನ್ನೂ ಕೂಡ ಬಹಿರಂಗವಾಗಿಲ್ಲ. ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಸೌರವ್ ಗಂಗೂಲಿ ಕೂಡ ನಿರಾಕರಿಸಿದ್ದಾರೆ. ಇದಾಗ್ಯೂ ಈ ಭೇಟಿಯ ಹಿಂದೆ ರಾಜಕೀಯ ಚರ್ಚೆಗಳು ಶುರುವಾಗಿದೆ.

ಸೌರವ್ ಗಂಗೂಲಿ ಪಶ್ಚಿಮ ಬಂಗಾಳ ಸಿಎಂ ಅವರ ಕಚೇರಿಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಹಲವು ಬಾರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ್ದರು. ಆದರೆ ಈ ಬಾರಿಯ ಭೇಟಿ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಏಕೆಂದರೆ ದಾದಾ ಕ್ರಿಕೆಟ್ ಬಿಟ್ಟು ರಾಜಕೀಯ ಸೇರಲಿದ್ದಾರೆ ಎಂಬ ಊಹಾಪೋಹಗಳು ಪಶ್ಚಿಮ ಬಂಗಾಳದಲ್ಲಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗುವ ಮೂಲಕ ಸೌರವ್ ಗಂಗೂಲಿ ಕುತೂಹಲ ಮೂಡಿಸಿದ್ದಾರೆ.

ಇದನ್ನೂ ಓದಿ
Image
IPL 2023: ಐಪಿಎಲ್​ನಿಂದ ಹೊರಬಿದ್ದ ರಿಷಭ್ ಪಂತ್​ಗೆ ಸಿಗಲಿದೆ 21 ಕೋಟಿ ರೂ.
Image
Suryakumar Yadav: ರಾಹುಲ್ ದಾಖಲೆ ಉಡೀಸ್: ಹೊಸ ವಿಶ್ವ ದಾಖಲೆ ನಿರ್ಮಿಸಿದ ಸೂರ್ಯ
Image
Suryakumar Yadav: ತೂಫಾನ್ ಸೆಂಚುರಿ ಸಿಡಿಸಿ ಹೊಸ ದಾಖಲೆ ಬರೆದ ಸೂರ್ಯಕುಮಾರ್ ಯಾದವ್
Image
Virat Kohli – Rohit Sharma: ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲೂ ಕೊಹ್ಲಿ-ರೋಹಿತ್​ಗಿಲ್ಲ ಚಾನ್ಸ್​?

ಈ ಹಿಂದೆ ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಸೌರವ್ ಅವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಭಿನಂದಿಸಿದ್ದರು. ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ್ದ ಗಂಗೂಲಿ, ಮುಖ್ಯಮಂತ್ರಿ ನನಗೆ ತುಂಬಾ ಆಪ್ತರು. ಅವರು ನನಗೆ ತಾಯಿ ಇದ್ದಂತೆ. ಹೀಗಾಗಿ ಅವರು ನನ್ನನ್ನು ಅಭಿನಂದಿಸಿದ್ದಾರೆ. ಮಮತಾ ಬ್ಯಾನರ್ಜಿ ಅವರ ಬಗ್ಗೆ ನನಗೆ ತುಂಬಾ ಗೌರವವಿದೆ ಎಂದು ತಿಳಿಸಿದ್ದರು.

ಇದಾದ ಬಳಿಕ 4 ವರ್ಷಗಳ ಕಾಲ ಬಿಸಿಸಿಐ ಚುಕ್ಕಾಣಿ ಹಿಡಿದಿದ್ದ ಸೌರವ್ ಗಂಗೂಲಿ ಅವರನ್ನು ಕಳೆದ ವರ್ಷ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಯಿತು. ಈ ಬಗ್ಗೆ ಕೂಡ ಮಮತಾ ಬ್ಯಾನರ್ಜಿ ಅವರು ಪ್ರತಿಕ್ರಿಯಿಸಿದ್ದರು. ಅಷ್ಟೇ ಅಲ್ಲದೆ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಗಂಗೂಲಿ ಅವಕಾಶ ಮಾಡಿಕೊಡುವಂತೆ ಪ್ರಧಾನಿ ಮಂತ್ರಿಗೆ ಮನವಿ ಮಾಡಿದ್ದರು.

ಇದನ್ನೂ ಓದಿ: IPL 2023: ಕನ್ನಡಿಗನನ್ನು ಬೌಲಿಂಗ್ ಕೋಚ್ ಆಗಿ ಆಯ್ಕೆ ಮಾಡಿದ ಪಂಜಾಬ್ ಕಿಂಗ್ಸ್

“ಪ್ರಧಾನಿ ಅವರಲ್ಲಿ ನನ್ನ ವಿನಂತಿ, ದಯವಿಟ್ಟು ಸೌರವ್ ಅವರಿಗೆ ಐಸಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಡಿ” ಎಂದು ಮಮತಾ ಬ್ಯಾನರ್ಜಿ ಅವರು ಬಹಿರಂಗವಾಗಿ ಮನವಿ ಮಾಡಿದ್ದರು. ಇದಾಗ್ಯೂ ಅವಕಾಶ ನೀಡದ ಬಗ್ಗೆ ಪ್ರತಿಕ್ರಿಯಿಸಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಸೌರವ್ ಗಂಗೂಲಿ ಅವರು ಬಂಗಾಳದ ಪುತ್ರ ಎಂಬ ಕಾರಣಕ್ಕೆ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅವರನ್ನು ಆಯ್ಕೆ ಮಾಡಿಲ್ಲ’ ಎಂದು ಆರೋಪಿಸಿದ್ದರು.

ಅಷ್ಟೇ ಅಲ್ಲದೆ ಬಿಸಿಸಿಐಯಲ್ಲಿ ಅಮಿತ್ ಶಾ ಪುತ್ರ ಜಯ್ ಶಾ ಅಧಿಕಾರಾವಧಿ ವಿಸ್ತರಣೆ ಮಾಡಿದ್ದಾರೆ. ಆದರೆ ಸೌರವ್ ಗಂಗೂಲಿಯನ್ನು ಬಿಸಿಸಿಐನಿಂದ ಕೈ ಬಿಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು. ಇದೀಗ ದಿಢೀರ್​ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗುವ ಮೂಲಕ ಸೌರವ್ ಗಂಗೂಲಿ ಬಂಗಾಳ ರಾಜಕೀಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.

Published On - 7:24 pm, Mon, 16 January 23

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್