AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suresh Raina: ಇದೇ ಕಾರಣಕ್ಕೆ ನಾವು ರೈನಾರನ್ನು ಖರೀದಿಸಿಲ್ಲ ಎಂದ CSK ಸಿಇಒ

IPL 2022 CSK: ಇದೇ ವೇಳೆ ಮತ್ತೋರ್ವ ಯಶಸ್ವಿ ಬ್ಯಾಟ್ಸ್‌ಮನ್ ಫಾಫ್ ಡು ಪ್ಲೆಸಿಸ್ ಅವರಿಗಾಗಿ ಬಿಡ್ಡಿಂಗ್ ನಡೆಸದ ಬಗ್ಗೆ ಮಾತನಾಡಿದ ಕಾಶಿ ವಿಶ್ವನಾಥನ್, ನಾವು ಫಾಫ್ ಅವರನ್ನು ಕಳೆದುಕೊಂಡಿದ್ದೇವೆ

Suresh Raina: ಇದೇ ಕಾರಣಕ್ಕೆ ನಾವು ರೈನಾರನ್ನು ಖರೀದಿಸಿಲ್ಲ ಎಂದ CSK ಸಿಇಒ
suresh raina
TV9 Web
| Edited By: |

Updated on: Feb 15, 2022 | 6:02 PM

Share

IPL -2022 ಮೆಗಾ ಹರಾಜಿನಲ್ಲಿ ಅನೇಕ ಫ್ರಾಂಚೈಸಿಗಳು ತಮ್ಮ ಹಳೆಯ ಸಹ ಆಟಗಾರರನ್ನು ಖರೀದಿಸಲಿಲ್ಲ. ಈ ಪಟ್ಟಿಯಲ್ಲಿ ಸುರೇಶ್ ರೈನಾ ಹೆಸರು ಕೂಡ ಮುಂಚೂಣಿಯಲ್ಲಿದೆ. ಆದರೆ ಸಿಎಸ್​ಕೆ ತಂಡವು ಹಲವು ಹಿರಿಯ ಆಟಗಾರರನ್ನು ಖರೀದಿಸಿದರೂ, ರೈನಾ ಅವರ ಖರೀದಿಗೆ ಯಾವುದೇ ಆಸಕ್ತಿ ತೋರಲಿಲ್ಲ. ತಂಡದ ಸ್ಟಾರ್ ಆಟಗಾರನಾಗಿ ಗುರುತಿಸಿಕೊಂಡಿದ್ದ ರೈನಾರನ್ನು ಸಿಎಸ್​ಕೆ ಖರೀದಿಸದಿರುವುದಕ್ಕೆ ಅಭಿಮಾನಿಗಳು ಕೂಡ ಅಚ್ಚರಿಗೊಂಡಿದ್ದರು. ಇದೀಗ ಸುರೇಶ್ ರೈನಾ ಅವರನ್ನು ಯಾಕಾಗಿ ಕೈಬಿಡಲಾಗಿದೆ ಎಂಬುದಕ್ಕೆ ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಅವರು ಸ್ಪಷ್ಟನೆ ನೀಡಿದ್ದಾರೆ.

ರೈನಾ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು. ಈ ಲೀಗ್‌ನಲ್ಲಿ 205 ಪಂದ್ಯಗಳನ್ನು ಆಡಿರುವ ಅವರು 5528 ರನ್ ಗಳಿಸಿದ್ದಾರೆ. ಅವರು ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಇನ್ನು ರೈನಾ ಚೆನ್ನೈ ಪರ 4678 ರನ್ ಗಳಿಸುವ ಮೂಲಕ ಅತೀ ಹೆಚ್ಚು ರನ್​ ಕಲೆಹಾಕಿದ ಆಟಗಾರ ಎನಿಸಿಕೊಂಡಿದ್ದಾರೆ. ಇದಾಗ್ಯೂ ರೈನಾ ಅವರನ್ನು ಕೈ ಬಿಡಲು ಮುಖ್ಯ ಕಾರಣ ತಂಡದ ಸಂಯೋಜನೆ ಎಂದಿದ್ದಾರೆ ಕಾಶಿ ವಿಶ್ವನಾಥನ್.

ನಾವು ಹರಾಜಿನಲ್ಲಿ ಆಟಗಾರರನ್ನು ಆಯ್ಕೆ ಮಾಡಿದಾಗ ತಂಡದ ಸಂಯೋಜನೆ ಮತ್ತು ಫಾರ್ಮ್ ಅನ್ನು ಗಮನದಲ್ಲಿಟ್ಟುಕೊಂಡಿದ್ದೇವೆ. ರೈನಾ ಕಳೆದ 12 ವರ್ಷಗಳಿಂದ ಸಿಎಸ್‌ಕೆಗಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ನಿಸ್ಸಂಶಯವಾಗಿ, ನಾವು ರೈನಾ ಅವರನ್ನು ತೆಗೆದುಕೊಳ್ಳುತ್ತಿಲ್ಲ ಎಂಬುದು ನಮಗೆ ಕಷ್ಟಕರವಾಗಿತ್ತು. ಆದರೆ ಅದೇ ಸಮಯದಲ್ಲಿ ತಂಡದ ಸಂಯೋಜನೆಯು ಫಾರ್ಮ್ ಮತ್ತು ಯಾವ ರೀತಿಯ ತಂಡವನ್ನು ಬಯಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳಬೇಕು. ಈ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು, ಅವರು ತಂಡದಲ್ಲಿ ಸರಿಹೊಂದುವುದಿಲ್ಲ ಎಂದು ನಾವು ಭಾವಿಸಿದ್ದೇವೆ. ಹೀಗಾಗಿ ಸುರೇಶ್ ರೈನಾ ಅವರನ್ನು ಖರೀದಿಸಿಲ್ಲ ಎಂದು ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಅವರು ಸ್ಪಷ್ಟನೆ ನೀಡಿದ್ದಾರೆ.

ಇದೇ ವೇಳೆ ಮತ್ತೋರ್ವ ಯಶಸ್ವಿ ಬ್ಯಾಟ್ಸ್‌ಮನ್ ಫಾಫ್ ಡು ಪ್ಲೆಸಿಸ್ ಅವರಿಗಾಗಿ ಬಿಡ್ಡಿಂಗ್ ನಡೆಸದ ಬಗ್ಗೆ ಮಾತನಾಡಿದ ಕಾಶಿ ವಿಶ್ವನಾಥನ್, ನಾವು ಫಾಫ್ ಅವರನ್ನು ಕಳೆದುಕೊಂಡಿದ್ದೇವೆ. ಕಳೆದ ದಶಕದಿಂದ ಫಾಫ್ ನಮ್ಮೊಂದಿಗಿದ್ದರು. ಅದು ಹರಾಜಿನ ಪ್ರಕ್ರಿಯೆ ಮತ್ತು ಡೈನಾಮಿಕ್ಸ್. ಕೆಲವೊಮ್ಮೆ ನಾವು ಬಯಸಿದ ಆಟಗಾರರು ನಮ್ಮ ಮೊತ್ತಕ್ಕೆ ಸಿಗಬೇಕೆಂದಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: IPL 2022 ನಲ್ಲಿ ಕೋಟಿ ಸಿಗುತ್ತಿದ್ದಂತೆ ಪಾಕಿಸ್ತಾನ ಸೂಪರ್ ಲೀಗ್ ತೊರೆದ ಸ್ಟಾರ್ ಆಟಗಾರ

ಇದನ್ನೂ ಓದಿ: IPL 2022: RCB ತಂಡ ಕಟ್ಟಿದೆ…ಆದರೆ ಆರಂಭಿಕ ಯಾರು ಎಂಬುದೇ ಈಗ ಪ್ರಶ್ನೆ..?

ಇದನ್ನೂ ಓದಿ: IPL 2022: RCB ತಂಡದಲ್ಲಿ ಇಬ್ಬರು ಕನ್ನಡಿಗರು..! 

(Csk ceo Kasi Viswanath reveals why suresh raina is not picked up in ipl mega auction)

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ