AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಓವರ್​ನಲ್ಲಿ 5 ಸಿಕ್ಸರ್! ಬಾಂಗ್ಲಾದೇಶ ವಿರುದ್ಧ ಅಬ್ಬರಿಸಿದ ಆರ್​ಸಿಬಿ ಆಟಗಾರ

ಮೊದಲ ಮೂರು ಎಸೆತಗಳಲ್ಲಿ ಸತತ ಮೂರು ಸಿಕ್ಸರ್‌ಗಳನ್ನು ಹೊಡೆದರು. ನಂತರ ನಾಲ್ಕನೇ ಎಸೆತದಲ್ಲಿ ಯಾವುದೇ ರನ್ ಬರಲಿಲ್ಲ. ಆದರೆ ಕೊನೆಯ ಎರಡು ಎಸೆತಗಳಲ್ಲಿ ಅವರು ಮತ್ತೆ ಎರಡು ಸಿಕ್ಸರ್ ಬಾರಿಸಿದರು.

ಒಂದೇ ಓವರ್​ನಲ್ಲಿ 5 ಸಿಕ್ಸರ್! ಬಾಂಗ್ಲಾದೇಶ ವಿರುದ್ಧ ಅಬ್ಬರಿಸಿದ ಆರ್​ಸಿಬಿ ಆಟಗಾರ
ಡಾನ್ ಕ್ರಿಶ್ಚಿಯನ್
TV9 Web
| Edited By: |

Updated on: Aug 07, 2021 | 10:52 PM

Share

ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಅಂತಿಮವಾಗಿ ಟಿ 20 ಸರಣಿಯಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದೆ. ಐದು ಪಂದ್ಯಗಳ ಸರಣಿಯ ನಾಲ್ಕನೇ ಪಂದ್ಯದಲ್ಲಿ, ಪ್ರವಾಸಿ ತಂಡವು 105 ರನ್ ಗಳ ಗುರಿಯನ್ನು ಬೆನ್ನಟ್ಟಿ ರೋಮಾಂಚಕ ಮೂರು ವಿಕೆಟ್​ಗಳ ಗೆಲುವನ್ನು ದಾಖಲಿಸಿತು. ಆಸ್ಟ್ರೇಲಿಯಾ ಆರು ಎಸೆತಗಳು ಬಾಕಿ ಇರುವಾಗ ಗುರಿಯನ್ನು ಬೆನ್ನಟ್ಟಿತು ಮತ್ತು ಸರಣಿಯ ಮೊದಲ ಪಂದ್ಯವನ್ನು ಗೆದ್ದುಕೊಂಡಿತು. ಬಾಂಗ್ಲಾದೇಶ ತಂಡವು ಮೊದಲ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯನ್ನು ಗೆದ್ದಿದೆ. ಈ ಮೊದಲು ಬಾಂಗ್ಲಾದೇಶ ತಂಡವು ಕೇವಲ 9 ವಿಕೆಟ್ ಗೆ 104 ರನ್ ಗಳಿಸಲಿತು. ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡವು ಆರಂಭದಲ್ಲಿ ಮುಗ್ಗರಿಸಿತು. ಆದರೆ ಡಾನ್ ಕ್ರಿಶ್ಚಿಯನ್ (39) ಮತ್ತು ಆಷ್ಟನ್ ಅಗರ್ (27) ಇನ್ನಿಂಗ್ಸ್‌ಗಳಿಂದ ಗುರಿ ಸಾಧಿಸಿತು. ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿರುವ ಕ್ರಿಶ್ಚಿಯನ್ (ಡಾನ್ ಕ್ರಿಶ್ಚಿಯನ್), ಶಕಿಬ್ ಅಲ್ ಹಸನ್ ಅವರ ಇನ್ನಿಂಗ್ಸ್ ನಲ್ಲಿ ಐದು ಸಿಕ್ಸರ್ ಬಾರಿಸಿದರು. ಆಸ್ಟ್ರೇಲಿಯಾ ಇನ್ನಿಂಗ್ಸ್‌ನ ನಾಲ್ಕನೇ ಓವರ್‌ನಲ್ಲಿ ಅವರು ಈ ಸಾಧನೆ ಮಾಡಿದರು.

ಟಾಸ್ ಗೆದ್ದು ಮೊದಲು ಆಡಿದ ಬಾಂಗ್ಲಾದೇಶ ಉತ್ತಮವಾಗಿ ಆರಂಭಿಸಿ 3.3 ಓವರ್ ಗಳಲ್ಲಿ 24 ರನ್ ಸೇರಿಸಿತು. ಆದರೆ ಮೊಹಮ್ಮದ್ ನಯೀಮ್ (28) ಮತ್ತು ಸೌಮ್ಯ ಸರ್ಕಾರ್ (8) ಔಟಾದ ನಂತರ, ಅವರ ಇನ್ನಿಂಗ್ಸ್ ದಾರಿ ತಪ್ಪಿತು. ನಾಯಕ ಮಹ್ಮದುಲ್ಲಾ ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ನೂರುಲ್ ಹಸನ್ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಈ ಕಾರಣದಿಂದಾಗಿ ತಂಡದ ಸ್ಕೋರ್ ಒಂದು ವಿಕೆಟ್ ಗೆ 48 ರಿಂದ 4 ವಿಕೆಟ್​ಗೆ 51 ರನ್ ಆಯಿತು. ಅಫೀಫ್ ಹೊಸೈನ್ (20) ಮತ್ತು ಮೆಹದಿ ಹಸನ್ (23) ಒಟ್ಟಾಗಿ ಕೊನೆಯಲ್ಲಿ ವೇಗವಾಗಿ ರನ್ ಗಳಿಸಿದರು ಮತ್ತು ತಂಡವನ್ನು 100ರ ಗಡಿ ದಾಟಿಸಿದರು. ಆಸ್ಟ್ರೇಲಿಯಾ ಪರವಾಗಿ, ಸ್ಪಿನ್ನರ್ ಮಿಚೆಲ್ ಸ್ವೇಪ್ಸನ್ 12 ರನ್ ಗೆ ಮೂರು ವಿಕೆಟ್ ಮತ್ತು ಆಂಡ್ರ್ಯೂ ಟೈ 18 ರನ್ ಗೆ ಮೂರು ವಿಕೆಟ್ ಪಡೆದರು. ಬಾಂಗ್ಲಾದೇಶ ತನ್ನ ಇನ್ನಿಂಗ್ಸ್​ನಲ್ಲಿ ಕೇವಲ ಮೂರು ಸಿಕ್ಸರ್ ಮತ್ತು ನಾಲ್ಕು ಬೌಂಡರಿಗಳನ್ನು ಬಾರಿಸಿತು.

ಶಕೀಬ್ ಎಸೆತಗಳಲ್ಲಿ ಕ್ರಿಶ್ಚಿಯನ್ ರನ್ ಲೂಟಿ ರನ್ ಬೆನ್ನಟ್ಟಿದ ಆಸ್ಟ್ರೇಲಿಯಾ ಮೊದಲ ಓವರ್ ನಲ್ಲಿಯೇ ನಾಯಕ ಮ್ಯಾಥ್ಯೂ ವೇಡ್ ಅವರನ್ನು ಕಳೆದುಕೊಂಡಿತು. ಆದರೆ ಮೂರನೆಯ ಸ್ಥಾನಕ್ಕೆ ಬಡ್ತಿ ಪಡೆಯುವ ಮೂಲಕ, ಡಾನ್ ಕ್ರಿಶ್ಚಿಯನ್ ಕ್ರೀಡಾಂಗಣದಲ್ಲಿ ಬಿರುಗಾಳಿಯನ್ನು ಸೃಷ್ಟಿಸಿದರು. ಅವರು ಇನ್ನಿಂಗ್ಸ್​ನ ನಾಲ್ಕನೇ ಓವರ್​ನಲ್ಲಿ ಸಿಕ್ಸರ್ ಸುರಿಮಳೆ ಗೈದರು. ಈ ಬೌಲರ್‌ನ ಓವರ್‌ನಲ್ಲಿ ಅವರು ಐದು ಸಿಕ್ಸರ್‌ಗಳನ್ನು ಹೊಡೆದರು. ಮೊದಲ ಮೂರು ಎಸೆತಗಳಲ್ಲಿ ಸತತ ಮೂರು ಸಿಕ್ಸರ್‌ಗಳನ್ನು ಹೊಡೆದರು. ನಂತರ ನಾಲ್ಕನೇ ಎಸೆತದಲ್ಲಿ ಯಾವುದೇ ರನ್ ಬರಲಿಲ್ಲ. ಆದರೆ ಕೊನೆಯ ಎರಡು ಎಸೆತಗಳಲ್ಲಿ ಅವರು ಮತ್ತೆ ಎರಡು ಸಿಕ್ಸರ್ ಬಾರಿಸಿದರು. ಈ ಮೂಲಕ ಆಸ್ಟ್ರೇಲಿಯಾ ನಾಲ್ಕು ಓವರ್​ಗಳಲ್ಲಿ 45 ರನ್ ಗಳಿಸಿತು.

Follow Us
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?