AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSKಗೆ ಹೊಸ ವಿದೇಶಿ ಹೆಡ್ ಕೋಚ್: ರೇಸ್​​ನಲ್ಲಿ ನಾಲ್ವರು!

ವಿಶ್ವದ  ಶ್ರೀಮಂತ ಕ್ರಿಕೆಟ್ ಲೀಗ್ ಆದ ಐಪಿಎಲ್‌ನ 20ನೇ ಆವೃತ್ತಿ (IPL Season-20) ಆರಂಭಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ (CSK) ಪಾಳಯದಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಬರೋಬ್ಬರಿ 18 ವರ್ಷಗಳ ಕಾಲ ಸಿಎಸ್‌ಕೆ ತಂಡದ ಬೆನ್ನೆಲುಬಾಗಿ ನಿಂತು, 5 ಟ್ರೋಫಿಗಳನ್ನು ತಂದುಕೊಟ್ಟ ಹೆಡ್ ಕೋಚ್ ಸ್ಟೀಫನ್ ಫ್ಲೆಮಿಂಗ್ ಇತ್ತೀಚೆಗಷ್ಟೇ ಇಂಗ್ಲೆಂಡ್ ಟೆಸ್ಟ್ ತಂಡದ ಜವಾಬ್ದಾರಿ ವಹಿಸಿಕೊಂಡು ಸಿಎಸ್‌ಕೆಗೆ ಗುಡ್‌ಬೈ ಹೇಳಿದ್ದಾರೆ. 

CSKಗೆ ಹೊಸ ವಿದೇಶಿ ಹೆಡ್ ಕೋಚ್: ರೇಸ್​​ನಲ್ಲಿ ನಾಲ್ವರು!
Csk (Image Credit source: CSK
ಝಾಹಿರ್ ಯೂಸುಫ್
|

Updated on: Aug 11, 2026 | 7:37 AM

Share

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದ ಅತ್ಯಂತ ಯಶಸ್ವಿ ಫ್ರಾಂಚೈಸಿಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (CSK) ಮುಂಬರುವ ಐಪಿಎಲ್​ಗೂ ಮುನ್ನ ಮಹತ್ವದ ಬದಲಾವಣೆಗೆ ಸಜ್ಜಾಗಿದೆ. ಬರೋಬ್ಬರಿ 18 ವರ್ಷಗಳ ಕಾಲ ಸಿಎಸ್‌ಕೆ ತಂಡಕ್ಕೆ ಮುಖ್ಯ ತರಬೇತುದಾರರಾಗಿ ಮಾರ್ಗದರ್ಶನ ನೀಡಿ, ದಾಖಲೆಯ 5 ಐಪಿಎಲ್ ಟ್ರೋಫಿಗಳನ್ನು ತಂದುಕೊಟ್ಟಿದ್ದ ದಿಗ್ಗಜ ಹೆಡ್ ಕೋಚ್ ಸ್ಟೀಫನ್ ಫ್ಲೆಮಿಂಗ್ ಇತ್ತೀಚೆಗಷ್ಟೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸದ್ಯ ಅವರು ಇಂಗ್ಲೆಂಡ್ ಪುರುಷರ ಟೆಸ್ಟ್ ತಂಡದ ಮುಖ್ಯ ತರಬೇತುದಾರರಾಗಿ ಹೊಸ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಇದೀಗ ಫ್ಲೆಮಿಂಗ್ ನಿರ್ಗಮನದಿಂದ ತೆರವಾಗಿರುವ ಸ್ಥಾನವನ್ನು ತುಂಬಲು ಸಿಎಸ್‌ಕೆ ಮ್ಯಾನೇಜ್‌ಮೆಂಟ್ ಭರ್ಜರಿ ತಯಾರಿ ನಡೆಸುತ್ತಿದ್ದು, ಅವರ ಜಾಗಕ್ಕೆ ಮತ್ತೊಬ್ಬ ಅನುಭವಿ ವಿದೇಶಿ ತಜ್ಞರನ್ನು ಹೆಡ್ ಕೋಚ್ ಆಗಿ ನೇಮಿಸಲು ಗಂಭೀರ ಚಿಂತನೆ ನಡೆಸಿದೆ. ಮುಂದಿನ ಮಿನಿ ಹರಾಜಿಗೂ ಮುನ್ನವೇ ಸಿಎಸ್‌ಕೆ ಹೊಸ ಕೋಚ್ ಹೆಸರನ್ನು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಯಿದೆ.

ಹೊಸ ಕೋಚ್‌ಗೆ ಸಂಪೂರ್ಣ ಸ್ವಾತಂತ್ರ್ಯ:

ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಮತ್ತು ರೂಪಾ ಗುರುನಾಥ್ ಅವರು ಹೊಸ ಕೋಚ್ ಹುಡುಕಾಟದಲ್ಲಿದ್ದಾರೆ. ಈ ಮಹತ್ವದ ನಿರ್ಧಾರದಲ್ಲಿ ಮಾಜಿ ನಾಯಕ ಎಂ.ಎಸ್. ಧೋನಿ ಹಾಗೂ ಪ್ರಸ್ತುತ ನಾಯಕ ರುತುರಾಜ್ ಗಾಯಕ್ವಾಡ್ ಅವರ ಸಲಹೆಗಳನ್ನು ಪಡೆಯಲಾಗುತ್ತಿದೆ. ವಿಶೇಷವೆಂದರೆ, ಬರುವ ಹೊಸ ಮುಖ್ಯ ಕೋಚ್‌ಗೆ ತನ್ನದೇ ಆದ ಸಹಾಯಕ ಸಿಬ್ಬಂದಿಯನ್ನು ಆಯ್ಕೆ ಮಾಡಿಕೊಳ್ಳುವ ಸಂಪೂರ್ಣ ಸ್ವಾತಂತ್ರ್ಯವನ್ನು ಫ್ರಾಂಚೈಸಿ ನೀಡಲು ಮುಂದಾಗಿದೆ.

ರೇಸ್‌ನಲ್ಲಿರುವ ಪ್ರಮುಖ ವಿದೇಶಿ ದಿಗ್ಗಜರು:

ಬ್ರೆಂಡನ್ ಮೆಕಲಮ್: ಇಂಗ್ಲೆಂಡ್‌ನ ಸೀಮಿತ ಓವರ್‌ಗಳ ಕೋಚ್ ಆಗಿರುವ ಮಾಜಿ ಸಿಎಸ್‌ಕೆ ಆಟಗಾರ ಬ್ರೆಂಡನ್ ಮೆಕಲಮ್ ಸದ್ಯ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಇವರ ‘ಬಾಝ್​​ಬಾಲ್’ ತಂತ್ರ ತಂಡಕ್ಕೆ ಹೊಸ ಆಕ್ರಮಣಕಾರಿ ಶಕ್ತಿ ನೀಡಬಹುದು.

ಮೈಕೆಲ್ ಹಸ್ಸಿ: 2018 ರಿಂದ ಸಿಎಸ್‌ಕೆ ಬ್ಯಾಟಿಂಗ್ ಕೋಚ್ ಆಗಿರುವ ಹಸ್ಸಿಗೆ ತಂಡದ ಸಂಸ್ಕೃತಿ ಮತ್ತು ಆಟಗಾರರ ಸಾಮರ್ಥ್ಯದ ಬಗ್ಗೆ ಸಂಪೂರ್ಣ ಅರಿವಿದೆ.

ಅಲ್ಬಿ ಮಾರ್ಕೆಲ್: ಸಿಎಸ್‌ಕೆ ಮಾಜಿ ಆಲ್‌ರೌಂಡರ್ ಹಾಗೂ ಸದ್ಯ ಎಸ್‌ಎ20 ಲೀಗ್‌ನಲ್ಲಿ ಜೋಹಾನ್ಸ್‌ಬರ್ಗ್ ಸೂಪರ್ ಕಿಂಗ್ಸ್ ತಂಡದ ಕೋಚ್ ಆಗಿ ಯಶಸ್ವಿಯಾಗಿದ್ದಾರೆ.

ಮೈಕ್ ಹೆಸನ್: ಆರ್‌ಸಿಬಿ ಮತ್ತು ನ್ಯೂಝಿಲೆಂಡ್ ತಂಡಗಳ ಮಾಜಿ ಕೋಚ್ ಆಗಿರುವ ಇವರು ಅನುಭವದ ಆಧಾರದ ಮೇಲೆ ರೇಸ್‌ನಲ್ಲಿದ್ದಾರೆ.

ಧೋನಿ-ಫ್ಲೆಮಿಂಗ್ ಯುಗಾಂತ್ಯ:

ಸ್ಟೀಫನ್ ಫ್ಲೆಮಿಂಗ್ ಮತ್ತು ಎಂಎಸ್ ಧೋನಿ ಅವರ ಜುಗಲ್‌ಬಂದಿ ಐಪಿಎಲ್ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಯಶಸ್ಸು ತಂದುಕೊಟ್ಟಿದೆ. ಇದೀಗ ಫ್ಲೆಮಿಂಗ್ ನಿರ್ಗಮನದೊಂದಿಗೆ ಸಿಎಸ್‌ಕೆ ಪಾಳಯದಲ್ಲಿ ಒಂದು ಸುದೀರ್ಘ ಮತ್ತು ಯಶಸ್ವಿ ಅಧ್ಯಾಯ ಅಂತ್ಯಗೊಂಡಂತಾಗಿದೆ.

ಇದನ್ನೂ ಓದಿ: ಟೀಮ್ ಇಂಡಿಯಾ ಆಟಗಾರರು ಗಾಯಗೊಳ್ಳಲು IPL ಕಾರಣ!

ಮುಂಬರುವ ಐಪಿಎಲ್ 2027ರ ಮಿನಿ ಹರಾಜಿಗೂ ಮುನ್ನ ಹೊಸ ವಿದೇಶಿ ತರಬೇತುದಾರರ ಎಂಟ್ರಿಯಾಗಲಿದ್ದು, ಇದು ‘ಯೆಲ್ಲೋ ಆರ್ಮಿ’ಗೆ ಸಂಪೂರ್ಣ ಹೊಸ ರೂಪ ನೀಡುವ ಸಾಧ್ಯತೆಯಿದೆ. ಹೊಸ ಕೋಚ್ ತನ್ನದೇ ಆದ ತಂತ್ರಗಾರಿಕೆ ಮತ್ತು ಬೆಂಬಲ ಸಿಬ್ಬಂದಿಯೊಂದಿಗೆ ಚೆನ್ನೈ ಫ್ರಾಂಚೈಸಿಯನ್ನು ಮುನ್ನಡೆಸಲಿದ್ದಾರೆ. ರುತುರಾಜ್ ಗಾಯಕ್ವಾಡ್ ನಾಯಕತ್ವ ಹಾಗೂ ಹೊಸ ತರಬೇತುದಾರರ ಈ ಹೊಸ ಕಾಂಬಿನೇಷನ್ ಸಿಎಸ್‌ಕೆಗೆ ಮತ್ತಷ್ಟು ಐತಿಹಾಸಿಕ ಗೆಲುವುಗಳನ್ನು ತಂದುಕೊಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

Follow Us
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ