AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದು ನೋ ಬಾಲ್: ​ಅಂಪೈರ್​ ತೀರ್ಪಿಗೆ CSK ಫ್ಯಾನ್ಸ್ ಆಕ್ರೋಶ

IPL 2025 CSK vs PBKS: ಐಪಿಎಲ್​ 2025ರ 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಗ್ಗರಿಸಿದೆ. ಮುಲ್ಲನ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 219 ರನ್​ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 201 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಪಂಜಾಬ್ ಪಡೆ 18 ರನ್​ಗಳ ಜಯ ಸಾಧಿಸಿದೆ.

ಅದು ನೋ ಬಾಲ್: ​ಅಂಪೈರ್​ ತೀರ್ಪಿಗೆ CSK ಫ್ಯಾನ್ಸ್ ಆಕ್ರೋಶ
Ms Dhoni
ಝಾಹಿರ್ ಯೂಸುಫ್
|

Updated on:Apr 09, 2025 | 12:57 PM

Share

IPL 2025: ಐಪಿಎಲ್​ನ 22ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಮುಲ್ಲನ್​ಪುರ್​ನ ಪಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ (PBKS) ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 219 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು 17.5 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿತು. ಈ ಹಂತದಲ್ಲಿ ಕಣಕ್ಕಿಳಿದ ಮಹೇಂದ್ರ ಸಿಂಗ್ ಧೋನಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು.

ಅದರಲ್ಲೂ ಲಾಕಿ ಫರ್ಗುಸನ್ ಎಸೆದ 18ನೇ ಓವರ್​ನ 5ನೇ ಮತ್ತು 6ನೇ ಎಸೆತಗಳಲ್ಲಿ  ಧೋನಿ ಭರ್ಜರಿ ಸಿಕ್ಸ್ ಸಿಡಿಸಿದ್ದರು. ಆದರೆ 6ನೇ ಎಸೆತವು ಫುಲ್ ಟಾಸ್ ಆಗಿದ್ದರಿಂದ ಫೀಲ್ಡ್ ಅಂಪೈರ್ ನೋ ಬಾಲ್​ ನೀಡಿದ್ದರು.

ಇದನ್ನೂ ಓದಿ
Image
ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾದ ಮಾಜಿ ಆಟಗಾರನ ಪುತ್ರ
Image
VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
Image
11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ
Image
MS Dhoni: ಕೇವಲ 3 ರನ್​: ಗ್ರೇಟ್​ ಫಿನಿಶರ್ ಫಿನಿಶ್..!

ಮಹೇಂದ್ರ ಸಿಂಗ್ ಧೋನಿ ಸಿಕ್ಸ್ ವಿಡಿಯೋ:

ಆದರೆ ಮೂರನೇ ಅಂಪೈರ್ ಪರಿಶೀಲನೆ ವೇಳೆ ಚೆಂಡು ಧೋನಿಯ ಸೊಂಟದ ಭಾಗಕ್ಕಿಂತ ಕೆಳಗಿಳಿನಲ್ಲಿರುವುದು ಕಂಡು ಬಂದಿದೆ. ಅದು ಸಹ 0.03 ಮಿಲಿ ಮೀಟರ್​ಗಳ ಅಂತರದಲ್ಲಿ. ಅಂದರೆ ಮಹೇಂದ್ರ ಸಿಂಗ್ ಧೋನಿ ಅವರ ಸೊಂಟದರೆಗಿನ ಎತ್ತರ 1.01 ಆಗಿತ್ತು. ಲಾಕಿ ಫರ್ಗುಸನ್ ಎಸೆದ ಚೆಂಡು 0.98 ಎತ್ತರದಲ್ಲಿತ್ತು. ಹೀಗಾಗಿ ಥರ್ಡ್​ ಅಂಪೈರ್ ನೋ ಬಾಲ್ ನೀಡಿರಲಿಲ್ಲ.

Ms Dhoni (11)

Ms Dhoni

ಮೂರನೇ ಅಂಪೈರ್​ನ ಈ ನಿರ್ಧಾರಕ್ಕೆ ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳು ಆಕ್ರೋಶಗಳನ್ನು ಹೊರಹಾಕುತ್ತಿದ್ದಾರೆ. ಅಲ್ಲದೆ ಈ ಎಸೆತವು ನೋ ಬಾಲ್ ಆಗಿದ್ದರೆ ಸಿಎಸ್​ಕೆ ತಂಡಕ್ಕೆ ಗೆಲ್ಲುವ ಅವಕಾಶಗಳು ದೊರೆಯುತ್ತಿದ್ದವು ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ ಮೂರನೇ ಅಂಪೈರ್ ನೀಡಿದ ತೀರ್ಪಿನ ವಿರುದ್ಧ ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳು ತಿರುಗಿ ನಿಂತಿದ್ದು, ಈ ಮೂಲಕ ಆಕ್ರೋಶಗಳನ್ನು ಹೊರಹಾಕುತ್ತಿದ್ದಾರೆ.

Published On - 12:57 pm, Wed, 9 April 25

ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ