AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಪತ್ನಿಗೆ ಹೆದರಿ ಸಿಎಸ್‌ಕೆ ಬದಲು ಆರ್‌ಸಿಬಿ ಜೆರ್ಸಿ ತೊಟ್ಟ ಪತಿ! ಲವ್ ಈಸ್ ಕಲರ್ ಬ್ಲೈಂಡ್ ಎಂದ ಧೋನಿ ಪಡೆ

IPL 2021: ಆರ್‌ಸಿಬಿ ಟಿ-ಶರ್ಟ್ ಧರಿಸಿದ್ದ ವ್ಯಕ್ತಿ ಹಿಡಿದಿದ್ದ ಪ್ಲೆಕಾರ್ಡ್‌ನಲ್ಲಿ, ಚೆನ್ನೈ ಸೂಪರ್ ಕಿಂಗ್ಸ್‌ನ ಟೀ ಶರ್ಟ್ ಧರಿಸಲು ನನ್ನ ಪತ್ನಿ ನನಗೆ ಅವಕಾಶ ನೀಡುತ್ತಿಲ್ಲ ಎಂದು ಬರೆದಿತ್ತು.

IPL 2021: ಪತ್ನಿಗೆ ಹೆದರಿ ಸಿಎಸ್‌ಕೆ ಬದಲು ಆರ್‌ಸಿಬಿ ಜೆರ್ಸಿ ತೊಟ್ಟ ಪತಿ! ಲವ್ ಈಸ್ ಕಲರ್ ಬ್ಲೈಂಡ್ ಎಂದ ಧೋನಿ ಪಡೆ
ಕೊಹ್ಲಿ- ದೋನಿ
TV9 Web
| Edited By: |

Updated on:Sep 26, 2021 | 3:36 PM

Share

ಐಪಿಎಲ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಒಮ್ಮೆಯೂ ಪ್ರಶಸ್ತಿಯನ್ನು ಗೆಲ್ಲದೇ ಇರಬಹುದು, ಆದರೆ ಇದು ಅವರ ಅಭಿಮಾನಿಗಳ ಪ್ರೀತಿಯನ್ನು ಎಂದಿಗೂ ಕಡಿಮೆ ಮಾಡಿಲ್ಲ. ಅವರು ಪ್ರತಿ ಕ್ರೀಡಾ ಋತುವಿನಲ್ಲಿ ತಮ್ಮ ತಂಡದ ಗೆಲುವನ್ನು ನಿರೀಕ್ಷಿಸುತ್ತಾ ಕುಳಿತುಕೊಳ್ಳುತ್ತಾರೆ ಮತ್ತು ಅದೇ ಉತ್ಸಾಹದಿಂದ ತಂಡವನ್ನು ಹುರಿದುಂಬಿಸುತ್ತಾರೆ. ಅದು ಬೆಂಗಳೂರಿನ್ನಲಾಗಲಿ ಅಥವಾ ಮುಂಬೈಯಾಗಲಿ ಅಥವಾ ದುಬೈ ಕ್ರೀಡಾಂಗಣವಾಗಲಿ, ಆರ್‌ಸಿಬಿ ಅಭಿಮಾನಿಗಳು ತಮ್ಮ ತಂಡವನ್ನು ಹುರಿದುಂಬಿಸಲು ಎಲ್ಲಿಗೆ ಬೇಕಾದರೂ ಹೋಗುತ್ತಾರೆ.

ಕೊರೊನಾದಿಂದ ಮುಂದೂಡಲ್ಪಟ್ಟ ನಂತರ, ಈಗ ಎರಡನೇ ಹಂತದ ಐಪಿಎಲ್ 2021 ಯುಎಇಯಲ್ಲಿ ನಡೆಯುತ್ತಿದೆ. ಇಲ್ಲಿ ಅಭಿಮಾನಿಗಳಿಗೆ ಕ್ರೀಡಾಂಗಣಕ್ಕೆ ಬರಲು ಅವಕಾಶ ನೀಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಅಭಿಮಾನಿಗಳು ತಮ್ಮ ನೆಚ್ಚಿನ ತಂಡವನ್ನು ಹುರಿದುಂಬಿಸಲು ಕ್ರೀಡಾಂಗಣಕ್ಕೆ ಬರುತ್ತಾರೆ. ಶುಕ್ರವಾರ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ಒಂದು ವಿಚಿತ್ರ ಹಾಗೂ ತಮಾಷದಾಯಕ ಘಟನೆಯೊಂದು ಸಂಭವಿಸಿದೆ. ಇದು ಆರ್‌ಸಿಬಿಯ ಅಭಿಮಾನಿಗಳು ಅತ್ಯಂತ ನಿಷ್ಠಾವಂತರು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಪತ್ನಿಗೆ ಹೆದರಿದ ಪತಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ಶುಕ್ರವಾರ ನಡೆಯಿತು. ಆ ಪಂದ್ಯದ ಸಮಯದಲ್ಲಿ, ಕೈಯಲ್ಲಿ ಪ್ಲೆಕಾರ್ಡ್ ಹಿಡಿದಿದ್ದ ವ್ಯಕ್ತಿಯ ಮೇಲೆ ಕ್ಯಾಮೆರಾದ ಕಣ್ಣು ಬಿದ್ದಿತು. ಆ ವ್ಯಕ್ತಿ ಆರ್‌ಸಿಬಿ ಟಿ-ಶರ್ಟ್ ಧರಿಸಿದ್ದ. ಆತ ಹಿಡಿದಿದ್ದ ಪ್ಲೆಕಾರ್ಡ್‌ನಲ್ಲಿ, ಚೆನ್ನೈ ಸೂಪರ್ ಕಿಂಗ್ಸ್‌ನ ಟೀ ಶರ್ಟ್ ಧರಿಸಲು ನನ್ನ ಪತ್ನಿ ನನಗೆ ಅವಕಾಶ ನೀಡುತ್ತಿಲ್ಲ ಎಂದು ಬರೆದಿತ್ತು. ಇದರ ಮೂಲ ಅರ್ಥವೆಂದರೆ, ಆತನ ಪತ್ನಿ ಆರ್‌ಸಿಬಿಯ ಅಭಿಮಾನಿ ಇರಬೇಕು. ಅದಕ್ಕಾಗಿಯೇ ಆಕೆ ತನ್ನ ಪತಿಗೆ ಆರ್‌ಸಿಬಿಯ ಟಿ-ಶರ್ಟ್ ಧರಿಸಬೇಕು ಎಂದು ತಾಕೀತು ಮಾಡಿದ್ದಾಳೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ. ಈಗ ಈ ಚಿತ್ರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಚೆನ್ನೈ ಸೂಪರ್ ಕಿಂಗ್ಸ್ ಆ ಚಿತ್ರಕ್ಕೆ, ಪ್ರೀತಿಗೆ ಯಾವುದೇ ಬಣ್ಣ ಕಾಣುವುದಿಲ್ಲ ಎಂದು ತಲೆ ಬರಹ ನೀಡಿದೆ. ಈ ಫೋಟೋದಿಂದಾಗಿ ಈ ದಂಪತಿಗಳು ಸಖತ್ ಚರ್ಚೆಯಲ್ಲಿದ್ದಾರೆ. ಇದರ ಜೊತೆಗೆ ಆರ್‌ಸಿಬಿಯ ಅಭಿಮಾನಿಗಳ ನಿಷ್ಠೆ ಮತ್ತೊಮ್ಮೆ ಸಾಭೀತಾದಂತ್ತಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯವನ್ನು ಗೆದ್ದಿತು ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಆರು ವಿಕೆಟ್‌ಗಳಿಂದ ಆರ್‌ಸಿಬಿಯನ್ನು ಸೋಲಿಸಿತು. ರಿತುರಾಜ್ ಗಾಯಕವಾಡ್ (38) ಮತ್ತು ಫಾಫ್ ಡು ಪ್ಲೆಸಿಸ್ (31) ಭರ್ಜರಿ ಅರ್ಧಶತಕ ಪಾಲುದಾರಿಕೆ ಮತ್ತು ಡ್ವೇನ್ ಬ್ರಾವೊ (3 ವಿಕೆಟ್) ಅವರ ಅತ್ಯುತ್ತಮ ಬೌಲಿಂಗ್ ನೆರವಿನಿಂದ ಐಪಿಎಲ್ 2021 ರ 35 ನೇ ಪಂದ್ಯದಲ್ಲಿ ಚೆನ್ನೈ ತಂಡವನ್ನು 6 ವಿಕೆಟ್ ಗಳಿಂದ ಸೋಲಿಸಿತು. ಟಾಸ್ ಸೋತ ನಂತರ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ಆರು ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿತು. ಪ್ರತಿಯಾಗಿ, ಚೆನ್ನೈ ಈ ಪಂದ್ಯವನ್ನು 11 ಎಸೆತಗಳು ಬಾಕಿ ಇರುವಂತೆ ಗೆದ್ದಿತು. ಈ ಗೆಲುವಿನೊಂದಿಗೆ ಧೋನಿಯ ಸಿಎಸ್ ಕೆ 14 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ತಲುಪಿತ್ತು.(ಈಗ 2ನೇ ಸ್ಥಾನಕ್ಕೆ ಕುಸಿದಿದೆ)

Published On - 3:33 pm, Sun, 26 September 21

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ