AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಯವಿಟ್ಟು ನಿಲ್ಲಿಸಿ’; ಕೇರಳದಲ್ಲಿ ಬೀದಿನಾಯಿಗಳ ಸಾಮೂಹಿಕ ಹತ್ಯೆಗೆ ಮರುಗಿದ ರಾಹುಲ್- ಧವನ್

Kerala Stray Dogs: ಕೇರಳದಲ್ಲಿ ನಾಯಿಗಳನ್ನು ಬರ್ಬರವಾಗಿ ಕೊಲ್ಲಲಾಗುತ್ತಿದೆ. ಇಂತಹ ಕ್ರಮಗಳನ್ನು ಮರುಪರಿಶೀಲಿಸಬೇಕು. ಈ ಕ್ರೂರ ಹತ್ಯೆಗಳು ನಿಲ್ಲಬೇಕು ಎಂದು ಟ್ವೀಟ್ ಮಾಡಿದ್ದಾರೆ.

‘ದಯವಿಟ್ಟು ನಿಲ್ಲಿಸಿ'; ಕೇರಳದಲ್ಲಿ ಬೀದಿನಾಯಿಗಳ ಸಾಮೂಹಿಕ ಹತ್ಯೆಗೆ ಮರುಗಿದ ರಾಹುಲ್- ಧವನ್
ಧವನ್- ರಾಹುಲ್ ಮನವಿ
TV9 Web
| Updated By: ಪೃಥ್ವಿಶಂಕರ|

Updated on: Sep 17, 2022 | 2:47 PM

Share

ಇತ್ತೀಚೆಗೆ ಕೇರಳ ರಾಜ್ಯದಲ್ಲಿ ಬೀದಿ ನಾಯಿಗಳ ದಾಳಿ ಹೆಚ್ಚಾಗುತ್ತಿದೆ. ಏಕಾಂಗಿಯಾಗಿ ಪ್ರಯಾಣಿಸುವವರ ಮೇಲೆ ನಾಯಿಗಳು ಭೀಕರವಾಗಿ ದಾಳಿ ಮಾಡಿ ಗಾಯಗೊಳಿಸುತ್ತಿವೆ. ವಯಸ್ಕರು ಮತ್ತು ಮಕ್ಕಳ ಮೇಲೆ ಹೆಚ್ಚಾಗಿ ದಾಳಿ ಮಾಡುವ ನಾಯಿಗಳು ಅವರನ್ನು ಗಂಭೀರವಾಗಿ ಗಾಯಗೊಳ್ಳಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸ್ಥಳೀಯಾಡಳಿತವೂ ನಾಯಿಗಳ ಹತ್ಯೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮೆಟ್ಟಿಲೇರಿದೆ ಎಂದು ಇತ್ತಿಚೆಗೆ ವರದಿಯಾಗಿದೆ. ಈ ಕುರಿತು ಅಂತಿಮ ನಿರ್ಧಾರ ಇನ್ನಷ್ಟೇ ಬರಬೇಕಿದ್ದರೂ ಕೇರಳದ ಕೆಲವೆಡೆ ಬೀದಿ ನಾಯಿಗಳನ್ನು ಅಮಾನುಷವಾಗಿ ಸಾಯಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ಜನರು ಸಾಮೂಹಿಕವಾಗಿ ನಾಯಿಗಳನ್ನು ಸಾಯಿಸುತ್ತಿರುವುದು ವರದಿಯಾಗಿದೆ.

ನಾಯಿಗಳ ಹತ್ಯೆಗೆ ಸಂಬಂಧಿಸಿದ ಸುದ್ದಿಗಳು, ಫೋಟೋಗಳು ಮತ್ತು ವೀಡಿಯೊಗಳು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿವೆ. ರಾಷ್ಟ್ರೀಯ ಮಾಧ್ಯಮಗಳಲ್ಲೂ ಇವುಗಳಿಗೆ ಸಂಬಂಧಿಸಿದ ಲೇಖನಗಳು ಬರುತ್ತಿವೆ. ಈ ಹಿನ್ನಲೆಯಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ಶಿಖರ್ ಧವನ್ (ಶಿಖರ್ ಧವನ್) ಕೇರಳದಲ್ಲಿ ಸಾಮೂಹಿಕವಾಗಿ ಶ್ವಾನ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಇದು ಭೀಕರವಾಗಿದೆ- ಧವನ್

ನಾಯಿಗಳ ಸಾಮೂಹಿಕ ಹತ್ಯೆಯನ್ನು ಟ್ವಿಟರ್​ನಲ್ಲಿ ಖಂಡಿಸಿರುವ ಧವನ್, ಇದು ಭೀಕರವಾಗಿದೆ. ಕೇರಳದಲ್ಲಿ ನಾಯಿಗಳನ್ನು ಬರ್ಬರವಾಗಿ ಕೊಲ್ಲಲಾಗುತ್ತಿದೆ. ಇಂತಹ ಕ್ರಮಗಳನ್ನು ಮರುಪರಿಶೀಲಿಸಬೇಕು. ಈ ಕ್ರೂರ ಹತ್ಯೆಗಳು ನಿಲ್ಲಬೇಕು ಎಂದು ಟ್ವೀಟ್ ಮಾಡಿದ್ದಾರೆ. ಈಗ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಪಾರ ಸಂಖ್ಯೆಯ ನಾಯಿಗಳನ್ನು ಕೊಲ್ಲಲಾಗುತ್ತಿದೆ ಎಂಬ ಸುದ್ದಿಗೆ ಸಹಜವಾಗಿಯೇ ಪ್ರಾಣಿ ಪ್ರೇಮಿ ಶಿಖರ್ ಪ್ರತಿಕ್ರಿಯಿಸಿದ್ದಾರೆ. ಆದರೆ ನೆಟಿಜನ್‌ಗಳು ಧವನ್ ಟ್ವೀಟ್‌ಗೆ ವಿಭಿನ್ನವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡುತ್ತಿರುವ ಫೋಟೋಗಳು ಮತ್ತು ವಿಡಿಯೋಗಳನ್ನು ನೆಟ್ಟಿಗರು ಶೇರ್ ಮಾಡುತ್ತಿದ್ದಾರೆ. ಜೊತೆಗೆ ನಾಯತಿಗಳು ಈ ರೀತಿ ದಾಳಿ ಮಾಡುತ್ತಿವೆ. ಹೀಗಾಗಿ ಆತ್ಮರಕ್ಷಣೆಗಾಗಿ ನಾಯಿಗಳನ್ನು ಸಾಯಿಸಲಾಗುತ್ತಿದೆ ಎಂದು ಕೆಲವರು ಪ್ರತ್ಯುತ್ತರ ನೀಡಿದ್ದಾರೆ.

ಹತ್ಯೆ ನಿಲ್ಲಿಸಿ ಎಂದ ರಾಹುಲ್

ಕೇರಳದಲ್ಲಿ ಬೀದಿನಾಯಿಗಳನ್ನು ಸಾಮೂಹಿಕವಾಗಿ ಕೊಲ್ಲುತ್ತಿರುವ ಬಗ್ಗೆ ಭಾರತ ಕ್ರಿಕೆಟಿಗ ಕೆಎಲ್ ರಾಹುಲ್ ಕೂಡ ಪ್ರತಿಕ್ರಿಯಿಸಿದ್ದು, ಬೀದಿ ನಾಯಿಗಳ ಸಾಮೂಹಿಕ ಹತ್ಯೆಗೆ ಕಡಿವಾಣ ಹಾಕಬೇಕು ಎಂಬ ಅಭಿಯಾನಕ್ಕೆ ಕೆಎಲ್ ರಾಹುಲ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇನ್ಸ್ಟಾಗ್ರಾಮ್ ಸ್ಟೋರಿ ಮೂಲಕ ರಾಹುಲ್ ಪ್ರತಿಕ್ರಿಯೆ ನೀಡಿದ್ದು, ಬೀದಿ ನಾಯಿಗಳ ಆರೈಕೆಗಾಗಿ ಕೆಲಸ ಮಾಡುವ ‘ವಾಯ್ಸ್ ಆಫ್ ಸ್ಟ್ರೇ ಡಾಗ್ಸ್’ ಪೋಸ್ಟರ್ ಅನ್ನು ರಾಹುಲ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಕೇರಳದಲ್ಲಿ ಮತ್ತೆ ಬೀದಿ ನಾಯಿಗಳ ಸಾಮೂಹಿಕ ಹತ್ಯೆ ಶುರುವಾಗಿದೆ ಎಂದು ಪೋಸ್ಟರ್​ನಲ್ಲಿ ಬರೆಯಲಾಗಿದೆ. ಈ ಪೋಸ್ಟರ್ ಹಂಚಿಕೊಂಡಿರುವ ರಾಹುಲ್, ‘ದಯವಿಟ್ಟು ನಿಲ್ಲಿಸಿ’ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ.

ಏತನ್ಮಧ್ಯೆ, ರಾಜ್ಯದಲ್ಲಿ ಬೀದಿ ನಾಯಿಗಳ ದಾಳಿಗೆ ತುತ್ತಾದ ಜನರ ಸಮಸ್ಯೆಯನ್ನು ಹೈಕೋರ್ಟ್ ಇಂದು ಪರಿಶೀಲಿಸಲಿದ್ದು, ಬೀದಿ ನಾಯಿಗಳ ದಾಳಿಯಿಂದ ನಾಗರಿಕರನ್ನು ರಕ್ಷಿಸುವ ಹೊಣೆಗಾರಿಕೆ ಸರ್ಕಾರದ ಮೇಲಿದೆ ಎಂದು ವಿಭಾಗೀಯ ಪೀಠ ಕಳೆದ ದಿನ ಸ್ಪಷ್ಟಪಡಿಸಿತ್ತು. ಆಕ್ರಮಣಕಾರಿ ನಾಯಿಗಳನ್ನು ಗುರುತಿಸಿ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕು ಎಂದೂ ಹೈಕೋರ್ಟ್ ಸೂಚಿಸಿತ್ತು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ