ಐಪಿಎಲ್ 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ನ ಅತ್ಯುತ್ತಮ ಪ್ರದರ್ಶನ ಮುಂದುವರೆದರೆ, ಮತ್ತೊಂದೆಡೆ 5 ಬಾರಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ನ ಸೋಲಿನ ಸರಣಿ ಸತತ 4ನೇ ಪಂದ್ಯದಲ್ಲೂ ಮುಂದುವರೆದಿದೆ. ಏಪ್ರಿಲ್ 5 ರ ಶನಿವಾರ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ 17 ನೇ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 25 ರನ್ಗಳಿಂದ ಸೋಲಿಸಿ ತನ್ನ ಅಜೇಯ ಓಟವನ್ನು ಮುಂದವರೆಸಿದೆ. ಇದರೊಂದಿಗೆ, ದೆಹಲಿ ಈ ಆವೃತ್ತಿಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡರೆ, ಇತ್ತ ಚೆನ್ನೈ ತಂಡ ಸತತ ಮೂರನೇ ಸೋಲನ್ನು ಅನುಭವಿಸಿ ಪಾಯಿಂಟ್ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಈ ಪಂದ್ಯವು ಧೋನಿಗೆ ಬಹಳ ವಿಶೇಷವಾಗಿತ್ತು. ಏಕೆಂದರೆ ಮೊದಲ ಬಾರಿಗೆ ಧೋನಿಯ ಪೋಷಕರು ಮಗನ ಆಟವನ್ನು ನೋಡಲು ಕ್ರೀಡಾಂಗಣಕ್ಕೆ ಬಂದಿದ್ದರು. ಆದರೆ ಧೋನಿಗೆ ಅವರ ಮುಂದೆ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ. ಇದರೊಂದಿಗೆ, 15 ವರ್ಷಗಳ ನಂತರ ಚೆಪಾಕ್ನಲ್ಲಿ ದೆಹಲಿ ತಂಡವು ಚೆನ್ನೈ ತಂಡವನ್ನು ಮೊದಲ ಬಾರಿಗೆ ಸೋಲಿಸಿದ ದಾಖಲೆಯನ್ನು ಬರೆಯಿತು.
ಬ್ಯಾಟ್ಸ್ಮನ್ಗಳ ನಂತರ ಬೌಲರ್ಗಳ ಅದ್ಭುತ ಪ್ರದರ್ಶನದ ಆಧಾರದ ಮೇಲೆ ಡೆಲ್ಲಿ ಕ್ಯಾಪಿಟಲ್ಸ್, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 25 ರನ್ಗಳಿಂದ ಸೋಲಿಸಿತು.
ವಿಜಯ್ ಶಂಕರ್ 43 ಎಸೆತಗಳಲ್ಲಿ 4 ಬೌಂಡರಿ ಸಹಿತ ಅರ್ಧಶತಕ ಪೂರೈಸಿದರು.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಇನ್ನಿಂಗ್ಸ್ನ 16 ಓವರ್ಗಳು ಮುಗಿದಿವೆ. ಸಿಎಸ್ಕೆ ತಂಡವು 5 ವಿಕೆಟ್ಗಳ ನಷ್ಟಕ್ಕೆ 112 ರನ್ಗಳನ್ನು ಮಾತ್ರ ಗಳಿಸಲು ಶಕ್ತವಾಗಿದೆ. ಈಗ ಗೆಲ್ಲಲು 24 ಎಸೆತಗಳಲ್ಲಿ 72 ರನ್ಗಳು ಬೇಕಾಗಿವೆ, ಅದು ಕಷ್ಟಕರವೆಂದು ತೋರುತ್ತದೆ.
ಚೆನ್ನೈ ಸೂಪರ್ ಕಿಂಗ್ಸ್ 14 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 96 ರನ್ ಗಳಿಸಿದೆ. ಈ ಗುರಿ ಈಗ CSK ಗೆ ಕಷ್ಟಕರವೆನಿಸುತ್ತದೆ. ಗೆಲ್ಲಲು ಇನ್ನೂ 33 ಎಸೆತಗಳಲ್ಲಿ 88 ರನ್ ಗಳಿಸಬೇಕಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅರ್ಧದಷ್ಟು ಬ್ಯಾಟರ್ಗಳು ಪೆವಿಲಿಯನ್ಗೆ ಮರಳಿದ್ದಾರೆ. ರವೀಂದ್ರ ಜಡೇಜ 3 ಎಸೆತಗಳಲ್ಲಿ 2 ರನ್ ಗಳಿಸಿ ಔಟಾದರು. ಈಗ ಎಂಎಸ್ ಧೋನಿ ಕ್ರೀಸ್ಗೆ ಬಂದಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ 65 ರನ್ಗಳಿಗೆ ನಾಲ್ಕನೇ ವಿಕೆಟ್ ಕಳೆದುಕೊಂಡಿದೆ. ಶಿವಂ ದುಬೆ 15 ಎಸೆತಗಳಲ್ಲಿ 18 ರನ್ ಗಳಿಸಿ ಔಟಾದರು.
ಚೆನ್ನೈ ಸೂಪರ್ ಕಿಂಗ್ಸ್ 8 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 52 ರನ್ ಗಳಿಸಿದೆ. ಗೆಲ್ಲಲು 72 ಎಸೆತಗಳಲ್ಲಿ 132 ರನ್ಗಳ ಅವಶ್ಯಕತೆಯಿದೆ.
ಚೆನ್ನೈ ಸೂಪರ್ ಕಿಂಗ್ಸ್ 41 ರನ್ಗಳಿಗೆ ಮೂರನೇ ವಿಕೆಟ್ ಕಳೆದುಕೊಂಡಿತು. ಡೆವೊನ್ ಕಾನ್ವೇ 14 ಎಸೆತಗಳಲ್ಲಿ 13 ರನ್ ಗಳಿಸಿ ಔಟಾದರು.
ಚೆನ್ನೈ ಸೂಪರ್ ಕಿಂಗ್ಸ್ ತನ್ನ ದೊಡ್ಡ ವಿಕೆಟ್ ಕಳೆದುಕೊಂಡಿದೆ. ನಾಯಕ ರುತುರಾಜ್ ಗಾಯಕ್ವಾಡ್ 5 ರನ್ ಗಳಿಸಿ ಪೆವಿಲಿಯನ್ಗೆ ಮರಳಿದ್ದಾರೆ. ಸಿಎಸ್ಕೆ 20 ರನ್ಗಳಿಗೆ ಈ ಹಿನ್ನಡೆ ಅನುಭವಿಸಿತು.
ಚೆನ್ನೈ ಸೂಪರ್ ಕಿಂಗ್ಸ್ 14 ರನ್ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. 6 ಎಸೆತಗಳಲ್ಲಿ 3 ರನ್ ಗಳಿಸಿದ ನಂತರ ರಚಿನ್ ರವೀಂದ್ರ ಮುಖೇಶ್ ಕುಮಾರ್ಗೆ ಬಲಿಯಾದರು.
ಡೆಲ್ಲಿ ತಂಡ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 183 ರನ್ ಗಳಿಸಿದೆ. ದೆಹಲಿ ಪರ ಕೆಎಲ್ ರಾಹುಲ್ 77 ರನ್ ಗಳಿಸಿ ಅತಿ ಹೆಚ್ಚು ರನ್ ಗಳಿಸಿದರು. ಅದೇ ಸಮಯದಲ್ಲಿ, ಅಭಿಷೇಕ್ ಪೊರೆಲ್ 33 ರನ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ 24 ರನ್ ಗಳಿಸಿದರು. ಮತ್ತೊಂದೆಡೆ, ಸಿಎಸ್ಕೆ ಪರ ಖಲೀಲ್ ಅಹ್ಮದ್ 2 ವಿಕೆಟ್ ಮತ್ತು ರವೀಂದ್ರ ಜಡೇಜಾ, ನೂರ್ ಅಹ್ಮದ್ ಮತ್ತು ಮಥಿಶಾ ಪತಿರಾನ ತಲಾ 1 ವಿಕೆಟ್ ಪಡೆದರು.
ಅಶುತೋಷ್ ಶರ್ಮಾ ತಮ್ಮ ಮೊದಲ ಎಸೆತದಲ್ಲೇ ರನ್ ಔಟ್ ಆದರು. ಅವರು 2 ರನ್ ಗಳಿಸಲು ಪ್ರಯತ್ನಿಸುವಾಗ ವಿಕೆಟ್ ಕಳೆದುಕೊಂಡರು.
ಕೆಎಲ್ ರಾಹುಲ್ 51 ಎಸೆತಗಳಲ್ಲಿ 77 ರನ್ ಗಳಿಸಿ ಔಟಾದರು. ಡೆಲ್ಲಿ ತಂಡವು 179 ರನ್ಗಳಿಗೆ ಈ ಹಿನ್ನಡೆ ಅನುಭವಿಸಿತು.
18 ಓವರ್ಗಳಲ್ಲಿ ದೆಹಲಿ 4 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿde. ಈಗ ಆಟದ ಕೊನೆಯ 2 ಓವರ್ಗಳು ಮಾತ್ರ ಉಳಿದಿವೆ. ಕೆಎಲ್ ರಾಹುಲ್ ಇನ್ನೂ ಕ್ರೀಸ್ನಲ್ಲಿದ್ದಾರೆ.
ದೆಹಲಿಯ ಇನ್ನಿಂಗ್ಸ್ನ 15 ಓವರ್ಗಳು ಮುಗಿದಿವೆ. ಆ ತಂಡ 3 ವಿಕೆಟ್ ಕಳೆದುಕೊಂಡು 138 ರನ್ ಗಳಿಸಿದೆ. ಕೆಎಲ್ ರಾಹುಲ್ 61 ರನ್ ಮತ್ತು ಸಮೀರ್ ರಿಜ್ವಿ ಕೂಡ 19 ರನ್ ಗಳಿಸಿ ಆಡುತ್ತಿದ್ದಾರೆ.
ಕೆಎಲ್ ರಾಹುಲ್ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದು ಈ ಋತುವಿನಲ್ಲಿ ಕೆಎಲ್ ರಾಹುಲ್ ಅವರ ಮೊದಲ ಅರ್ಧಶತಕವಾಗಿದೆ.
ದೆಹಲಿಗೆ ಭಾರಿ ಹಿನ್ನಡೆಯಾಗಿದೆ. ನಾಯಕ ಅಕ್ಷರ್ ಪಟೇಲ್ 14 ಎಸೆತಗಳಲ್ಲಿ 21 ರನ್ ಗಳಿಸಿ ಔಟಾದರು.
10 ಓವರ್ಗಳಲ್ಲಿ ಡೆಲ್ಲಿ 2 ವಿಕೆಟ್ ಕಳೆದುಕೊಂಡು 82 ರನ್ ಗಳಿಸಿದೆ. ಕೆಎಲ್ ರಾಹುಲ್ 29 ರನ್ ಮತ್ತು ಅಕ್ಷರ್ ಪಟೇಲ್ 20 ರನ್ ಗಳಿಸಿ ಆಡುತ್ತಿದ್ದಾರೆ.
ಡೆಲ್ಲಿ ತಂಡ 54 ರನ್ಗಳಿಗೆ ಎರಡನೇ ವಿಕೆಟ್ ಕಳೆದುಕೊಂಡಿತು. ಅಭಿಷೇಕ್ ಪೊರೆಲ್ 20 ಎಸೆತಗಳಲ್ಲಿ 33 ರನ್ ಗಳಿಸಿ ಔಟಾದರು.
ಮೊದಲ 6 ಓವರ್ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 1 ವಿಕೆಟ್ ನಷ್ಟಕ್ಕೆ 51 ರನ್ ಗಳಿಸಿದೆ. ಕೆಎಲ್ ರಾಹುಲ್ ಮತ್ತು ಅಭಿಷೇಕ್ ಪೊರೆಲ್ ನಡುವೆ ಉತ್ತಮ ಜೊತೆಯಾಟ ಕಂಡುಬರುತ್ತಿದೆ.
ಮೊದಲ 3 ಓವರ್ಗಳ ಅಂತ್ಯಕ್ಕೆ ಡೆಲ್ಲಿ ತಂಡ 1 ವಿಕೆಟ್ ನಷ್ಟಕ್ಕೆ 24 ರನ್ ಗಳಿಸಿದೆ. ಕೆಎಲ್ ರಾಹುಲ್ 2 ರನ್ ಗಳಿಸಿ ಮತ್ತು ಅಭಿಷೇಕ್ ಪೊರೆಲ್ 22 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.
ಮೊದಲ ಓವರ್ನಲ್ಲೇ ಜ್ಯಾಕ್ ಫ್ರೇಸರ್ ಮೆಕ್ಗರ್ಕ್ ಅವರನ್ನು ಔಟ್ ಮಾಡುವ ಮೂಲಕ ಖಲೀಲ್ ಅಹ್ಮದ್ ಡೆಲ್ಲಿಗೆ ಆರಂಭಿಕ ಆಘಾತ ನೀಡಿದರು. ಐದು ಎಸೆತಗಳನ್ನು ಆಡಿದ ನಂತರ ಮೆಕ್ಗರ್ಕ್ ಖಾತೆ ತೆರೆಯದೆಯೇ ಔಟಾದರು.
ಜೇಕ್ ಫ್ರೇಸರ್-ಮೆಕ್ಗುರ್ಕ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಭಿಷೇಕ್ ಪೊರೆಲ್, ಟ್ರಿಸ್ಟಾನ್ ಸ್ಟಬ್ಸ್, ಸಮೀರ್ ರಿಜ್ವಿ, ಅಕ್ಷರ್ ಪಟೇಲ್ (ನಾಯಕ), ಅಶುತೋಷ್ ಶರ್ಮಾ, ವಿಪ್ರಾಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲ್ದೀಪ್ ಯಾದವ್, ಮೋಹಿತ್ ಶರ್ಮಾ.
ರಚಿನ್ ರವೀಂದ್ರ, ಡೆವೊನ್ ಕಾನ್ವೇ, ರುತುರಾಜ್ ಗಾಯಕ್ವಾಡ್ (ನಾಯಕ), ವಿಜಯ್ ಶಂಕರ್, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ನೂರ್ ಅಹ್ಮದ್, ಮುಖೇಶ್ ಚೌಧರಿ, ಖಲೀಲ್ ಅಹ್ಮದ್, ಮತಿಶಾ ಪತಿರಾನ.
ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ರಾಹುಲ್ ತ್ರಿಪಾಠಿ ಮತ್ತು ಜೇಮೀ ಓವರ್ಟನ್ ಅವರನ್ನು ಕೈಬಿಡಲಾಗಿದೆ. ಅವರ ಬದಲಿಗೆ ಮುಖೇಶ್ ಚೌಧರಿ ಮತ್ತು ಡೆವೊನ್ ಕಾನ್ವೇ ಅವರನ್ನು ಆಡಿಸಲಾಗಿದೆ.
ದೆಹಲಿಯ ಫಾಫ್ ಡು ಪ್ಲೆಸಿಸ್ ಇಂದು ಫಿಟ್ ಆಗಿಲ್ಲ. ಅದಕ್ಕಾಗಿಯೇ ಅವರು ಇಂದು ಆಡುತ್ತಿಲ್ಲ. ಅವರ ಬದಲಿಗೆ ಸಮೀರ್ ರಿಜ್ವಿ ಅವರನ್ನು ಆಡಿಸಲಾಗಿದೆ.
ಟಾಸ್ ಗೆದ್ದ ಡೆಲ್ಲಿ ನಾಯಕ ಅಕ್ಷರ್ ಪಟೇಲ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
Published On - 3:01 pm, Sat, 5 April 25