AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯ ಆಗ್ತಿದೆ… ವೈಭವ್​ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸೌತ್ ಆಫ್ರಿಕಾ ಕ್ರಿಕೆಟಿಗ!

ಡ್ಯಾರಿಲ್ ಕಲ್ಲಿನನ್ ಸೌತ್ ಆಫ್ರಿಕಾ ಕ್ರಿಕೆಟ್ ತಂಡದ ಮಾಜಿ ದಿಗ್ಗಜ ಮತ್ತು ಅತ್ಯಂತ ಪ್ರತಿಭಾವಂತ ಸ್ಪೆಷಲಿಸ್ಟ್ ಬ್ಯಾಟರ್. 1990ರ ದಶಕದಲ್ಲಿ ಸೌತ್ ಆಫ್ರಿಕಾ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಬೆನ್ನೆಲುಬಾಗಿದ್ದ ಇವರು, ವೇಗ ಹಾಗೂ ಸ್ಪಿನ್ ಬೌಲಿಂಗ್ ಎರಡನ್ನೂ ಸಮನಾಗಿ ಎದುರಿಸುವ ಅದ್ಭುತ ಶೈಲಿಗೆ ಹೆಸರಾಗಿದ್ದರು. ಸೌತ್ ಆಫ್ರಿಕಾ ಪರ 208 ಪಂದ್ಯಗಳನ್ನಾಡಿರುವ ಡ್ಯಾರಿಲ್ ಕಲ್ಲಿನನ್ 17 ಶತಕ ಹಾಗೂ 43 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ದಿಗ್ಗಜ ಕ್ರಿಕೆಟಿಗ, ವೈಭವ್ ಸೂರ್ಯವಂಶಿಯ ಕೆರಿಯರ್​ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಭಯ ಆಗ್ತಿದೆ... ವೈಭವ್​ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸೌತ್ ಆಫ್ರಿಕಾ ಕ್ರಿಕೆಟಿಗ!
Vaibhav Sooryavanshi Image Credit source: GettyImages
ಝಾಹಿರ್ ಯೂಸುಫ್
|

Updated on: Jun 23, 2026 | 2:07 PM

Share

ಕ್ರಿಕೆಟ್ ಲೋಕದ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿ ಸಿಡಿಲಬ್ಬರ ಮುಂದುವರೆದಿದೆ. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿ ಕ್ರಿಕೆಟ್ ಪ್ರೇಮಿಗಳ ಮನಗೆದ್ದಿದ್ದ ಯುವ ದಾಂಡಿಗ ಇತ್ತೀಚೆಗೆ ಶ್ರೀಲಂಕಾ ಎ ವಿರುದ್ಧದ ಏಕದಿನ ಪಂದ್ಯದಲ್ಲೂ ಅಬ್ಬರಿಸಿದ್ದಾರೆ. ಅದು ಕೂಡ ಕೇವಲ 29 ಎಸೆತಗಳಲ್ಲಿ 94 ರನ್​ ಚಚ್ಚುವ ಮೂಲಕ. ಈ ಸ್ಫೋಟಕ ಇನಿಂಗ್ಸ್ ಬೆನ್ನಲ್ಲೇ ಸೌತ್ ಆಫ್ರಿಕಾದ ಮಾಜಿ ದಿಗ್ಗಜ ಬ್ಯಾಟರ್ ಡ್ಯಾರಿಲ್ ಕಲ್ಲಿನನ್ ಅವರು ವೈಭವ್ ಭವಿಷ್ಯದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಡ್ಯಾರಿಲ್ ಕಲ್ಲಿನನ್, ವೈವೈಭವ್ ಸೂರ್ಯವಂಶಿಯ ಬ್ಯಾಟಿಂಗ್ ಶೈಲಿ ಮತ್ತು ಅವರ ಫಿಟ್‌ನೆಸ್ ಬಗ್ಗೆ ನಾನು ತೀವ್ರ ಕಳವಳವಿದೆ. ಏಕೆಂದರೆ ಈ ಹುಡುಗನ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಆತನ ಕೆರಿಯರ್​ ಅಪಾಯಕ್ಕೆ ಸಿಲುಕಲಿದೆ ಎಂದಿದ್ದಾರೆ. ಇದಕ್ಕೆ ಅವರು ಕಾರಣಗಳನ್ನು ಸಹ ನೀಡಿದ್ದಾರೆ.

  • ಭಾರವಾದ ಬ್ಯಾಟ್: 15 ವರ್ಷದ ಸಣ್ಣ ವಯಸ್ಸಿನಲ್ಲೇ ವೈಭವ್ ಸೂರ್ಯವಂಶಿ ಅತ್ಯಂತ ಭಾರವಾದ ಬ್ಯಾಟ್ ಬಳಸಿ ವೇಗವಾಗಿ ಬೀಸುತ್ತಿದ್ದಾರೆ. ಇದರಿಂದ ಅವರ ಮಣಿಕಟ್ಟು, ಮೊಣಕೈ ಹಾಗೂ ಕೀಲುಗಳ ಮೇಲೆ ವಿಪರೀತ ಒತ್ತಡ ಬೀಳುತ್ತಿದೆ ಡ್ಯಾರಿಲ್ ಕಲ್ಲಿನನ್ ಎಂದು ಹೇಳಿದ್ದಾರೆ.
  •  ದೈಹಿಕ ಸಮಸ್ಯೆ: ವೈಭವ್ ಸೂರ್ಯವಂಶಿ ಇನ್ನೂ ಸಣ್ಣ ಹುಡುಗ. ಅವರ ದೇಹ ಇನ್ನೂ ಸಹ ಸಂಪೂರ್ಣವಾಗಿ ಬೆಳೆಯುವ ಹಂತದಲ್ಲಿದೆ. ಇಂತಹ ಸಮಯದಲ್ಲಿ ಅತಿಯಾದ ಆಕ್ರಮಣಕಾರಿ ಪವರ್-ಹಿಟ್ಟಿಂಗ್​ ಮಾಡುವುದರಿಂದ ಮೂಳೆಗಳು ಮತ್ತು ಮಾಂಸಖಂಡಗಳಿಗೆ ಭವಿಷ್ಯದಲ್ಲಿ ಗಂಭೀರ ಹಾನಿಯಾಗಬಹುದು ಎಂದು ಡ್ಯಾರಿಲ್ ಕಲ್ಲಿನನ್ ಎಚ್ಚರಿಸಿದ್ದಾರೆ.

ಡ್ಯಾರಿಲ್ ಕಲ್ಲಿನನ್ ತಮ್ಮ ವಾದಕ್ಕೆ ಭಾರತದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಉದಾಹರಣೆಯನ್ನು ನೀಡಿದ್ದಾರೆ. 2004ರಲ್ಲಿ ಸಚಿನ್ ಅವರು ಭಾರವಾದ ಬ್ಯಾಟ್ ಬಳಸಿದ್ದರಿಂದಲೇ ಭೀಕರ ‘ಟೆನ್ನಿಸ್ ಎಲ್ಬೋ’ ಗಾಯಕ್ಕೆ ತುತ್ತಾಗಿ, ವೃತ್ತಿಜೀವನವೇ ಕೊನೆಗೊಳ್ಳುವ ಹಂತ ತಲುಪಿತ್ತು ಎಂಬುದನ್ನು ನೆನಪಿಸಿದ್ದಾರೆ. ಇದೇ ಕಾರಣದಿಂದಾಗಿ ಯುವ ದಾಂಡಿಗ ಕೆರಿಯರ್ ಬೇಗನೆ ಕೊನೆಗೊಳ್ಳುತ್ತಾ ಎಂಬ ಭಯ ಕಾಡ್ತಿದೆ ಎಂದು ಕಲ್ಲಿನನ್ ಹೇಳಿದ್ದಾರೆ.

ಅದರಲ್ಲೂ ಈ ವಯಸ್ಸಿನಲ್ಲೇ ಅತಿಯಾಗಿ ಪಂದ್ಯಗಳನ್ನು ಆಡುವುದು ಮತ್ತು ನಿರಂತರವಾಗಿ ಸಿಕ್ಸರ್-ಬೌಂಡರಿಗಳ ಮೇಲೆಯೇ ಅವಲಂಬಿತವಾಗುವುದು ಕೂಡ ದೀರ್ಘಾವಧಿಯ ವೃತ್ತಿಜೀವನಕ್ಕೆ ಒಳ್ಳೆಯದಲ್ಲ ಎಂಬುದನ್ನು ಸಹ ಕಲ್ಲಿನನ್ ಒತ್ತಿ ಹೇಳಿದ್ದಾರೆ. ಹೀಗಾಗಿ ವೈಭವ್ ಸೂರ್ಯವಂಶಿ ಈ ಬಗ್ಗೆ ಈಗಲೇ ಎಚ್ಚರಿಕೆ ವಹಿಸಿಕೊಳ್ಳುವುದು ಉತ್ತಮ ಎಂದಿದ್ದಾರೆ.

ಇದನ್ನೂ ಓದಿ: ವಿಸ್ಫೋಟಕ ಸೆಂಚುರಿ ಸಿಡಿಸಿದ ನಿಕಿನ್ ಜೋಸ್: ಪಾಂಡೆ ಪಡೆಗೆ ಸೋಲು!

ಒಟ್ಟಾರೆಯಾಗಿ, ಡ್ಯಾರಿಲ್ ಕಲ್ಲಿನನ್ ಅವರು ವೈಭವ್ ಸೂರ್ಯವಂಶಿ ಅವರ ಅದ್ಭುತ ಪ್ರತಿಭೆಯನ್ನು ಒಪ್ಪಿಕೊಂಡಿದ್ದಾರೆ. ಆದರೆ, ಈ ಯುವ ಆಟಗಾರ ಕಾರ್ಯೊತ್ತಡವನ್ನು ಸರಿಯಾಗಿ ನಿರ್ವಹಿಸದಿದ್ದರೆ, ಗಾಯಗಳ ಸಮಸ್ಯೆಯಿಂದಾಗಿ ಅವರ ಸುದೀರ್ಘ ಕ್ರಿಕೆಟ್ ಭವಿಷ್ಯಕ್ಕೆ ಧಕ್ಕೆಯಾಗಬಹುದು ಎಂದು ಎಚ್ಚರಿಸಿದ್ದಾರೆ.

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್