AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ಕಾರಣ CSK ತಂಡಕ್ಕೆ ಕೋಚ್ ಆಗಲು ಹಿಂದೇಟು!

Chennai Super Kings: ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 14 ಪಂದ್ಯಗಳನ್ನಾಡಿದೆ. ಈ ಹದಿನಾಲ್ಕು ಮ್ಯಾಚ್​ಗಳಲ್ಲಿ ಗೆದ್ದಿರುವುದು ಕೇವಲ 6 ಪಂದ್ಯಗಳಲ್ಲಿ ಮಾತ್ರ. ಅಂದರೆ ಕೇವಲ 12 ಅಂಕಗಳನ್ನು ಮಾತ್ರ ಪಡೆದುಕೊಂಡಿದೆ. ಈ ಅಂಕಗಳೊಂದಿಗೆ 7ನೇ ಸ್ಥಾನ ಪಡೆದಿರುವ ಸಿಎಸ್​ಕೆಗೆ ಮೇಜರ್ ಸರ್ಜರಿ ಮಾಡಲು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ.

ಧೋನಿ ಕಾರಣ CSK ತಂಡಕ್ಕೆ ಕೋಚ್ ಆಗಲು ಹಿಂದೇಟು!
Ms Dhoni
ಝಾಹಿರ್ ಯೂಸುಫ್
|

Updated on: May 23, 2026 | 1:29 PM

Share

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಸೀಸನ್ ಮುಕ್ತಾಯದ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿಯಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಸಿಕ್ಕಿದೆ. ಈ ಬದಲಾವಣೆಯೊಂದಿಗೆ ಸಿಎಸ್​ಕೆ ತಂಡದ ಕೋಚ್ ಕೂಡ ಬದಲಾಗಲಿದ್ದಾರೆ. ಅಂದರೆ ಪ್ರಸ್ತುತ ಕೋಚ್ ಸ್ಟೀಫನ್ ಫ್ಲೆಮಿಂಗ್ ಬದಲಿಗೆ ಹೊಸ ತರಬೇತುದಾರರನ್ನು ಆಯ್ಕೆ ಮಾಡಲು ಸಿಎಸ್​ಕೆ ಮ್ಯಾನೇಜ್ಮೆಂಟ್ ನಿರ್ಧರಿಸಿದೆ.  ಆದರೆ, ತಂಡಕ್ಕೆ ಹೊಸ ಮುಖ್ಯ ಕೋಚ್ ಅನ್ನು ನೇಮಕ ಮಾಡುವ ಸಿಎಸ್​ಕೆ ಮ್ಯಾನೇಜ್‌ಮೆಂಟ್ ಪ್ರಯತ್ನಕ್ಕೆ “ಧೋನಿಯ ಉಪಸ್ಥಿತಿಯೇ” ದೊಡ್ಡ ಸವಾಲಾಗಿ ಪರಿಣಮಿಸಿದೆ.

ಕೋಚ್ ಹುದ್ದೆ ಅಲಂಕರಿಸಲು ದಿಗ್ಗಜರ ಹಿಂಜರಿಕೆ!

ವರದಿಗಳ ಪ್ರಕಾರ, ಸಿಎಸ್‌ಕೆ ಮ್ಯಾನೇಜ್‌ಮೆಂಟ್ ರಾಹುಲ್ ದ್ರಾವಿಡ್ ಸೇರಿದಂತೆ ಭಾರತದ ಪ್ರಮುಖ ಹಿರಿಯ ಕೋಚ್‌ಗಳನ್ನು ಸಂಪರ್ಕಿಸಿದೆ. ಆದರೆ, ಯಾವುದೇ ಹೈ-ಪ್ರೊಫೈಲ್ ಕೋಚ್ ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಿದ್ಧರಿಲ್ಲ ಎನ್ನಲಾಗುತ್ತಿದೆ. ಇದಕ್ಕೆ ಮುಖ್ಯ ಕಾರಣಗಳು ಇಲ್ಲಿವೆ:

  • ನಿರ್ಧಾರಗಳ ಸ್ವತಂತ್ರ ಕೊರತೆಯ ಭೀತಿ: ಸಿಎಸ್‌ಕೆ ತಂಡದಲ್ಲಿ ಎಂ.ಎಸ್. ಧೋನಿ ಅವರ ಪ್ರಭಾವ ಅಪಾರವಾಗಿದೆ. ಹೊಸದಾಗಿ ಬರುವ ಕೋಚ್‌ಗಳಿಗೆ ತಮಗೆ ಬೇಕಾದಂತೆ ತಂಡವನ್ನು ಪುನರ್ರಚಿಸಲು ಅಥವಾ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಧೋನಿಯವರ ಇರುವಿಕೆ ಅಡ್ಡಿಯಾಗಬಹುದು ಎಂಬ ಆತಂಕ ಕೋಚ್‌ಗಳಲ್ಲಿದೆ.
  • ಧೋನಿ ಭವಿಷ್ಯದ ಅನಿಶ್ಚಿತತೆ: ಧೋನಿ ಮುಂದಿನ ಸೀಸನ್‌ನಲ್ಲಿ ಆಟಗಾರನಾಗಿ ಮುಂದುವರಿಯುತ್ತಾರಾ ಅಥವಾ ಮೆಂಟರ್ ಆಗಿ ಮ್ಯಾನೇಜ್‌ಮೆಂಟ್ ಸೇರುತ್ತಾರಾ ಎಂಬುದು ಇನ್ನೂ ಅಧಿಕೃತವಾಗಿಲ್ಲ. ಈ ಗೊಂದಲ ಬಗೆಹರಿಯದ ಹೊರತು ತಂಡದ ದೀರ್ಘಕಾಲದ ತಂತ್ರಗಳನ್ನು ರೂಪಿಸುವುದು ಕೋಚ್‌ಗಳಿಗೆ ಕಷ್ಟ ಸಾಧ್ಯ.

ಅಶ್ವಿನ್ ನೀಡಿದ ಹೊಸ ಟ್ವಿಸ್ಟ್!

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೋಚ್ ಆಯ್ಕೆಯೇ ದೊಡ್ಡ ಸಮಸ್ಯೆಯಾಗಿರುವುದನ್ನು ಮನಗಂಡಿರುವ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ ಸೋಷಿಯಲ್ ಮೀಡಿಯಾ ಮೂಲಕ ಆಸಕ್ತಿದಾಯಕ ಸಲಹೆಯೊಂದನ್ನು ನೀಡಿದ್ದಾರೆ.

“ಸಿಎಸ್‌ಕೆ ತಂಡ ಹೊಸ ಕೋಚ್‌ಗಾಗಿ ಹೊರಗೆ ಹುಡುಕುವ ಅಗತ್ಯವಿಲ್ಲ. ಎಂ.ಎಸ್. ಧೋನಿ ಅವರೇ ನೇರವಾಗಿ ತಂಡದ ಮುಂದಿನ ಮುಖ್ಯ ಕೋಚ್ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇದು ನಿಜವಾದಲ್ಲಿ ಸಿಎಸ್‌ಕೆಯ ಕೋಚಿಂಗ್ ಬಿಕ್ಕಟ್ಟಿಗೆ ಶಾಶ್ವತ ಪರಿಹಾರ ಸಿಕ್ಕಂತಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: 1 ಗೆಲುವು, 2 ತಂಡಗಳ ಜಯ: ಹೀಗಿದೆ ಪಂಜಾಬ್ ಕಿಂಗ್ಸ್​ ಪ್ಲೇಆಫ್ ಲೆಕ್ಕಾಚಾರ

ಮುಂದಿನ ಹಾದಿ ಏನು?

ಇಂಡಿಯನ್ ಪ್ರೀಮಿಯರ್ ಲೀಗ್ 2027 ರಲ್ಲಿ ಮಿನಿ ಹರಾಜು ನಡೆಯಲಿದೆ. ಪ್ರಸ್ತುತ ತಂಡದಲ್ಲಿರುವ ಕೆಲ ಆಟಗಾರರು ಕೈ ಬಿಟ್ಟು ಬಲಿಷ್ಠ ಪಡೆಯನ್ನು ರೂಪಿಸಬೇಕಾದ ಅನಿವಾರ್ಯತೆ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ಮುಂದಿದೆ. ಅದಕ್ಕೂ ಮುನ್ನ ಸಿಎಸ್​ಕೆ ಹೊಸ ಕೋಚ್ ಅನ್ನು ನೇಮಕ ಮಾಡಬೇಕಿದೆ.

ಅಂದರೆ, ಧೋನಿ ತಮ್ಮ ನಿವೃತ್ತಿ ಅಥವಾ ಭವಿಷ್ಯದ ನಡೆ ಕುರಿತು ನೀಡುವ ಅಂತಿಮ ನಿರ್ಧಾರದ ಮೇಲೆಯೇ ಸಿಎಸ್‌ಕೆಯ ಮುಂದಿನ ಭವಿಷ್ಯ ಮತ್ತು ಹೊಸ ಕೋಚ್ ನೇಮಕಾತಿ ಪ್ರಕ್ರಿಯೆ ಅವಲಂಬಿತವಾಗಿದೆ. ಹೀಗಾಗಿಯೇ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಕೂಡ ಮಹೇಂದ್ರ ಸಿಂಗ್ ಧೋನಿಯ ಮುಂದಿನ ನಿರ್ಧಾರವನ್ನು ಎದುರು ನೋಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು