AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK Vs RCB: ಸಿಎಸ್​ಕೆ ವಿರುದ್ಧ ರಾಯಲ್​ ಚಾಲೆಂಜರ್ಸ್​ಗೆ 23 ರನ್​ಗಳ ಸೋಲು; ಸ್ಟಾರ್​ಗಳೇ ತುಂಬಿರುವ ಆರ್​ಸಿಬಿ ಎಡವಿದ್ದೆಲ್ಲಿ?

CSK Vs RCB Match Result: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ ಆರ್​ಸಿಬಿ 23 ರನ್​ಗಳಿಂದ ಶರಣಾಗಿದೆ. ಆರ್​ಸಿಬಿ ಎಡವಿದ್ದೆಲ್ಲಿ? ಪಂದ್ಯ ಸೋಲಲು ಕಾರಣಗಳೇನು?

CSK Vs RCB: ಸಿಎಸ್​ಕೆ ವಿರುದ್ಧ ರಾಯಲ್​ ಚಾಲೆಂಜರ್ಸ್​ಗೆ 23 ರನ್​ಗಳ ಸೋಲು; ಸ್ಟಾರ್​ಗಳೇ ತುಂಬಿರುವ ಆರ್​ಸಿಬಿ ಎಡವಿದ್ದೆಲ್ಲಿ?
ಜಯದ ನಂತರ ಸಿಎಸ್​​ಕೆ ಆಟಗಾರರು ಹಾಗೂ ಆರ್​ಸಿಬಿಯ ಜೋಶ್ ಹ್ಯಾಜಲ್​ವುಡ್ (Credits: IPL/Twitter)
TV9 Web
| Edited By: |

Updated on: Apr 13, 2022 | 8:06 AM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವೆ ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ (IPL- 2022) ಆರ್​ಸಿಬಿ 23 ರನ್​ಗಳಿಂದ ಶರಣಾಗಿದೆ. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಚೆನ್ನೈ ಖಾತೆ ತೆರೆದಿದೆ. ರವೀಂದ್ರ ಜಡೇಜಾ ಕಪ್ತಾನನಾಗಿ ಮೊದಲ ಗೆಲುವು ಕಂಡಿದ್ದಾರೆ.  ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಆರ್​ಸಿಬಿ, 10ನೇ ಓವರ್ ತನಕ ಪಂದ್ಯದ ಮೇಲೆ ಬಿಗಿ ಹಿಡಿತ ಹೊಂದಿತ್ತು. ಮೊದಲ ಹತ್ತು ಓವರ್​ಗಳಲ್ಲಿ ಚೆನ್ನೈ ಎರಡು ವಿಕೆಟ್ ಕಳೆದುಕೊಂಡು 60 ರನ್​ಗಳನ್ನಷ್ಟೇ ಗಳಿಸಿತ್ತು. ಆಗ ಜತೆಯಾದ ಶಿವಂ ದುಬೆ ಹಾಗೂ ರಾಬಿನ್ ಉತ್ತಪ್ಪ ಪಂದ್ಯದ ಗತಿಯನ್ನೇ ಬದಲಿಸಿದರು. ಪರಿಣಾಮವಾಗಿ ಸಿಎಸ್​ಕೆ ನಂತರದ ಹತ್ತು ಓವರ್​ಗಳಲ್ಲಿ ಬರೋಬ್ಬರಿ 165 ರನ್ ಪೇರಿಸಿತು. ಸಿಎಸ್​​ಕೆ ಪರ ರಾಬಿನ್ ಉತ್ತಪ್ಪ 50 ಎಸೆತಗಳಲ್ಲಿ 88 ರನ್ ಚಚ್ಚಿದರು. ಅದರಲ್ಲಿ 4 ಬೌಂಡರಿ ಹಾಗೂ 9 ಸಿಕ್ಸರ್ ಸೇರಿತ್ತು. ಶಿವಂ ದುಬೆ 46 ಎಸೆತಗಳಲ್ಲಿ 95 ರನ್​ಗಳ ಸ್ಫೋಟಕ ಆಟವಾಡಿ ಔಟ್ ಆಗದೆ ಉಳಿದರು. ಈ ಇನ್ನಿಂಗ್ಸ್​ನಲ್ಲಿ ದುಬೆ ಅವರಿಂದ 5 ಫೋರ್ ಹಾಗೂ 8 ಸಿಕ್ಸರ್ ಸಿಡಿಸಲ್ಪಟ್ಟವು. ದುಬೆ- ಉತ್ತಪ್ಪ ಜತೆಯಾಟ ಸಾಗುತ್ತಿದ್ದಾಗ ಈರ್ವರೂ ಶತಕ ಗಳಿಸುವ ನಿರೀಕ್ಷೆ ಇತ್ತು. ಕೊನೆಯ ಓವರ್​ಗಳಲ್ಲಿ ಆರ್​ಸಿಬಿ ತುಸು ಪ್ರತಿರೋಧ ಒಡ್ಡಿದ ಪರಿಣಾಮ ಇದು ಸಾಧ್ಯವಾಗಲಿಲ್ಲ. ಒಟ್ಟಾರೆ ಸಿಎಸ್​ಕೆ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಬರೋಬ್ಬರಿ 216 ರನ್​ ಗಳಿಸಿ ಬೃಹತ್ ಗುರಿಯನ್ನು ಆರ್​ಸಿಬಿಗೆ ನೀಡಿತು.

ಹರ್ಷಲ್ ಪಟೇಲ್ ಇಲ್ಲದ ಆರ್​ಸಿಬಿ ಇನ್ನಿಂಗ್ಸ್ ಮಧ್ಯದ ಓವರ್​ಗಳಲ್ಲಿ ಸಂಪೂರ್ಣ ಹಳಿತಪ್ಪಿತ್ತು. ಪದಾರ್ಪಣೆ ಪಂದ್ಯವಾಡಿದ ಜೋಶ್ ಹ್ಯಾಝಲ್​ವುಡ್ ಹಾಗೂ ಸ್ಪಿನ್ನರ್ ವನಿಂದು ಹಸರಂಗ ಮಾತ್ರ ಆರ್​ಸಿಬಿ ಪರ ವಿಕೆಟ್ ಪಡೆಯಲು ಸಫಲರಾದರು. ಹಸರಂಗ 3 ಓವರ್​ಗಳಲ್ಲಿ 35 ರನ್ ನೀಡಿ 2 ವಿಕೆಟ್ ಪಡೆದರೆ, ಹ್ಯಾಝಲ್​ವುಡ್ 4 ಓವರ್​ಗಳಲ್ಲಿ 33 ರನ್ ನೀಡಿ 1 ವಿಕೆಟ್ ಪಡೆದರು.

ನಿರೀಕ್ಷಿತ ಪ್ರದರ್ಶನ ತೋರದ ಆರ್​ಸಿಬಿ ಸ್ಟಾರ್​ಗಳು; ಮಧ್ಯಮ ಕ್ರಮಾಂಕವೊಂದೇ ಗಮನಾರ್ಹ ಅಂಶ!

ಆರ್​​ಸಿಬಿಯ ಇತ್ತೀಚಿನ ಪ್ರದರ್ಶಗಳಲ್ಲಿ ಮಧ್ಯಮ ಕ್ರಮಾಂಕದ ಕೊಡುಗೆ ಅದ್ಭುತವಾಗಿ ಮೂಡಿಬರುತ್ತಿದೆ. ಆದರೆ ಮಧ್ಯಮ ಕ್ರಮಾಂಕ ಕ್ಲಿಕ್ ಆಗುವಾಗ ಆರಂಭಿಕರಿಂದ ಉತ್ತಮ ಜತೆಯಾಟ ಸಿಕ್ಕುತ್ತಿಲ್ಲ. ಸಿಎಸ್​ಕೆ ವಿರುದ್ಧವೂ ಆರ್​ಸಿಬಿ ಬ್ಯಾಟಿಂಗ್ ಇದೇ ಸಮಸ್ಯೆ ಎದುರಿಸಿತು. ಕಪ್ತಾನ ಫಾಫು ಡು ಪ್ಲೆಸಿಸ್ 8 ರನ್​ಗಳಿಗೆ, ಅನುಜ್ ರಾವತ್ 12 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಮಹತ್ವದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 1 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಪರಿಣಾಮವಾಗಿ ಪವರ್​ಪ್ಲೇಯೊಳಗೆ ಆರ್​ಸಿಬಿ 3 ವಿಕೆಟ್ ಕಳೆದುಕೊಂಡಿತ್ತು.

ನಾಲ್ಕನೇ ಕ್ರಮಾಂಕದಲ್ಲಿ ಬಂದ ಮ್ಯಾಕ್ಸ್​ವೆಲ್ ಆರಂಭದಿಂದಲೇ ಅಬ್ಬರಿಸಿದರು. 11 ಎಸೆತಗಳಲ್ಲಿ 26 ರನ್ ಗಳಿಸಿದ್ದ ಅವರು ಅದಾಗಲೇ 2 ಬೌಂಡರಿ, 2 ಸಿಕ್ಸರ್ ಬಾರಿಸಿದ್ದರು. ಆದರೆ ರವೀಂದ್ರ ಜಡೇಜಾ ಮ್ಯಾಕ್ಸಿಗೆ ಪೆವಿಲಿಯನ್ ಹಾದಿ ತೋರಿಸಿದರು. ಸುಯಶ್ ಪ್ರಭುದೇಸಾಯಿ ಮೊದಲ ಪಂದ್ಯದಲ್ಲೇ ಗಮನಾರ್ಹ ಪ್ರದರ್ಶನ ನೀಡಿದರು. 18 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 34 ರನ್ ಗಳಿಸಿದರು.

ಶಾಬಾಜ್ ಅಹ್ಮದ್ ಅವರ ಅದ್ಭುತ ಫಾರ್ಮ್ ಈ ಪಂದ್ಯದಲ್ಲೂ ಮುಂದುವರೆಯಿತು. 27 ಎಸೆತಗಳಲ್ಲಿ 41 ರನ್​ಗಳಲ್ಲಿ ಅವರು ಸಿಡಿಸಿದರು. ಆದರೆ ಆರ್​ಸಿಬಿ ಪರ ದೊಡ್ಡ ಜತೆಯಾಟ ಮೂಡಿಬರಲಿಲ್ಲ. ದಿನೇಶ್ ಕಾರ್ತಿಕ್ ಕ್ರೀಸ್​ಗೆ ಇಳಿದಾಗ ಅವರಿದ್ದ ಫಾರ್ಮ್​ನಲ್ಲಿ ಅಭಿಮಾನಿಗಳಿಗೆ ಗೆಲ್ಲುವ ನಿರೀಕ್ಷೆ ಇತ್ತು. 14 ಎಸೆತಗಳಲ್ಲಿ 2 ಬಂಡರಿ 3 ಸಿಕ್ಸರ್ ಮೂಲದ 34 ರನ್​ ಗಳಿಸಿದ್ದ ಡಿಕೆ ಬ್ರಾವೋ ಎಸೆತದಲ್ಲಿ ಔಟ್ ಆದರು. ಅಂತಿಮವಾಗಿ ಆರ್​ಸಿಬಿ 9 ವಿಕೆಟ್ ನಷ್ಟಕ್ಕೆ 193 ರನ್ ಗಳಿಸಿ, 23 ರನ್​ಗಳಿಂದ ಸಿಎಸ್​ಕೆ ಶರಣಾಯಿತು. ಸಿಎಸ್​ಕೆ ಪರ ಮಹೀಶ್ ತೀಕ್ಷಣ 4 ವಿಕೆಟ್ ಹಾಗೂ ಜಡೇಜಾ 3 ವಿಕೆಟ್ ಪಡೆದರು. ಪಂದ್ಯದ ಗತಿಯನ್ನೇ ಬದಲಿಸಿದ ಶಿವಂ ದುಬೆಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು.

ಆರ್​ಸಿಬಿಗೆ ಈ ಪಂದ್ಯ ಎಚ್ಚರಿಕೆಯ ಸೂಚನೆ ನೀಡಿದೆ. ಬೌಲಿಂಗ್ ವಿಭಾಗ ಹಾಗೂ ಆರಂಭಿಕ ಜತೆಯಾಟದ ಬಗ್ಗೆ ತಂಡ ಇನ್ನಷ್ಟು ಎಚ್ಚರ ಗಮನ ಹರಿಸಬೇಕಿದೆ. ಇತ್ತ ಸಿಎಸ್​ಕೆ ಆರ್​ಸಿಬಿ ವಿರುದ್ಧ ಅಧಿಕಾರಯುತ ಗೆಲುವಿನ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಖಾತೆ ತೆರೆದಿದೆ. ಇಂದು (ಬುಧವಾರ) ಮುಂಬೈ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಲಿವೆ.

ಇದನ್ನೂ ಓದಿ: IPL 2022: ಶ್ರೀಲಂಕಾದ ಖ್ಯಾತ ಕ್ರಿಕೆಟಿಗ ಅರ್ಜುನ ರಣತುಂಗಾ ಐಪಿಎಲ್​ ಬಿಡಿ ಎಂದಿದ್ದೇಕೆ?

IPL 2022: CSK ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಐಪಿಎಲ್​ನಿಂದ ಔಟ್

ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ