AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂದ್ಯ ಆರಂಭಕ್ಕೂ ಮೊದಲೇ ಆರ್​​ಸಿಬಿಗೆ ಬಿಗ್ ಶಾಕ್; ಈ ಸ್ಟಾರ್ ಪ್ಲೇಯರ್ ಡೌಟ್

CKS Vs RCB: ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಚೆನ್ನೈನಲ್ಲಿ ಮುಖಾಮುಖಿಯಾಗಲಿವೆ. ಭುವನೇಶ್ವರ್ ಕುಮಾರ್ ಅವರ ಗಾಯದಿಂದ ಆರ್​ಸಿಬಿಗೆ ಆತಂಕ ಎದುರಾಗಿದೆ. ಚೆಪಾಕ್‌ನಲ್ಲಿ ಆರ್​ಸಿಬಿ ಈವರೆಗೆ ಗೆದ್ದಿರೋದು ಒಂದೇ ಪಂದ್ಯ. ಹೀಗಾಗಿ ಇದು ಸವಾಲಾಗಿ ಪರಿಣಮಿಸಿದೆ.

ಪಂದ್ಯ ಆರಂಭಕ್ಕೂ ಮೊದಲೇ ಆರ್​​ಸಿಬಿಗೆ ಬಿಗ್ ಶಾಕ್; ಈ ಸ್ಟಾರ್ ಪ್ಲೇಯರ್ ಡೌಟ್
Rcb
ರಾಜೇಶ್ ದುಗ್ಗುಮನೆ
|

Updated on:Mar 28, 2025 | 11:48 AM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂದು (ಮಾರ್ಚ್​ 28) ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಮುಖಾ ಮುಖಿ ಆಗುತ್ತಿವೆ. ಕಳೆದ ಸೀಸನ್​ನಲ್ಲಿ ಚೆನ್ನೈ ತಂಡವನ್ನು ಸೋಲಿಸಿ ಆರ್​ಸಿಬಿ ಕ್ವಾಲಿಫೈಯರ್​ ಪಂದ್ಯಕ್ಕೆ ಅವಕಾಶ ಪಡೆಯಿತು. ಈ ಸೇಡನ್ನು ಚೆನ್ನೈ ತೀರಿಸಿಕೊಳ್ಳಲು ಸಂಚು ರೂಪಿಸಿದೆ. ಇತ್ತ ಆರ್​ಸಿಬಿ ತಂಡವು ಇದಕ್ಕೆ ಪ್ರತಿ ತಂತ್ರ ರೂಪಿಸಿದೆ. ರಾತ್ರಿ 7 ಗಂಟೆಗೆ ಟಾಸ್ ನಡೆಯಲಿದ್ದು, 7.30ಕ್ಕೆ ಪಂದ್ಯ ಆರಂಭ ಆಗಲಿದೆ.

ಇಂದಿನ ಪಂದ್ಯದಲ್ಲೂ ಆರ್​ಸಿಬಿ ವೇಗಿ ಭುವನೇಶ್ವರ್ ಕುಮಾರ್ ಅವರು ಆಡೋದು ಅನುಮಾನ ಎಂದೇ ಹೇಳಲಾಗುತ್ತಿದೆ. ಗಾಯದ ಸಮಸ್ಯೆಯಿಂದ ಅವರು ಹಿಂದಿನ ಪಂದ್ಯದಲ್ಲೂ ಇರಲಿಲ್ಲ. ಈ ಪಂದ್ಯದಲ್ಲೂ ಅವರ ಇರುವಿಕೆ ಇನ್ನೂ ಖಚಿತವಾಗಿಲ್ಲ. ಸ್ಟಾರ್ ಬೌಲರ್ ಇಲ್ಲದೆ ಇರುವುದು ಆರ್​ಸಿಬಿಗೆ ಕಷ್ಟ ಆಗಲಿದೆ.

ಭುವನೇಶ್ವರ್ ಕುಮಾರ್ ಬದಲು ರಸಿಕ್ ದಾರ್ ಸಲಾಮ್ ಅವರು ಬಂದಿದ್ದರು. ಅವರು ಕಳೆದ ಪಂದ್ಯದಲ್ಲಿ ಕೊಂಚ ದುಬಾರಿಯೇ ಆಗಿದ್ದರು. ಆದಾರೆ, ಭುವನೇಶ್ವರ್ ಅವರು ಫಿಟ್ ಆಗಿಲ್ಲ ಎಂದರೆ ರಸಿಕ್ ಅವರಿಗೆ ಅವಕಾಶ ಸಿಗೋದು ಪಕ್ಕಾ ಎನ್ನಲಾಗುತ್ತಿದೆ. ಟಾಸ್ ಬಳಿಕವೇ ಅವರ ಇರುವಿಕೆ ಖಾತ್ರಿ ಆಗಲಿದೆ.

ಇದನ್ನೂ ಓದಿ
Image
ಉತ್ತಮ TRP ಮಧ್ಯೆಯೂ ಕೊನೆಯಾಗಲಿದೆ ಕಲರ್ಸ್​ನ ಈ ಸೂಪರ್ ಹಿಟ್ ಧಾರಾವಾಹಿ?
Image
ದಂಡಿಗೆ, ದಾಳಿಗೆ ಹೆದರಲಿಲ್ಲ, ಹಲ್ಲಿಗೆ ಹೆದರೋದಾ; ಪಾಪ ಗೌತಮಿ ಸ್ಥಿತಿ ನೋಡಿ
Image
ಗಳಿಕೆಯಲ್ಲಿ ಇತಿಹಾಸ; ಮೊದಲ ದಿನ ಗರಿಷ್ಠ ಕಲೆಕ್ಷನ್ ಮಾಡಿದ ಎಲ್​2: ಎಂಪುರಾನ್
Image
ಚಿತ್ರಮಂದಿರದ ಬಾಗಿಲು, ಕಿಟಕಿ, ಕುರ್ಚಿ ಒಡೆದು ಹಾಕಿದ ದರ್ಶನ್ ಫ್ಯಾನ್ಸ್​

ಸ್ವಪ್ನಿಲ್ ಸಿಂಗ್ ಅವರನ್ನು ಕೂಡ ಒಂದು ಆಯ್ಕೆ ಆಗಿ ಆರ್​ಸಿಬಿ ಇಟ್ಟುಕೊಂಡಿದೆ. ಅವರು ಕಳೆದ ಸೀಸನ್​ನಲ್ಲಿ ಉತ್ತಮ ಆಟ ಪ್ರದರ್ಶನ ನೀಡಿದ್ದರು. ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಅವಕಾಶ ಆರ್​ಸಿಬಿಗೆ ಇದೆ. ಭುವನೇಶ್ವರ್ ಬೇಗ ರಿಕವರಿ ಆದರೆ ಆರ್​ಸಿಬಿಗೆ ಬಲ ಸಿಕ್ಕಂತೆ ಆಗಲಿದೆ.

ಭುವನೇಶ್ವರ್ ಕುಮಾರ್ ರೆಕಾರ್ಡ್

ಭುವನೇಶ್ವರ್ ಕುಮಾರ್ ಅವರು ಸಿಎಸ್​ಕೆ ವಿರುದ್ಧ ಒಳ್ಳೆಯ ಟ್ರ್ಯಾಕ್ ರೆಕಾರ್ಡ್ ಹೊಂದಿದ್ದಾರೆ. ಚೆನ್ನೈ ವಿರುದ್ಧ ಆಡಿರುವ 20 ಪಂದ್ಯಗಳಲ್ಲಿ 13 ವಿಕೆಟ್ ತೆಗೆದಿರುವ ಅವರು, 6.90 ಎಕಾನಮಿ ಹೊಂದಿದ್ದಾರೆ. ಹೀಗಾಗಿ, ಹೆಚ್ಚು ವಿಕೆಟ್ ಕೀಳದೇ ಇದ್ದರೂ ರನ್ ನಿಯಂತ್ರಣ ತಂಡಕ್ಕೆ ಸಹಕಾರಿ ಆಗಲಿದೆ. ಪವರ್​ಪ್ಲೇನ್​ಲ್ಲಿ ಎರಡು ಓವರ್​ನ ಭುವನೇಶ್ವರ್ ಮಾಡಿದರೆ ಚೆನ್ನೈನ ಕಡಿಮೆ ಮೊತ್ತಕ್ಕೆ ಕಟ್ಟು ಹಾಕಬಹುದು.

ಇದನ್ನೂ ಓದಿ: ನೋವು, ಬೇಸರ, ಹತಾಶೆ; ಹೈದರಾಬಾದ್ ಸೋಲು ಕಂಡಾಗ ಕಾವ್ಯಾ ಮಾರನ್ ಎಕ್ಸ್​ಪ್ರೆಷನ್ ನೋಡಿ

ಚೆಪಾಕ್ ಸ್ಟೇಡಿಯಂನಲ್ಲಿ ಆರ್​ಸಿಬಿ ಆಡಲು ತುಂಬಾನೇ ಕಷ್ಟಪಡುತ್ತಿದೆ. ಈ ಸ್ಟೇಡಿಯಂನಲ್ಲಿ ಆರ್​ಸಿಬಿ ವಿನ್​ ಆಗಿದ್ದರು 2008ರಲ್ಲೇ ಕೊನೆ! ಆ ಬಳಿಕ ತಂಡಕ್ಕೆ ಇಲ್ಲಿ ಗೆಲುವು ಸಿಕ್ಕೇ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:47 am, Fri, 28 March 25

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ