AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಮಾಜಿ ನಾಯಕ SRH ತಂಡದ ಹೊಸ ಕೋಚ್..!

Daniel Vettori: ಐಪಿಎಲ್​ನಲ್ಲಿ ಆರ್​ಸಿಬಿ ಪರ 34 ಪಂದ್ಯಗಳನ್ನಾಡಿರುವ ವೆಟ್ಟೋರಿ ಒಟ್ಟು 38 ವಿಕೆಟ್ ಕಬಳಿಸಿದ್ದಾರೆ. ಅಷ್ಟೇ ಅಲ್ಲದೆ 2011 ರಲ್ಲಿ ವೆಟ್ಟೋರಿ ನಾಯಕತ್ವದಲ್ಲಿ ಆರ್​ಸಿಬಿ ಫೈನಲ್​ ಪ್ರವೇಶಿಸಿತ್ತು ಎಂಬುದು ವಿಶೇಷ.

RCB ಮಾಜಿ ನಾಯಕ SRH ತಂಡದ ಹೊಸ ಕೋಚ್..!
Daniel Vettori
Follow us
TV9 Web
| Updated By: ಝಾಹಿರ್ ಯೂಸುಫ್

Updated on:Aug 07, 2023 | 3:29 PM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಆರ್​ಸಿಬಿ (RCB), ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಹೊಸ ಕೋಚ್​ಗಳನ್ನು ನೇಮಿಸಿಕೊಂಡಿದೆ. ಇದೀಗ ಸನ್​ರೈಸರ್ಸ್ ಹೈದರಾಬಾದ್ (SRH) ಫ್ರಾಂಚೈಸಿ ಕೂಡ ಕೋಚ್ ಸ್ಥಾನದಿಂದ ಬ್ರಿಯಾನ್ ಲಾರಾ ಅವರನ್ನು ಕೆಳಗಿಳಿಸಿದೆ. ಅಲ್ಲದೆ ಹೊಸ ಕೋಚ್ ಆಗಿ ನ್ಯೂಝಿಲೆಂಡ್​ನ ಡೇನಿಯಲ್ ವೆಟ್ಟೋರಿ (Daniel Vettori )ಅವರನ್ನು ನೇಮಿಸಿದೆ.

ಈ ಹಿಂದೆ ಆರ್​ಸಿಬಿ ತಂಡದ ನಾಯಕರಾಗಿ, ಆ ಬಳಿಕ ಕೋಚ್​ ಸ್ಥಾನದಲ್ಲಿ ಕಾಣಿಸಿಕೊಂಡಿದ್ದ ವೆಟ್ಟೋರಿ ಇದೀಗ ಸನ್​ರೈಸರ್ಸ್ ಹೈದರಾಬಾದ್ ತಂಡದೊಂದಿಗೆ ಕೈ ಜೋಡಿಸಿದ್ದಾರೆ. ನ್ಯೂಝಿಲೆಂಡ್ ತಂಡದ ಮಾಜಿ ಎಡಗೈ ಸ್ಪಿನ್ನರ್ ವೆಟ್ಟೋರಿ ಪ್ರಸ್ತುತ ಹಂಡ್ರೆಡ್‌ ನಡೆಯುತ್ತಿರುವ ಹಂಡ್ರೆಡ್ ಲೀಗ್​ನಲ್ಲಿ ಬರ್ಮಿಂಗ್ಹ್ಯಾಮ್ ಫೀನಿಕ್ಸ್ ತಂಡದ ಮುಖ್ಯ ತರಬೇತುದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಾಗೆಯೇ ಆಸ್ಟ್ರೇಲಿಯಾ ತಂಡದ ಸಹಾಯಕ ಕೋಚ್ ಸ್ಥಾನದಲ್ಲಿದ್ದಾರೆ. ಇದೀಗ ವರ್ಷಗಳ ಬಳಿಕ ಮತ್ತೆ ಐಪಿಎಲ್​ಗೆ ಹಿಂತಿರುಗುತ್ತಿರುವುದು ವಿಶೇಷ.

ಆರ್​ಸಿಬಿಯ ಮಾಜಿ ಕೋಚ್:

ಐಪಿಎಲ್​ನಲ್ಲಿ ಆರ್​ಸಿಬಿ ಪರ 34 ಪಂದ್ಯಗಳನ್ನಾಡಿರುವ ವೆಟ್ಟೋರಿ ಒಟ್ಟು 38 ವಿಕೆಟ್ ಕಬಳಿಸಿದ್ದಾರೆ. ಅಷ್ಟೇ ಅಲ್ಲದೆ 2011 ರಲ್ಲಿ ವೆಟ್ಟೋರಿ ನಾಯಕತ್ವದಲ್ಲಿ ಆರ್​ಸಿಬಿ ಫೈನಲ್​ ಪ್ರವೇಶಿಸಿತ್ತು ಎಂಬುದು ವಿಶೇಷ. ಇದಾದ ಬಳಿಕ 2015 ರಿಂದ 2018 ರವರೆಗೆ ಆರ್​ಸಿಬಿ ತಂಡದ ಕೋಚ್ ಆಗಿಯೂ ಕಾರ್ಯ ನಿರ್ವಹಿಸಿದ್ದರು. ಇವರ ತರಬೇತಿಯಲ್ಲಿ ಆರ್​ಸಿಬಿ 2015 ರಲ್ಲಿ ಪ್ಲೇಆಫ್ ಹಾಗೂ 2016 ರಲ್ಲಿ ಫೈನಲ್​ಗೆ ಪ್ರವೇಶಿಸಿತ್ತು. ಈ ಎಲ್ಲಾ ಕಾರಣಗಳಿಂದಾಗಿ ಇದೀಗ ಸನ್​ರೈಸರ್ಸ್ ಹೈದರಾಬಾದ್ ತಂಡವು ಡೇನಿಯಲ್ ವೆಟ್ಟೋರಿಯನ್ನು ಮುಖ್ಯ ಕೋಚ್ ಆಗಿ ನೇಮಿಸಿಕೊಂಡಿದೆ.

ಎಸ್​ಆರ್​ಹೆಚ್ ಕಳಪೆ ಪ್ರದರ್ಶನ:

ಕಳೆದ ಎರಡು ಸೀಸನ್​ಗಳಿಂದ ಸನ್​ರೈಸರ್ಸ್​ ಹೈದರಾಬಾದ್ ತಂಡವು ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಐಪಿಎಲ್ 2023 ರಲ್ಲಿ ಬ್ರಿಯಾನ್ ಲಾರಾ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಲಾಗಿತ್ತು. ಆದರೆ ಲಾರಾ ಮುಂದಾಳತ್ವದಲ್ಲಿ ಎಸ್​ಆರ್​ಹೆಚ್​ ಮತ್ತಷ್ಟು ಮುಗ್ಗರಿಸಿತ್ತು.

ಇದನ್ನೂ ಓದಿ: IPL 2024: ಐಪಿಎಲ್​ನಲ್ಲಿ ಮಹತ್ವದ ಬದಲಾವಣೆ..!

ಕಳೆದ ಸೀಸನ್​​ನಲ್ಲಿ 14 ಪಂದ್ಯಗಳನ್ನಾಡಿದ್ದ ಎಸ್​​ಆರ್​ಹೆಚ್ ತಂಡವು ಕೇವಲ 4 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿತ್ತು. ಅಷ್ಟೇ ಅಲ್ಲದೆ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸುವ ಮೂಲಕ ಭಾರೀ ಮುಖಭಂಗಕ್ಕೆ ಒಳಗಾಗಿತ್ತು. ಇದೇ ಕಾರಣದಿಂದಾಗಿ ಇದೀಗ ಮುಖ್ಯ ಕೋಚ್​ ಆಗಿದ್ದ ಬ್ರಿಯಾನ್ ಲಾರಾ ಅವರ ತಲೆದಂಡವಾಗಿದೆ. ಅಲ್ಲದೆ ಆರ್​ಸಿಬಿ ತಂಡವನ್ನು ಫೈನಲ್​ಗೆ ತಲುಪಿಸಿದ್ದ ನಾಯಕ/ಕೋಚ್ ಡೇನಿಯಲ್ ವೆಟ್ಟೋರಿಯನ್ನು ಹೊಸ ಹೆಡ್ ಕೋಚ್​ ಆಗಿ ನೇಮಿಸಲಾಗಿದೆ.

Published On - 3:27 pm, Mon, 7 August 23

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ