ನಿಜಕ್ಕೂ ಗಾಯಗೊಂಡಿದ್ದಾರಾ? ಫುಟ್ಬಾಲ್ ಆಡ್ತಿದ್ದಾರೆ CSK ನಾಯಕ ರುತುರಾಜ್ ಗಾಯಕ್ವಾಡ್
IPL 2025 CSK vs KKR: ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 103 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 10.1 ಓವರ್ಗಳಲ್ಲಿ 107 ರನ್ ಬಾರಿಸಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಸತತ ಸೋಲುಗಳಿಂದ ಕಂಗೆಟ್ಟಿದೆ. ಈ ಸೋಲುಗಳ ನಡುವೆ ಸಿಎಸ್ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಸಹ ಗಾಯಗೊಂಡಿದ್ದಾರೆ. ಮೊಣಕೈ ಮೂಳೆ ಮುರಿತಕ್ಕೊಳಗಾಗಿರುವ ಕಾರಣ ಅವರು ಐಪಿಎಲ್ನಿಂದ ಹೊರಗುಳಿದಿದ್ದಾರೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಂದಿನ ಪಂದ್ಯಗಳಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.
ರುತುರಾಜ್ ಗಾಯಕ್ವಾಡ್ ಫುಟ್ಬಾಲ್ ಆಟ:
ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಗಾಯದ ಕಾರಣ ಐಪಿಎಲ್ನಿಂದ ಹೊರಗುಳಿದಿರುವ ರುತುರಾಜ್ ಗಾಯಕ್ವಾಡ್ (Ruturaj Gaikwad) ಚೆಪಾಕ್ ಮೈದಾನದಲ್ಲಿ ಫುಟ್ಬಾಲ್ ಆಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಅದು ಸಹ ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಎಂಬುದೇ ಅಚ್ಚರಿ.
ಇದರ ಬೆನ್ನಲ್ಲೇ ರುತುರಾಜ್ ಗಾಯಕ್ವಾಡ್ ಅವರ ಗಾಯದ ಬಗ್ಗೆ ಪ್ರಶ್ನೆಗಳೆದ್ದಿವೆ. ಏಕೆಂದರೆ ಮೊಣಕೈ ಮೂಳೆ ಮುರಿತಕ್ಕೊಳಗಿದ್ದರೆ ಸಿಎಸ್ಕೆ ತಂಡದ ನಾಯಕ ಆಸ್ಪತ್ರೆಗೆ ದಾಖಲಾಗಬೇಕಿತ್ತು. ಅಥವಾ ತನ್ನ ಮೊಣಕೈಗೆ ಚಿಕಿತ್ಸೆ ಪಡೆಯುತ್ತಿರಬೇಕಿತ್ತು.
ಇದಾಗ್ಯೂ ರುತುರಾಜ್ ಗಾಯಕ್ವಾಡ್ ಸಿಎಸ್ಕೆ ತಂಡದ ಅಭ್ಯಾಸದ ವೇಳೆ ಫುಟ್ಬಾಲ್ ಆಡುತ್ತಿರುವುದು ಕಂಡು ಬಂದಿರುವುದೇ ಅಚ್ಚರಿ. ಹೀಗಾಗಿಯೇ ಇದೀಗ ರುತುರಾಜ್ ಅವರ ಗಾಯದ ಬಗ್ಗೆ ಅಭಿಮಾನಿಗಳು ಅನುಮಾನಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
ರುತುರಾಜ್ ಗಾಯಕ್ವಾಡ್ ಫುಟ್ಬಾಲ್ ಆಡುತ್ತಿರುವ ವಿಡಿಯೋ:
ಒಟ್ಟಿನಲ್ಲಿ ಗಾಯಗೊಂಡ ಬಳಿಕ ಕೂಡ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಜೊತೆ ಕಾಣಿಸಿಕೊಂಡಿರುವ ರುತುರಾಜ್ ಗಾಯಕ್ವಾಡ್, ಇದೀಗ ಫುಟ್ಬಾಲ್ ಆಡುವ ಮೂಲಕ ಹೊಸ ಅನುಮಾನಗಳನ್ನು ಹುಟ್ಟುಹಾಕಿದ್ದು, ಈ ಬಗ್ಗೆ ಸಿಎಸ್ಕೆ ಏನು ಸ್ಪಷ್ಟನೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಮತ್ತೆ ಸೋತ ಸಿಎಸ್ಕೆ:
ರುತುರಾಜ್ ಗಾಯಕ್ವಾಡ್ ಅನುಪಸ್ಥಿತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿರುವ ಮಹೇಂದ್ರ ಸಿಂಗ್ ಧೋನಿ ಕೂಡ ಸೋಲಿನ ರುಚಿ ನೀಡಿದ್ದಾರೆ. ಚೆಪಾಕ್ನಲ್ಲಿ ನಡೆದ ಐಪಿಎಲ್ನ 25ನೇ ಪಂದ್ಯದಲ್ಲಿ ಟಾಸ್ ಗೆದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು.
ಇದನ್ನೂ ಓದಿ: IPL 2025: ಮುಂಬೈ ಇಂಡಿಯನ್ಸ್ ಆಟಗಾರನ ಬ್ಯಾನ್ ಮಾಡಿದ ಪಾಕಿಸ್ತಾನ್
ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 103 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 10.1 ಓವರ್ಗಳಲ್ಲಿ 107 ರನ್ ಬಾರಿಸಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.