AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಈ ಬಾರಿ ಚೆನ್ನೈ ಸೂಪರ್ ಕಿವೀಸ್..!

CSK squad IPL 2024: ಈ ಬಾರಿಯ ಹರಾಜಿನ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಖರೀದಿಸಿದ ಮೂರನೇ ವಿದೇಶಿ ಆಟಗಾರ ಮುಸ್ತಫಿಜುರ್ ರೆಹಮಾನ್. ಬಾಂಗ್ಲಾದೇಶ್ ತಂಡದ ಎಡಗೈ ವೇಗಿಯನ್ನು ಸಿಎಸ್​ಕೆ 2 ಕೋಟಿ ರೂ. ಮೂಲ ಬೆಲೆಗೆ ಖರೀದಿಸಿದೆ. ಹಾಗೆಯೇ ಟೀಮ್ ಇಂಡಿಯಾ ಆಲ್​ರೌಂಡರ್ ಶಾರ್ದೂಲ್ ಠಾಕೂರ್ ಅವರನ್ನು 4 ಕೋಟಿ ರೂ. ನೀಡಿ ಆಯ್ಕೆ ಮಾಡಿಕೊಂಡಿದೆ.

IPL 2024: ಈ ಬಾರಿ ಚೆನ್ನೈ ಸೂಪರ್ ಕಿವೀಸ್..!
CSK
TV9 Web
| Edited By: |

Updated on: Dec 20, 2023 | 11:13 AM

Share

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಬಲಿಷ್ಠ ಪಡೆಯನ್ನೇ ರೂಪಿಸಿದೆ. ಹರಾಜಿಗೂ ಮುನ್ನ 19 ಆಟಗಾರರನ್ನು ಉಳಿಸಿಕೊಂಡಿದ್ದ ಸಿಎಸ್​ಕೆ ಆಕ್ಷನ್ ಮೂಲಕ 6 ಆಟಗಾರರನ್ನು ಖರೀದಿಸಿದೆ. ವಿಶೇಷ ಎಂದರೆ ಈ ಆರು ಆಟಗಾರರಲ್ಲಿ ಇಬ್ಬರು ನ್ಯೂಝಿಲೆಂಡ್ ಕ್ರಿಕೆಟಿಗರು. ನ್ಯೂಝಿಲೆಂಡ್ ತಂಡದ ಮಧ್ಯಮ ಕ್ರಮಾಂಕದ ಬಲಿಷ್ಠ ಬ್ಯಾಟರ್ ಡೇರಿಲ್ ಮಿಚೆಲ್ ಅವರನ್ನು ಬರೋಬ್ಬರಿ 14 ಕೋಟಿ ರೂ. ನೀಡಿ ಸಿಎಸ್​ಕೆ ಖರೀದಿಸಿದೆ. ಹಾಗೆಯೇ ಕಿವೀಸ್ ಪಡೆಯ ಯುವ ಆಲ್​ರೌಂಡರ್ ಆಟಗಾರ ರಚಿನ್ ರವೀಂದ್ರ ಅವರನ್ನು 1.8 ಕೋಟಿಗೆ ತಮ್ಮದಾಗಿಸಿಕೊಂಡಿದ್ದಾರೆ.

ಇದರೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್​ ತಂಡದಲ್ಲಿ ನಾಲ್ವರು ನ್ಯೂಝಿಲೆಂಡ್ ಆಟಗಾರರು ಸೇರ್ಪಡೆಯಾದಂತಾಗಿದೆ. ಇದಕ್ಕೂ ಮುನ್ನ ಸಿಎಸ್​ಕೆ ತಂಡವು ನ್ಯೂಝಿಲೆಂಡ್​ನ ಡೆವೊನ್ ಕಾನ್ವೆ ಹಾಗೂ ಮಿಚೆಲ್ ಸ್ಯಾಂಟ್ನರ್ ಅವರನ್ನು ಉಳಿಸಿಕೊಂಡಿತ್ತು. ಇದೀಗ ರಚಿನ್ ರವೀಂದ್ರ ಹಾಗೂ ಡೇರಿಲ್ ಮಿಚೆಲ್ ಆಯ್ಕೆಯಾಗಿದ್ದಾರೆ.

ಅಂದರೆ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಪರ ನಾಲ್ವರು ಕಿವೀಸ್ ಆಟಗಾರರು ಜೊತೆಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಒಂದು ವೇಳೆ ಹೀಗಾದರೆ ಸಿಎಸ್​ಕೆ ಪಡೆಯು ಚೆನ್ನೈ ಸೂಪರ್ ಕಿವೀಸ್ ಆಗಿ ಗುರುತಿಸಿಕೊಳ್ಳುವುದರಲ್ಲಿ ಅನುಮಾನವೇ ಇಲ್ಲ.

ಇನ್ನು ಈ ಬಾರಿಯ ಹರಾಜಿನ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಖರೀದಿಸಿದ ಮೂರನೇ ವಿದೇಶಿ ಆಟಗಾರ ಮುಸ್ತಫಿಜುರ್ ರೆಹಮಾನ್. ಬಾಂಗ್ಲಾದೇಶ್ ತಂಡದ ಎಡಗೈ ವೇಗಿಯನ್ನು ಸಿಎಸ್​ಕೆ 2 ಕೋಟಿ ರೂ. ಮೂಲ ಬೆಲೆಗೆ ಖರೀದಿಸಿದೆ. ಹಾಗೆಯೇ ಟೀಮ್ ಇಂಡಿಯಾ ಆಲ್​ರೌಂಡರ್ ಶಾರ್ದೂಲ್ ಠಾಕೂರ್ ಅವರನ್ನು 4 ಕೋಟಿ ರೂ. ನೀಡಿ ಆಯ್ಕೆ ಮಾಡಿಕೊಂಡಿದೆ. ಇದಲ್ಲದೆ ಯುವ ಆಟಗಾರರಾದ ಸಮೀರ್ ರಿಝ್ವಿ ಅವಿನಾಶ್ ಕೂಡ ಸಿಎಸ್​ಕೆ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಅತ್ತ ಕಡೆ ಕಳೆದ ಬಾರಿಯ ಚಾಂಪಿಯನ್ ಪಡೆಯನ್ನು ಉಳಿಸಿಕೊಂಡಿದ್ದ ಸಿಎಸ್​ಕೆ ಫ್ರಾಂಚೈಸಿ ಇದೀಗ ಡೇರಿಲ್ ಮಿಚೆಲ್, ರಚಿನ್ ರವೀಂದ್ರ, ಮುಸ್ತಫಿಜುರ್ ರೆಹಮಾನ್​ನಂತಹ ಆಟಗಾರರನ್ನು ಖರೀದಿಸಿ ತನ್ನ ಬಳಗವನ್ನು ಮತ್ತಷ್ಟು ಬಲಿಷ್ಠಪಡಿಸಿಕೊಂಡಿರುವುದು ವಿಶೇಷ.

ಚೆನ್ನೈ ಸೂಪರ್‌ಕಿಂಗ್ಸ್: ಎಂಎಸ್ ಧೋನಿ, ಡೆವೊನ್ ಕಾನ್ವೇ, ರುತುರಾಜ್ ಗಾಯಕ್‌ವಾಡ್, ಅಜಿಂಕ್ಯ ರಹಾನೆ, ಶೇಖ್ ರಶೀದ್, ರವೀಂದ್ರ ಜಡೇಜಾ, ಮಿಚೆಲ್ ಸ್ಯಾಂಟ್ನರ್, ಮೊಯಿನ್ ಅಲಿ, ಶಿವಂ ದುಬೆ, ನಿಶಾಂತ್ ಸಿಂಧು, ಅಜಯ್ ಮಂಡಲ್, ರಾಜವರ್ಧನ್ ಹಂಗರ್ಗೇಕರ್, ದೀಪಕ್ ಚೋಹ್ಲನ್, ಮಹಿಶ್ ತೀಕ್ಷಣ, ಶೇಕ್ ರಶೀದ್, ಸಿಮರ್ಜಿತ್ ಸಿಂಗ್, ತುಷಾರ್ ದೇಶಪಾಂಡೆ, ಮತೀಶ ಪತಿರಾಣ.

ಇದನ್ನೂ ಓದಿ: IPL 2024: ಗುಜರಾತ್ ಟೈಟಾನ್ಸ್​ ಬೇಡವೇ ಬೇಡವೆಂದು ಕೈ ಬಿಟ್ಟ ಆಟಗಾರರಿಗೆ ಕೋಟಿ ಸುರಿದ RCB

ಸಿಎಸ್​ಕೆ ಹರಾಜಿನಲ್ಲಿ ಖರೀದಿಸಿದ ಆಟಗಾರರು:

  • ರಚಿನ್ ರವೀಂದ್ರ- 1.80 ಕೋಟಿ (ಮೂಲ ಬೆಲೆ 50 ಲಕ್ಷ ರೂ.)
  • ಶಾರ್ದೂಲ್ ಠಾಕೂರ್- 4 ಕೋಟಿ (ಮೂಲ ಬೆಲೆ 2 ಕೋಟಿ ರೂ.)
  • ಡೇರಿಲ್ ಮಿಚೆಲ್- 14 ಕೋಟಿ (ಮೂಲ ಬೆಲೆ 1 ಕೋಟಿ ರೂ.)
  • ಸಮೀರ್ ರಿಝ್ವಿ- 8.40 ಕೋಟಿ (ಮೂಲ ಬೆಲೆ 20 ಲಕ್ಷ ರೂ.)
  • ಮುಸ್ತಫಿಜುರ್ ರೆಹಮಾನ್- 2 ಕೋಟಿ (ಮೂಲ ಬೆಲೆ 2 ಕೋಟಿ ರೂ.)
  • ಅವಿನಾಶ್- 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?