AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ನೋಡುಗರ ಕಣ್ಣು ಕುಕ್ಕುತ್ತಿದೆ ಧೋನಿಯ ಹೊಸ ಲುಕ್! ಮೀಸೆ ತಿರುವಿ ಸಾಮಾಜಿಕ ಅರಿವು ಮೂಡಿಸಿದ ಮಹೀ

MS Dhoni: ಈಗ ಧೋನಿ ನಾಯಕತ್ವದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡವು ಧೋನಿಯ ಹೊಸ ಲುಕ್​ನ ಫೋಟೋವನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ.

MS Dhoni: ನೋಡುಗರ ಕಣ್ಣು ಕುಕ್ಕುತ್ತಿದೆ ಧೋನಿಯ ಹೊಸ ಲುಕ್! ಮೀಸೆ ತಿರುವಿ ಸಾಮಾಜಿಕ ಅರಿವು ಮೂಡಿಸಿದ ಮಹೀ
ಎಂ ಎಸ್ ಧೋನಿ
ಪೃಥ್ವಿಶಂಕರ
|

Updated on: Jun 26, 2021 | 2:50 PM

Share

ಭಾರತಕ್ಕಾಗಿ ಎಲ್ಲಾ ಐಸಿಸಿ ಟ್ರೋಫಿಗಳನ್ನು ಗೆದ್ದಿರುವ ಭಾರತದ ಅತ್ಯಂತ ಯಶಸ್ವಿ ನಾಯಕ ಎಂ.ಎಸ್. ಧೋನಿ. ಎಲ್ಲಾ ಭಾರತೀಯರ ಅಚ್ಚುಮೆಚ್ಚಿನ ಕ್ರಿಕೆಟಿಗ ಎಂಬುದರಲ್ಲಿ ಎರಡು ಮಾತಿಲ್ಲ. ಧೋನಿ ಮಾಡುವ ಎಲ್ಲ ಚಟುವಟಿಕೆಯೂ ತಕ್ಷಣವೇ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತದೆ. ಧೋನಿಯ ಹೊಸ ನೋಟ ಅಥವಾ ಅವರು ತೆಗೆದುಕೊಂಡ ಹೊಸ ಬೈಕು ಇರಲಿ ಇವೆಲ್ಲವೂ ಬಾರೀ ಸುದ್ದಿಯಾಗುತ್ತವೆ. ಐಪಿಎಲ್ ರದ್ದಾದ ನಂತರ ಧೋನಿ ಪ್ರಸ್ತುತ ಕುಟುಂಬದೊಂದಿಗೆ ಶಿಮ್ಲಾದಲ್ಲಿ ರಜೆಯಲ್ಲಿದ್ದಾರೆ. ಈ ಬಾರಿ ಧೋನಿ ಮೀಸೆ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಕೆಲವು ದಿನಗಳ ಹಿಂದೆ ಧೋನಿ ತನ್ನ ಮಗಳ ಜೊತೆಗಿನ ಫೋಟೋಗಳು ವೈರಲ್ ಆಗಿದ್ದವು.

ಗಿಡಗಳನ್ನು ನೆಡಿ ಮತ್ತು ಮರಗಳನ್ನು ಕಾಪಾಡಿ ಈಗ ಧೋನಿ ನಾಯಕತ್ವದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡವು ಧೋನಿಯ ಹೊಸ ಲುಕ್​ನ ಫೋಟೋವನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ. ಏತನ್ಮಧ್ಯೆ, ಈ ಫೋಟೋಕ್ಕೆ ನೆಟಿಜನ್‌ಗಳು ವಿಭಿನ್ನ ಕಾಮೆಂಟ್‌ಗಳನ್ನು ನೀಡುತ್ತಿದ್ದಾರೆ ಮತ್ತು ಪ್ರತಿಯೊಬ್ಬರೂ ತಮ್ಮ ಅಭಿಪ್ರಾಯವನ್ನು ಹೊರ ಹಾಕುತ್ತಿದ್ದಾರೆ. ಸಿಎಸ್​ಕೆ ಹಮಚಿಕೊಂಡಿರುವ ಧೋನಿ ಮೀಸೆ ಬಿಟ್ಟಿರುವ ಈ ಫೋಟೋದಲ್ಲಿ ಮರದಿಂದ ತಯಾರಾದ ಹೋಟೆಲ್ ಬಳಿ ನಿಂತಿರುವ ಧೋನಿ ನಿಂತಿದ್ದಾರೆ. ಹಾಗೆಯೇ ಒಂದು ಮರದ ತುಂಡಿನ ಮೇಲೆ ಗಿಡಗಳನ್ನು ನೆಡಿ ಮತ್ತು ಮರಗಳನ್ನು ಕಾಪಾಡಿ ಎಂದು ಬರೆಯಲಾಗಿದೆ.

ಉಳಿದ ಐಪಿಎಲ್‌ಗಾಗಿ ಕ್ರಿಕೆಟಿಗರು ಉತ್ಸುಕರಾಗಿದ್ದಾರೆ ಕೊರೊನಾ ಬಿಕ್ಕಟ್ಟಿನಿಂದ ಮುಂದೂಡಲ್ಪಟ್ಟ ಐಪಿಎಲ್ 2021 ಸೆಪ್ಟೆಂಬರ್-ಅಕ್ಟೋಬರ್ ನಡುವೆ ಯುಎಇಯಲ್ಲಿ ನಡೆಯಲಿದೆ ಎಂದು ಬಿಸಿಸಿಐ ಕೆಲವು ದಿನಗಳ ಹಿಂದೆ ತಿಳಿಸಿದೆ. ಏತನ್ಮಧ್ಯೆ, ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿರುವುದರಿಂದ, ಅಭಿಮಾನಿಗಳು ಧೋನಿ ಆಡುವದನ್ನು ನೋಡುವ ಏಕೈಕ ಆಯ್ಕೆ ಐಪಿಎಲ್ ಆಗಿದೆ.

ಇದನ್ನೂ ಓದಿ:ಎಮ್ ಎಸ್​ ಧೋನಿಯನ್ನು ತಬ್ಬಿ ನಿಂತ ಮಗಳು; ಕ್ಯಾಮರಾ ಮುಂದೆ ಝೀವಾ ಕೊಟ್ಟ ಸ್ಮೈಲ್​ ನೋಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್