AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಈ ನಡೆಯನ್ನು ಮೆಚ್ಚಲೇಬೇಕು

ನೀರಜ್ ಚೋಪ್ರಾಗೆ ಗೌರವಾರ್ಥವಾಗಿ ವಿಶೇಷ ಜರ್ಸಿ ಸಂಖ್ಯೆ 8758 ಅನ್ನು ಸಹ ಫ್ರಾಂಚೈಸಿ ನೀಡಲಿದೆ. ಟೋಕಿಯೊದಲ್ಲಿ 87.58 ಮೀಟರ್ ಜಾವೆಲಿನ್ ಎಸೆಯುವ ಮೂಲಕ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು. ಹೀಗಾಗಿ ಇದೇ ಸಂಖ್ಯೆಯ ಜೆರ್ಸಿಯನ್ನು ನೀಡಿ ಗೌರವಿಸಲು ಸಿಎಸ್​ಕೆ ನಿರ್ಧರಿಸಿದೆ.

CSK: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಈ ನಡೆಯನ್ನು ಮೆಚ್ಚಲೇಬೇಕು
CSK
TV9 Web
| Edited By: |

Updated on: Aug 10, 2021 | 7:09 PM

Share

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ತನ್ನದೇಯಾದ ವಿಶೇಷ ಅಭಿಮಾನಿಗಳ ಬಳಗ ಇರುವುದು ಗೊತ್ತೇ ಇದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಸಿಎಸ್​ಕೆ ತಂಡ ಮಾಡಿರುವ ಸಮಾಜಮುಖಿ ಕಾರ್ಯದಿಂದ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿತ್ತು. ಕೊರೋನಾ ಸಮಯದಲ್ಲಿ ಸಿಎಸ್​ಕೆ ಫ್ರಾಂಚೈಸಿಯು ತಮಿಳುನಾಡಿನಲ್ಲಿ ವೆಂಟಿಲೇಟರ್​ಗಳ ವ್ಯವಸ್ಥೆ ಮಾಡಿತ್ತು. ಅಷ್ಟೇ ಅಲ್ಲದೆ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾಗೆ ಒಂದು ಕೋಟಿ ರೂ. ಪುರಸ್ಕಾರ ಹಾಗೂ ಸಿಎಸ್​ಕೆ ವಿಶೇಷ ಜೆರ್ಸಿಯನ್ನು ನೀಡುವುದಾಗಿ ತಿಳಿಸಿ ಅಭಿಮಾನಿಗಳ ಮನಗೆದ್ದಿತ್ತು. ಇದೀಗ ತಮಿಳುನಾಡಿನ ಮಾಜಿ ಕ್ರಿಕೆಟರುಗಳ ನೆರವಿಗೆ ನಿಲ್ಲುವ ಮೂಲಕ ಮತ್ತೊಮ್ಮೆ ಗಮನ ಸೆಳೆದಿದ್ದಾರೆ.

ಹೌದು, ತಮಿಳುನಾಡನ್ನು ಪ್ರತಿನಿಧಿಸಿದ ಹಿರಿಯ ಮಾಜಿ ಕ್ರಿಕೆಟರುಗಳಿಗೆ 7 ಲಕ್ಷ ರೂ. ನೀಡುವ ಮೂಲಕ ಗೌರವಿಸಿದೆ. ಮಂಗಳವಾರ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯು ಹಿರಿಯ ಕ್ರಿಕೆಟಿಗರಿಗೆ ಧನ ಸಹಾಯ ನೀಡಿದೆ. 1950ರಿಂದ 1990ರವರೆಗೆ ಸೇವೆ ಸಲ್ಲಿಸಿದ ಕ್ರಿಕೆಟಿಗರನ್ನು ಗುರುತಿಸಿ 7 ಲಕ್ಷ ರೂ. ಗೌರವ ಧನ ನೀಡಿ ಸನ್ಮಾನಿಸಿದೆ. ಹಾಗೆಯೇ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ 1973ರಿಂದ 2013ರವರೆಗೆ ಸೇವೆ ಸಲ್ಲಿಸಿರುವ ಮಾಜಿ ಪಿಚ್ ಕ್ಯುರೇಟರ್ ಕೆ ಪಾರ್ಥ ಸಾರಥಿ ಅವರಿಗೂ ಧನ ಸಹಾಯ ಮಾಡಿದೆ.

ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯಿಂದ ಗೌರವ ಧನ ಪಡೆದ ಫಲಾನುಭವಿಗಳ ಪಟ್ಟಿ ಹೀಗಿದೆ: ಮಾಜಿ ವಿಕೆಟ್ ಕೀಪರ್ ಕೆಆರ್ ರಾಜಗೋಪಾಲ್, ಆಲ್ ರೌಂಡರ್ ನಜಮ್ ಹುಸೇನ್, ದಕ್ಷಿಣ ವಲಯ ಕ್ರಿಕೆಟಿಗ ಎಸ್ ವಿ ಎಸ್ ಮಣಿ ಮತ್ತು ಮಧ್ಯಮ ವೇಗಿ ಆರ್. ಪ್ರಭಾಕರ್, ಹಾಗೂ ಎಂ ಎ ಚಿದಂಬರಂ ಕ್ರೀಡಾಂಗಣದ ಮಾಜಿ ಕ್ಯುರೇಟರ್ ಕೆ ಪಾರ್ಥಸಾರಥಿ. ಹೀಗೆ ಕಷ್ಟದಲ್ಲಿರುವ ಹಿರಿಯ ಆಟಗಾರರನ್ನು ಗುರುತಿಸಿ ಗೌರವಿಸುವ ಮೂಲಕ ಸಿಎಸ್​ಕೆ ತಂಡವು ಮತ್ತೊಮ್ಮೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ: IPL 2021: ಐಪಿಎಲ್​ಗಾಗಿ 2 ತಂಡ ಕಟ್ಟಿದ್ದ ನ್ಯೂಜಿಲೆಂಡ್..!

ಇದನ್ನೂ ಓದಿ: IPL 2021: ಐಪಿಎಲ್​ನ ಹೊಸ ನಿಯಮದಿಂದ ಯಾರಿಗೆ ಅನುಕೂಲ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್