AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಂಪತ್ಯ ಜೀವನಕ್ಕೆ ಕಾಲಿಟ್ಟ CSK ಆಟಗಾರ..!

ಐಪಿಎಲ್ 2021 ರ ಮಿನಿ ಹರಾಜಿನಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಹರಿ ನಿಶಾಂತ್ ಅವರನ್ನು ಮೂಲ ಬೆಲೆಗೆ ಖರೀದಿಸಿತು. ಈ ಬಾರಿಯ ಐಪಿಎಲ್‌ನ ಮೆಗಾ ಹರಾಜಿನಲ್ಲಿ ಮತ್ತೊಮ್ಮೆ ಸಿಎಸ್‌ಕೆ ಅವರನ್ನು 20 ಲಕ್ಷ ರೂ ಮೂಲ ಬೆಲೆಗೆ ಖರೀದಿಸಿದೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ CSK ಆಟಗಾರ..!
C Hari Nishant
TV9 Web
| Edited By: |

Updated on: Jun 12, 2022 | 3:18 PM

Share

ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಆಟಗಾರ ಸಿ ಹರಿ ನಿಶಾಂತ್ ಗುರುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. CSK ಫ್ರಾಂಚೈಸ್ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ನವದಂಪತಿಗೆ ಅಭಿನಂದಿಸಿದೆ. ನಿಶಾಂತ್ ಇನ್ನೂ ಐಪಿಎಲ್‌ಗೆ ಪದಾರ್ಪಣೆ ಮಾಡಿಲ್ಲ. ಆದರೆ ಅವರು ದೇಶೀಯ ಕ್ರಿಕೆಟ್‌ನಲ್ಲಿ ತಮಿಳುನಾಡು ತಂಡದ ಖಾಯಂ ಸದಸ್ಯರಾಗಿದ್ದಾರೆ. ಈ ಬಾರಿ ಕೂಡ ಸಿಎಸ್​ಕೆ ತಂಡವು ಹರಿ ನಿಶಾಂತ್ ಅವರನ್ನು ಆರಂಭಿಕ ಆಟಗಾರನಾಗಿ ತಂಡಕ್ಕೆ ಆಯ್ಕೆ ಮಾಡಿಕೊಂಡಿದೆ. ಆದರೆ ತಂಡದಲ್ಲಿ ರುತುರಾಜ್ ಗಾಯಕ್ವಾಡ್ ರಾಬಿನ್ ಉತ್ತಪ್ಪ ಹಾಗೂ ಡೆವೊನ್ ಕಾನ್ವೇ ಆರಂಭಿಕರಾಗಿರುವ ಕಾರಣ ನಿಶಾಂತ್​ಗೆ ಅವಕಾಶ ಸಿಗಲಿಲ್ಲ. ಇದೀಗ ಐಪಿಎಲ್​ ಮುಕ್ತಾಯದ ಬೆನ್ನಲ್ಲೇ ಹರಿ ನಿಶಾಂತ್ ದಾಂಪತ್ಯ ಜೀವನದ ಇನಿಂಗ್ಸ್ ಆರಂಭಿಸಿದ್ದಾರೆ.

ಈ ಶುಭ ಸಮಾರಂಭದ ವೀಡಿಯೊವನ್ನು ಚೆನ್ನೈ ಸೂಪರ್ ಕಿಂಗ್ಸ್ ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದೆ. ನವದಂಪತಿಗಳಿಗೆ ಯೆಲ್ಲೊ ಆರ್ಮಿಯ ಶುಭಾಶಯ ತಿಳಿಸಿದೆ. 25 ವರ್ಷದ ಹರಿ ನಿಶಾಂತ್ 2020-21ರಲ್ಲಿ ದಿನೇಶ್ ಕಾರ್ತಿಕ್ ನಾಯಕತ್ವದಲ್ಲಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಆ ಟೂರ್ನಿಯಲ್ಲಿ 41 ರ ಸರಾಸರಿಯಲ್ಲಿ ಒಟ್ಟು 246 ರನ್ ಗಳಿಸಿದರು. ಇದಲ್ಲದೇ ಫೈನಲ್ ನಲ್ಲಿ ನಿಶಾಂತ್ 35 ರನ್ ಗಳಿಸಿ ಮಿಂಚಿದ್ದರು. ತಮಿಳುನಾಡು ಪರ ತಮ್ಮ ಬಾಲ್ಯದ ಗೆಳೆಯ ಮತ್ತು CSK ಬ್ಯಾಟ್ಸ್‌ಮನ್ ಎನ್ ಜಗದೀಸನ್ ಅವರೊಂದಿಗೆ ಅಗ್ರ ಕ್ರಮಾಂಕದಲ್ಲಿ ಅದ್ಭುತವಾಗಿ ಬ್ಯಾಟ್ ಮಾಡುತ್ತಾರೆ.

ಐಪಿಎಲ್ 2021 ರ ಮಿನಿ ಹರಾಜಿನಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಹರಿ ನಿಶಾಂತ್ ಅವರನ್ನು ಮೂಲ ಬೆಲೆಗೆ ಖರೀದಿಸಿತು. ಈ ಬಾರಿಯ ಐಪಿಎಲ್‌ನ ಮೆಗಾ ಹರಾಜಿನಲ್ಲಿ ಮತ್ತೊಮ್ಮೆ ಸಿಎಸ್‌ಕೆ ಅವರನ್ನು 20 ಲಕ್ಷ ರೂ ಮೂಲ ಬೆಲೆಗೆ ಖರೀದಿಸಿದೆ. ಆದರೆ ಸಿಎಸ್​ಕೆ ಪರ ಪದಾರ್ಪಣೆ ಮಾಡುವ ಅವಕಾಶವನ್ನು ಯುವ ಆಟಗಾರ ಎದುರು ನೋಡುತ್ತಿದ್ದಾರೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ