AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs KKR, IPL 2021, Final: ಟಾಸ್ ಗೆದ್ದ ಕೋಲ್ಕತ್ತಾ.. ಚೆನ್ನೈ ಬ್ಯಾಟಿಂಗ್; ಉಭಯ ತಂಡಗಳ ಪ್ಲೇಯಿಂಗ್ XI

CSK vs KKR, IPL 2021, Final: ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕಣ್ಣುಗಳು ತಮ್ಮ ನಾಲ್ಕನೇ ಪ್ರಶಸ್ತಿಯ ಮೇಲೆ ಇರಲಿದ್ದು, ಕೆಕೆಆರ್ ಮೂರನೇ ಬಾರಿ ಚಾಂಪಿಯನ್ ಆಗುವ ಉದ್ದೇಶದಿಂದ ಕಣಕ್ಕಿಳಿಯಲಿದೆ.

CSK vs KKR, IPL 2021, Final: ಟಾಸ್ ಗೆದ್ದ ಕೋಲ್ಕತ್ತಾ.. ಚೆನ್ನೈ ಬ್ಯಾಟಿಂಗ್; ಉಭಯ ತಂಡಗಳ ಪ್ಲೇಯಿಂಗ್ XI
ಮೋರ್ಗನ್, ಧೋನಿ
TV9 Web
| Updated By: ಪೃಥ್ವಿಶಂಕರ|

Updated on: Oct 15, 2021 | 7:14 PM

Share

ಐಪಿಎಲ್ 2021 ರ ಪ್ರಶಸ್ತಿಯ ಪಂದ್ಯವು ಇಂದು ದುಬೈನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯಕ್ಕಾಗಿ, ಎರಡೂ ತಂಡಗಳು ಟಾಸ್ ಸಮಯದಲ್ಲಿ ಪ್ಲೇಯಿಂಗ್ ಇಲೆವೆನ್ ಅನ್ನು ಘೋಷಿಸಿದವು. ಟಾಸ್ ಗೆದ್ದ ಕೆಕೆಆರ್ ತಂಡ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿತು. ಕೆಕೆಆರ್ ತಂಡ ಯಾವ ಬದಲಾವಣೆ ಮಾಡಿಲ್ಲ. ಮತ್ತೊಂದೆಡೆ, ಚೆನ್ನೈ ತಂಡ ಕೂಡ ಯಾವುದೇ ಬದಲಾವಣೆಯಿಲ್ಲದೆ ಇಳಿದಿದೆ.

ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕಣ್ಣುಗಳು ತಮ್ಮ ನಾಲ್ಕನೇ ಪ್ರಶಸ್ತಿಯ ಮೇಲೆ ಇರಲಿದ್ದು, ಕೆಕೆಆರ್ ಮೂರನೇ ಬಾರಿ ಚಾಂಪಿಯನ್ ಆಗುವ ಉದ್ದೇಶದಿಂದ ಕಣಕ್ಕಿಳಿಯಲಿದೆ. ಚೆನ್ನೈ 2010, 2011 ಮತ್ತು 2018 ರಲ್ಲಿ ಐಪಿಎಲ್ ಟ್ರೋಫಿಯನ್ನು ಗೆದ್ದರೆ, ಕೆಕೆಆರ್ 2012 ಮತ್ತು 2014 ರಲ್ಲಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಚೆನ್ನೈ ತಂಡ ಲೀಗ್ ಸುತ್ತಿನಲ್ಲಿ 14 ಪಂದ್ಯಗಳಲ್ಲಿ ಒಂಬತ್ತು ಪಂದ್ಯಗಳನ್ನು ಗೆಲ್ಲುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನ ಗಳಿಸಿತು. ಪ್ಲೇಆಫ್ ಸಮಯದಲ್ಲಿ, ಚೆನ್ನೈ ದೆಹಲಿಯನ್ನು ಕ್ವಾಲಿಫೈಯರ್ -1 ರಲ್ಲಿ ಸೋಲಿಸಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಿತು. ಅದೇ ಸಮಯದಲ್ಲಿ, ಕೋಲ್ಕತಾ ತಂಡವು ಲೀಗ್ ಸುತ್ತಿನಲ್ಲಿ 14 ಪಂದ್ಯಗಳಲ್ಲಿ ಏಳನ್ನು ಗೆಲ್ಲುವ ಮೂಲಕ ನಾಲ್ಕನೇ ಸ್ಥಾನವನ್ನು ಗಳಿಸಿತು. ಪ್ಲೇಆಫ್ ಸಮಯದಲ್ಲಿ, ಈ ತಂಡವು ಅದ್ಭುತ ಪ್ರದರ್ಶನ ನೀಡಿತು, ಮೊದಲು ಎಲಿಮಿನೇಟರ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿತು, ನಂತರ ಕ್ವಾಲಿಫೈಯರ್ -2 ರಲ್ಲಿ ದೆಹಲಿ ಕ್ಯಾಪಿಟಲ್ಸ್ ಅನ್ನು ಸೋಲಿಸಿ ಫೈನಲ್ ತಲುಪಿತು.

ಕೋಲ್ಕತಾ ನೈಟ್ ರೈಡರ್ಸ್ ಇಲೆವೆನ್ – ಶುಭಮನ್ ಗಿಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಇಯೋನ್ ಮಾರ್ಗನ್, ಶಕೀಬ್ ಅಲ್ ಹಸನ್, ದಿನೇಶ್ ಕಾರ್ತಿಕ್, ಸುನಿಲ್ ನರೈನ್, ಶಿವಂ ಮಾವಿ, ಲೋಕಿ ಫರ್ಗುಸನ್ ಮತ್ತು ವರುಣ್ ಚಕ್ರವರ್ತಿ

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ ಇಲೆವೆನ್- ಮಹೇಂದ್ರ ಸಿಂಗ್ ಧೋನಿ (ಕ್ಯಾಪ್ಟನ್-ವಿಕೆಟ್ ಕೀಪರ್)- ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ದೀಪಕ್ ಚಹಾರ್, ಡ್ವೇನ್ ಬ್ರಾವೋ, ಫಾಫ್ ಡು ಪ್ಲೆಸಿಸ್, ರವೀಂದ್ರ ಜಡೇಜಾ, ರಿತುರಾಜ್ ಗಾಯಕವಾಡ್, ಶಾರ್ದೂಲ್ ಠಾಕೂರ್, ಮೊಯೀನ್ ಅಲಿ, ಜೋಶ್ ಹಜಲ್‌ವುಡ್.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?