AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಪತ್ನಿಗೆ ಹೆದರಿ ಸಿಎಸ್‌ಕೆ ಬದಲು ಆರ್‌ಸಿಬಿ ಜೆರ್ಸಿ ತೊಟ್ಟ ಪತಿ! ಲವ್ ಈಸ್ ಕಲರ್ ಬ್ಲೈಂಡ್ ಎಂದ ಧೋನಿ ಪಡೆ

IPL 2021: ಆರ್‌ಸಿಬಿ ಟಿ-ಶರ್ಟ್ ಧರಿಸಿದ್ದ ವ್ಯಕ್ತಿ ಹಿಡಿದಿದ್ದ ಪ್ಲೆಕಾರ್ಡ್‌ನಲ್ಲಿ, ಚೆನ್ನೈ ಸೂಪರ್ ಕಿಂಗ್ಸ್‌ನ ಟೀ ಶರ್ಟ್ ಧರಿಸಲು ನನ್ನ ಪತ್ನಿ ನನಗೆ ಅವಕಾಶ ನೀಡುತ್ತಿಲ್ಲ ಎಂದು ಬರೆದಿತ್ತು.

IPL 2021: ಪತ್ನಿಗೆ ಹೆದರಿ ಸಿಎಸ್‌ಕೆ ಬದಲು ಆರ್‌ಸಿಬಿ ಜೆರ್ಸಿ ತೊಟ್ಟ ಪತಿ! ಲವ್ ಈಸ್ ಕಲರ್ ಬ್ಲೈಂಡ್ ಎಂದ ಧೋನಿ ಪಡೆ
ಕೊಹ್ಲಿ- ದೋನಿ
TV9 Web
| Updated By: ಪೃಥ್ವಿಶಂಕರ|

Updated on:Sep 26, 2021 | 3:36 PM

Share

ಐಪಿಎಲ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಒಮ್ಮೆಯೂ ಪ್ರಶಸ್ತಿಯನ್ನು ಗೆಲ್ಲದೇ ಇರಬಹುದು, ಆದರೆ ಇದು ಅವರ ಅಭಿಮಾನಿಗಳ ಪ್ರೀತಿಯನ್ನು ಎಂದಿಗೂ ಕಡಿಮೆ ಮಾಡಿಲ್ಲ. ಅವರು ಪ್ರತಿ ಕ್ರೀಡಾ ಋತುವಿನಲ್ಲಿ ತಮ್ಮ ತಂಡದ ಗೆಲುವನ್ನು ನಿರೀಕ್ಷಿಸುತ್ತಾ ಕುಳಿತುಕೊಳ್ಳುತ್ತಾರೆ ಮತ್ತು ಅದೇ ಉತ್ಸಾಹದಿಂದ ತಂಡವನ್ನು ಹುರಿದುಂಬಿಸುತ್ತಾರೆ. ಅದು ಬೆಂಗಳೂರಿನ್ನಲಾಗಲಿ ಅಥವಾ ಮುಂಬೈಯಾಗಲಿ ಅಥವಾ ದುಬೈ ಕ್ರೀಡಾಂಗಣವಾಗಲಿ, ಆರ್‌ಸಿಬಿ ಅಭಿಮಾನಿಗಳು ತಮ್ಮ ತಂಡವನ್ನು ಹುರಿದುಂಬಿಸಲು ಎಲ್ಲಿಗೆ ಬೇಕಾದರೂ ಹೋಗುತ್ತಾರೆ.

ಕೊರೊನಾದಿಂದ ಮುಂದೂಡಲ್ಪಟ್ಟ ನಂತರ, ಈಗ ಎರಡನೇ ಹಂತದ ಐಪಿಎಲ್ 2021 ಯುಎಇಯಲ್ಲಿ ನಡೆಯುತ್ತಿದೆ. ಇಲ್ಲಿ ಅಭಿಮಾನಿಗಳಿಗೆ ಕ್ರೀಡಾಂಗಣಕ್ಕೆ ಬರಲು ಅವಕಾಶ ನೀಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಅಭಿಮಾನಿಗಳು ತಮ್ಮ ನೆಚ್ಚಿನ ತಂಡವನ್ನು ಹುರಿದುಂಬಿಸಲು ಕ್ರೀಡಾಂಗಣಕ್ಕೆ ಬರುತ್ತಾರೆ. ಶುಕ್ರವಾರ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ಒಂದು ವಿಚಿತ್ರ ಹಾಗೂ ತಮಾಷದಾಯಕ ಘಟನೆಯೊಂದು ಸಂಭವಿಸಿದೆ. ಇದು ಆರ್‌ಸಿಬಿಯ ಅಭಿಮಾನಿಗಳು ಅತ್ಯಂತ ನಿಷ್ಠಾವಂತರು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಪತ್ನಿಗೆ ಹೆದರಿದ ಪತಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ಶುಕ್ರವಾರ ನಡೆಯಿತು. ಆ ಪಂದ್ಯದ ಸಮಯದಲ್ಲಿ, ಕೈಯಲ್ಲಿ ಪ್ಲೆಕಾರ್ಡ್ ಹಿಡಿದಿದ್ದ ವ್ಯಕ್ತಿಯ ಮೇಲೆ ಕ್ಯಾಮೆರಾದ ಕಣ್ಣು ಬಿದ್ದಿತು. ಆ ವ್ಯಕ್ತಿ ಆರ್‌ಸಿಬಿ ಟಿ-ಶರ್ಟ್ ಧರಿಸಿದ್ದ. ಆತ ಹಿಡಿದಿದ್ದ ಪ್ಲೆಕಾರ್ಡ್‌ನಲ್ಲಿ, ಚೆನ್ನೈ ಸೂಪರ್ ಕಿಂಗ್ಸ್‌ನ ಟೀ ಶರ್ಟ್ ಧರಿಸಲು ನನ್ನ ಪತ್ನಿ ನನಗೆ ಅವಕಾಶ ನೀಡುತ್ತಿಲ್ಲ ಎಂದು ಬರೆದಿತ್ತು. ಇದರ ಮೂಲ ಅರ್ಥವೆಂದರೆ, ಆತನ ಪತ್ನಿ ಆರ್‌ಸಿಬಿಯ ಅಭಿಮಾನಿ ಇರಬೇಕು. ಅದಕ್ಕಾಗಿಯೇ ಆಕೆ ತನ್ನ ಪತಿಗೆ ಆರ್‌ಸಿಬಿಯ ಟಿ-ಶರ್ಟ್ ಧರಿಸಬೇಕು ಎಂದು ತಾಕೀತು ಮಾಡಿದ್ದಾಳೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ. ಈಗ ಈ ಚಿತ್ರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಚೆನ್ನೈ ಸೂಪರ್ ಕಿಂಗ್ಸ್ ಆ ಚಿತ್ರಕ್ಕೆ, ಪ್ರೀತಿಗೆ ಯಾವುದೇ ಬಣ್ಣ ಕಾಣುವುದಿಲ್ಲ ಎಂದು ತಲೆ ಬರಹ ನೀಡಿದೆ. ಈ ಫೋಟೋದಿಂದಾಗಿ ಈ ದಂಪತಿಗಳು ಸಖತ್ ಚರ್ಚೆಯಲ್ಲಿದ್ದಾರೆ. ಇದರ ಜೊತೆಗೆ ಆರ್‌ಸಿಬಿಯ ಅಭಿಮಾನಿಗಳ ನಿಷ್ಠೆ ಮತ್ತೊಮ್ಮೆ ಸಾಭೀತಾದಂತ್ತಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯವನ್ನು ಗೆದ್ದಿತು ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಆರು ವಿಕೆಟ್‌ಗಳಿಂದ ಆರ್‌ಸಿಬಿಯನ್ನು ಸೋಲಿಸಿತು. ರಿತುರಾಜ್ ಗಾಯಕವಾಡ್ (38) ಮತ್ತು ಫಾಫ್ ಡು ಪ್ಲೆಸಿಸ್ (31) ಭರ್ಜರಿ ಅರ್ಧಶತಕ ಪಾಲುದಾರಿಕೆ ಮತ್ತು ಡ್ವೇನ್ ಬ್ರಾವೊ (3 ವಿಕೆಟ್) ಅವರ ಅತ್ಯುತ್ತಮ ಬೌಲಿಂಗ್ ನೆರವಿನಿಂದ ಐಪಿಎಲ್ 2021 ರ 35 ನೇ ಪಂದ್ಯದಲ್ಲಿ ಚೆನ್ನೈ ತಂಡವನ್ನು 6 ವಿಕೆಟ್ ಗಳಿಂದ ಸೋಲಿಸಿತು. ಟಾಸ್ ಸೋತ ನಂತರ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ಆರು ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿತು. ಪ್ರತಿಯಾಗಿ, ಚೆನ್ನೈ ಈ ಪಂದ್ಯವನ್ನು 11 ಎಸೆತಗಳು ಬಾಕಿ ಇರುವಂತೆ ಗೆದ್ದಿತು. ಈ ಗೆಲುವಿನೊಂದಿಗೆ ಧೋನಿಯ ಸಿಎಸ್ ಕೆ 14 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ತಲುಪಿತ್ತು.(ಈಗ 2ನೇ ಸ್ಥಾನಕ್ಕೆ ಕುಸಿದಿದೆ)

Published On - 3:33 pm, Sun, 26 September 21

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು