AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

19 ವರ್ಷದೊಳಗಿನ ಬಾಲಕಿಯರ ಏಕದಿನ ಕ್ರಿಕೆಟ್ ಪಂದ್ಯಾವಳಿ; ರಾಜ್ಯ ಕ್ರಿಕೆಟ್ ತಂಡಕ್ಕೆ ದಾವಣಗೆರೆಯ ರಕ್ಷಿತಾ ನಾಯಕ್ ಆಯ್ಕೆ!

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಗುರುವಾರ ಪ್ರಕಟಿಸಿದ ರಾಜ್ಯದ 20 ಜನ ಆಟಗಾರರ ಪಟ್ಟಿಯಲ್ಲಿ ಕುಮಾರಿ ರಕ್ಷಿತಾ ನಾಯಕ ಅವರು 6 ನೇ ಆಟಗಾರರಿಗೆ ಆಯ್ಕೆಗೊಂಡಿದ್ದು, ಈ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

19 ವರ್ಷದೊಳಗಿನ ಬಾಲಕಿಯರ ಏಕದಿನ ಕ್ರಿಕೆಟ್ ಪಂದ್ಯಾವಳಿ; ರಾಜ್ಯ ಕ್ರಿಕೆಟ್ ತಂಡಕ್ಕೆ ದಾವಣಗೆರೆಯ ರಕ್ಷಿತಾ ನಾಯಕ್ ಆಯ್ಕೆ!
ಕುಮಾರಿ ರಕ್ಷಿತಾ ನಾಯಕ
TV9 Web
| Edited By: |

Updated on: Sep 17, 2021 | 5:01 PM

Share

ದಾವಣಗೆರೆ-ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಇದೇ ಸೆಪ್ಟಂಬರ್ 28 ರಿಂದ ಅಕ್ಟೋಬರ್ 4 ರ ವರೆಗೆ ರಾಜಾಸ್ತಾನದ ಜೈಪುರದಲ್ಲಿ ಆಯೋಜಿಸಿರುವ 19 ವರ್ಷದೊಳಗಿನ ಬಾಲಕಿಯರ ಏಕದಿನ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದೆ. ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ರಾಜ್ಯ ಕ್ರಿಕೆಟ್ ತಂಡಕ್ಕೆ ದಾವಣಗೆರೆ ನಗರದ ಎವಿಕೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ರಕ್ಷಿತಾ ನಾಯಕ ಆಯ್ಕೆಯಾಗಿದ್ದಾರೆ. ಕು.ರಕ್ಷಿತಾ ನಾಯಕ ಅವರು ರೈತ ಮುಖಂಡ ಹುಚ್ಚವ್ವನಹಳ್ಳಿ ಮಂಜುನಾಥ್ ಅವರ ಪುತ್ರಿ.

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಗುರುವಾರ ಪ್ರಕಟಿಸಿದ ರಾಜ್ಯದ 20 ಜನ ಆಟಗಾರರ ಪಟ್ಟಿಯಲ್ಲಿ ಕುಮಾರಿ ರಕ್ಷಿತಾ ನಾಯಕ ಅವರು 6 ನೇ ಆಟಗಾರರಿಗೆ ಆಯ್ಕೆಗೊಂಡಿದ್ದು, ಈ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಎಲೈಟ್-ಇ ಗುಂಪಿನಲ್ಲಿ ಪಂಜಾಬ್, ಒಡಿಸ್ಸಾ, ಹಿಮಾಚಲ ಪ್ರದೇಶ, ತ್ರಿಪುರಾ, ಮಿಜೋರಾಂ ಮತ್ತು ಕರ್ನಾಟಕ ತಂಡಗಳು ಲೀಗ್ ಹಂತದಲ್ಲಿ ಪರಸ್ಪರ ಸೆಣಸಲಿದ್ದು, ಅಗ್ರ ತಂಡ ಮುಂದಿನ ನಾಕೌಟ್ ಹಂತ ತಲುಪಲಿದೆ. ಬ್ಯಾಟರ್​ ಹಾಗೂ ವೇಗದ ಬೌಲರ್ ಆಗಿದ್ದಾರೆ ರಕ್ಷಿತಾ ನಾಯಕ್.

ಕರ್ನಾಟಕ ತಂಡ ಹೀಗಿದೆ; ಚಂದಸಿ ಕೃಷ್ಣಮೂರ್ತಿ(ನಾ)ರೋಷನಿ ಕಿರಣ್(ಉ.ನಾ), ನಿಕಿ ಪ್ರಸಾದ್,ಕ್ರಿಷಿಕಾ ರೆಡ್ಡಿ, ಪೂಜಾ ಧನಂಜಯ್, ರಕ್ಷಿತಾನಾಯಕ,ಮೈಥಿಲಿ ವಿನೋದ್, ಸ್ನೇಹ ಜಗದೀಶ್, ಪೂಜಾ ಕುಮಾರಿ ಎಂ, ಪ್ರೇರಣ ಜಿ.ಆರ್, ಸೌಮ್ಯವರ್ಮ(ವಿಕೀ), ಸವಿ ಸುರೇಂದ್ರ, ರೀಮಾ ಫರೀದ್, ನಿರ್ಮಿತ ಸಿ.ಜೆ, ರೋಹಿತ ಚೌದ್ರಿ ಪಿ, ನಜ್ಮಾ ಉನ್ನೀಸ, ಅನುಪಮ ಜಿ.ಬೋಸ್ಲೆ(ವಿಕೀ), ಸಲೊನಿ ಪಿ,ಹರ್ಷಿತಾ ಶೇಖರ್, ಅನುಶ್ರೀ ಸಮಗುಂದ ಅವರುಗಳು ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಪ್ರವಾಸ ಮುಂದುವರಿಸುವುದು ಅಸಾಧ್ಯ! ಪಾಕ್ ಪ್ರವಾಸವನ್ನು ರದ್ದುಗೊಳಿಸಿದ ನ್ಯೂಜಿಲೆಂಡ್ ಕ್ರಿಕೆಟ್ ಹೇಳಿದ್ದೇನು?

Follow Us
Web contact
Web contact

TV9 Kannada

Read More