AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಈ ನಡೆಯನ್ನು ಮೆಚ್ಚಲೇಬೇಕು

ನೀರಜ್ ಚೋಪ್ರಾಗೆ ಗೌರವಾರ್ಥವಾಗಿ ವಿಶೇಷ ಜರ್ಸಿ ಸಂಖ್ಯೆ 8758 ಅನ್ನು ಸಹ ಫ್ರಾಂಚೈಸಿ ನೀಡಲಿದೆ. ಟೋಕಿಯೊದಲ್ಲಿ 87.58 ಮೀಟರ್ ಜಾವೆಲಿನ್ ಎಸೆಯುವ ಮೂಲಕ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು. ಹೀಗಾಗಿ ಇದೇ ಸಂಖ್ಯೆಯ ಜೆರ್ಸಿಯನ್ನು ನೀಡಿ ಗೌರವಿಸಲು ಸಿಎಸ್​ಕೆ ನಿರ್ಧರಿಸಿದೆ.

CSK: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಈ ನಡೆಯನ್ನು ಮೆಚ್ಚಲೇಬೇಕು
CSK
TV9 Web
| Updated By: ಝಾಹಿರ್ ಯೂಸುಫ್|

Updated on: Aug 10, 2021 | 7:09 PM

Share

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ತನ್ನದೇಯಾದ ವಿಶೇಷ ಅಭಿಮಾನಿಗಳ ಬಳಗ ಇರುವುದು ಗೊತ್ತೇ ಇದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಸಿಎಸ್​ಕೆ ತಂಡ ಮಾಡಿರುವ ಸಮಾಜಮುಖಿ ಕಾರ್ಯದಿಂದ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿತ್ತು. ಕೊರೋನಾ ಸಮಯದಲ್ಲಿ ಸಿಎಸ್​ಕೆ ಫ್ರಾಂಚೈಸಿಯು ತಮಿಳುನಾಡಿನಲ್ಲಿ ವೆಂಟಿಲೇಟರ್​ಗಳ ವ್ಯವಸ್ಥೆ ಮಾಡಿತ್ತು. ಅಷ್ಟೇ ಅಲ್ಲದೆ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾಗೆ ಒಂದು ಕೋಟಿ ರೂ. ಪುರಸ್ಕಾರ ಹಾಗೂ ಸಿಎಸ್​ಕೆ ವಿಶೇಷ ಜೆರ್ಸಿಯನ್ನು ನೀಡುವುದಾಗಿ ತಿಳಿಸಿ ಅಭಿಮಾನಿಗಳ ಮನಗೆದ್ದಿತ್ತು. ಇದೀಗ ತಮಿಳುನಾಡಿನ ಮಾಜಿ ಕ್ರಿಕೆಟರುಗಳ ನೆರವಿಗೆ ನಿಲ್ಲುವ ಮೂಲಕ ಮತ್ತೊಮ್ಮೆ ಗಮನ ಸೆಳೆದಿದ್ದಾರೆ.

ಹೌದು, ತಮಿಳುನಾಡನ್ನು ಪ್ರತಿನಿಧಿಸಿದ ಹಿರಿಯ ಮಾಜಿ ಕ್ರಿಕೆಟರುಗಳಿಗೆ 7 ಲಕ್ಷ ರೂ. ನೀಡುವ ಮೂಲಕ ಗೌರವಿಸಿದೆ. ಮಂಗಳವಾರ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯು ಹಿರಿಯ ಕ್ರಿಕೆಟಿಗರಿಗೆ ಧನ ಸಹಾಯ ನೀಡಿದೆ. 1950ರಿಂದ 1990ರವರೆಗೆ ಸೇವೆ ಸಲ್ಲಿಸಿದ ಕ್ರಿಕೆಟಿಗರನ್ನು ಗುರುತಿಸಿ 7 ಲಕ್ಷ ರೂ. ಗೌರವ ಧನ ನೀಡಿ ಸನ್ಮಾನಿಸಿದೆ. ಹಾಗೆಯೇ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ 1973ರಿಂದ 2013ರವರೆಗೆ ಸೇವೆ ಸಲ್ಲಿಸಿರುವ ಮಾಜಿ ಪಿಚ್ ಕ್ಯುರೇಟರ್ ಕೆ ಪಾರ್ಥ ಸಾರಥಿ ಅವರಿಗೂ ಧನ ಸಹಾಯ ಮಾಡಿದೆ.

ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯಿಂದ ಗೌರವ ಧನ ಪಡೆದ ಫಲಾನುಭವಿಗಳ ಪಟ್ಟಿ ಹೀಗಿದೆ: ಮಾಜಿ ವಿಕೆಟ್ ಕೀಪರ್ ಕೆಆರ್ ರಾಜಗೋಪಾಲ್, ಆಲ್ ರೌಂಡರ್ ನಜಮ್ ಹುಸೇನ್, ದಕ್ಷಿಣ ವಲಯ ಕ್ರಿಕೆಟಿಗ ಎಸ್ ವಿ ಎಸ್ ಮಣಿ ಮತ್ತು ಮಧ್ಯಮ ವೇಗಿ ಆರ್. ಪ್ರಭಾಕರ್, ಹಾಗೂ ಎಂ ಎ ಚಿದಂಬರಂ ಕ್ರೀಡಾಂಗಣದ ಮಾಜಿ ಕ್ಯುರೇಟರ್ ಕೆ ಪಾರ್ಥಸಾರಥಿ. ಹೀಗೆ ಕಷ್ಟದಲ್ಲಿರುವ ಹಿರಿಯ ಆಟಗಾರರನ್ನು ಗುರುತಿಸಿ ಗೌರವಿಸುವ ಮೂಲಕ ಸಿಎಸ್​ಕೆ ತಂಡವು ಮತ್ತೊಮ್ಮೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ: IPL 2021: ಐಪಿಎಲ್​ಗಾಗಿ 2 ತಂಡ ಕಟ್ಟಿದ್ದ ನ್ಯೂಜಿಲೆಂಡ್..!

ಇದನ್ನೂ ಓದಿ: IPL 2021: ಐಪಿಎಲ್​ನ ಹೊಸ ನಿಯಮದಿಂದ ಯಾರಿಗೆ ಅನುಕೂಲ?

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..