AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಈ ನಡೆಯನ್ನು ಮೆಚ್ಚಲೇಬೇಕು

ನೀರಜ್ ಚೋಪ್ರಾಗೆ ಗೌರವಾರ್ಥವಾಗಿ ವಿಶೇಷ ಜರ್ಸಿ ಸಂಖ್ಯೆ 8758 ಅನ್ನು ಸಹ ಫ್ರಾಂಚೈಸಿ ನೀಡಲಿದೆ. ಟೋಕಿಯೊದಲ್ಲಿ 87.58 ಮೀಟರ್ ಜಾವೆಲಿನ್ ಎಸೆಯುವ ಮೂಲಕ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು. ಹೀಗಾಗಿ ಇದೇ ಸಂಖ್ಯೆಯ ಜೆರ್ಸಿಯನ್ನು ನೀಡಿ ಗೌರವಿಸಲು ಸಿಎಸ್​ಕೆ ನಿರ್ಧರಿಸಿದೆ.

CSK: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಈ ನಡೆಯನ್ನು ಮೆಚ್ಚಲೇಬೇಕು
CSK
TV9 Web
| Edited By: |

Updated on: Aug 10, 2021 | 7:09 PM

Share

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ತನ್ನದೇಯಾದ ವಿಶೇಷ ಅಭಿಮಾನಿಗಳ ಬಳಗ ಇರುವುದು ಗೊತ್ತೇ ಇದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಸಿಎಸ್​ಕೆ ತಂಡ ಮಾಡಿರುವ ಸಮಾಜಮುಖಿ ಕಾರ್ಯದಿಂದ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿತ್ತು. ಕೊರೋನಾ ಸಮಯದಲ್ಲಿ ಸಿಎಸ್​ಕೆ ಫ್ರಾಂಚೈಸಿಯು ತಮಿಳುನಾಡಿನಲ್ಲಿ ವೆಂಟಿಲೇಟರ್​ಗಳ ವ್ಯವಸ್ಥೆ ಮಾಡಿತ್ತು. ಅಷ್ಟೇ ಅಲ್ಲದೆ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾಗೆ ಒಂದು ಕೋಟಿ ರೂ. ಪುರಸ್ಕಾರ ಹಾಗೂ ಸಿಎಸ್​ಕೆ ವಿಶೇಷ ಜೆರ್ಸಿಯನ್ನು ನೀಡುವುದಾಗಿ ತಿಳಿಸಿ ಅಭಿಮಾನಿಗಳ ಮನಗೆದ್ದಿತ್ತು. ಇದೀಗ ತಮಿಳುನಾಡಿನ ಮಾಜಿ ಕ್ರಿಕೆಟರುಗಳ ನೆರವಿಗೆ ನಿಲ್ಲುವ ಮೂಲಕ ಮತ್ತೊಮ್ಮೆ ಗಮನ ಸೆಳೆದಿದ್ದಾರೆ.

ಹೌದು, ತಮಿಳುನಾಡನ್ನು ಪ್ರತಿನಿಧಿಸಿದ ಹಿರಿಯ ಮಾಜಿ ಕ್ರಿಕೆಟರುಗಳಿಗೆ 7 ಲಕ್ಷ ರೂ. ನೀಡುವ ಮೂಲಕ ಗೌರವಿಸಿದೆ. ಮಂಗಳವಾರ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯು ಹಿರಿಯ ಕ್ರಿಕೆಟಿಗರಿಗೆ ಧನ ಸಹಾಯ ನೀಡಿದೆ. 1950ರಿಂದ 1990ರವರೆಗೆ ಸೇವೆ ಸಲ್ಲಿಸಿದ ಕ್ರಿಕೆಟಿಗರನ್ನು ಗುರುತಿಸಿ 7 ಲಕ್ಷ ರೂ. ಗೌರವ ಧನ ನೀಡಿ ಸನ್ಮಾನಿಸಿದೆ. ಹಾಗೆಯೇ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ 1973ರಿಂದ 2013ರವರೆಗೆ ಸೇವೆ ಸಲ್ಲಿಸಿರುವ ಮಾಜಿ ಪಿಚ್ ಕ್ಯುರೇಟರ್ ಕೆ ಪಾರ್ಥ ಸಾರಥಿ ಅವರಿಗೂ ಧನ ಸಹಾಯ ಮಾಡಿದೆ.

ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯಿಂದ ಗೌರವ ಧನ ಪಡೆದ ಫಲಾನುಭವಿಗಳ ಪಟ್ಟಿ ಹೀಗಿದೆ: ಮಾಜಿ ವಿಕೆಟ್ ಕೀಪರ್ ಕೆಆರ್ ರಾಜಗೋಪಾಲ್, ಆಲ್ ರೌಂಡರ್ ನಜಮ್ ಹುಸೇನ್, ದಕ್ಷಿಣ ವಲಯ ಕ್ರಿಕೆಟಿಗ ಎಸ್ ವಿ ಎಸ್ ಮಣಿ ಮತ್ತು ಮಧ್ಯಮ ವೇಗಿ ಆರ್. ಪ್ರಭಾಕರ್, ಹಾಗೂ ಎಂ ಎ ಚಿದಂಬರಂ ಕ್ರೀಡಾಂಗಣದ ಮಾಜಿ ಕ್ಯುರೇಟರ್ ಕೆ ಪಾರ್ಥಸಾರಥಿ. ಹೀಗೆ ಕಷ್ಟದಲ್ಲಿರುವ ಹಿರಿಯ ಆಟಗಾರರನ್ನು ಗುರುತಿಸಿ ಗೌರವಿಸುವ ಮೂಲಕ ಸಿಎಸ್​ಕೆ ತಂಡವು ಮತ್ತೊಮ್ಮೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ: IPL 2021: ಐಪಿಎಲ್​ಗಾಗಿ 2 ತಂಡ ಕಟ್ಟಿದ್ದ ನ್ಯೂಜಿಲೆಂಡ್..!

ಇದನ್ನೂ ಓದಿ: IPL 2021: ಐಪಿಎಲ್​ನ ಹೊಸ ನಿಯಮದಿಂದ ಯಾರಿಗೆ ಅನುಕೂಲ?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ