AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

David Miller: ಕಿಲ್ಲರ್ ಮಿಲ್ಲರ್ ಕ್ಲೀನ್ ಬೌಲ್ಡ್: ಹೀಗೊಂದು ಇತಿಹಾಸ ಬರೆದ ಅರ್ಷದೀಪ್ ಸಿಂಗ್

India vs South Africa 1st T20: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 106 ರನ್​ ಕಲೆಹಾಕಿತು. ಟೀಮ್ ಇಂಡಿಯಾ ಪರ 4 ಓವರ್​ಗಳಲ್ಲಿ 32 ರನ್​ ನೀಡಿ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆದರೆ, ದೀಪಕ್ ಚಹರ್ 4 ಓವರ್​ನಲ್ಲಿ 24 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು.

David Miller: ಕಿಲ್ಲರ್ ಮಿಲ್ಲರ್ ಕ್ಲೀನ್ ಬೌಲ್ಡ್: ಹೀಗೊಂದು ಇತಿಹಾಸ ಬರೆದ ಅರ್ಷದೀಪ್ ಸಿಂಗ್
David Miller
TV9 Web
| Edited By: |

Updated on: Sep 29, 2022 | 11:05 AM

Share

ತಿರುವನಂತಪುರದ ಗ್ರೀನ್​ಫೀಲ್ಡ್ ಮೈದಾನದಲ್ಲಿ ನಡೆದ ಭಾರತ-ಸೌತ್ ಆಫ್ರಿಕಾ (India vs South Africa 1st T20) ನಡುವಣ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಜಯ ಸಾಧಿಸಿತು. ಈ ಗೆಲುವಿನ ರೂವಾರಿಗಳೆಂದರೆ ಟೀಮ್ ಇಂಡಿಯಾ ಬೌಲರ್​ಗಳು. ಏಕೆಂದರೆ ಕೇವಲ 9 ರನ್​ಗಳಿಗೆ ಸೌತ್ ಆಫ್ರಿಕಾ ತಂಡದ ಟಾಪ್ 5 ಬ್ಯಾಟ್ಸ್​ಮನ್​ಗಳನ್ನು ಪೆವಿಲಿಯನ್​ಗೆ ಕಳುಹಿಸುವ ಮೂಲಕ ಭರ್ಜರಿ ಆರಂಭ ಒದಗಿಸಿದ್ದರು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ್ದ ಟೀಮ್ ಇಂಡಿಯಾಗೆ ಮೊದಲ ಓವರ್​ನಲ್ಲೇ ದೀಪಕ್ ಚಹರ್ ನಾಯಕ ತೆಂಬಾ ಬವುಮಾರ ವಿಕೆಟ್ ಪಡೆದು ಪ್ರಥಮ ಯಶಸ್ಸು ತಂದುಕೊಟ್ಟಿದ್ದರು. ಇನ್ನು ಅರ್ಷದೀಪ್ ಸಿಂಗ್ ಎಸೆದ 2ನೇ ಓವರ್​ನಲ್ಲಿ ಕ್ವಿಂಟನ್ ಡಿಕಾಕ್ ಕೂಡ ಬೌಲ್ಡ್ ಆದರು. ಆ ಬಳಿಕ ಬಂದ ರಿಲೀ ರೊಸ್ಸೊ ಅವರನ್ನು ಮೊದಲ ಎಸೆತದಲ್ಲೇ ಅರ್ಷದೀಪ್ ಸಿಂಗ್ ಪೆವಿಲಿಯನ್​ಗೆ ಕಳುಹಿಸಿದರು.

ಅಲ್ಲದೆ ಮರುಎಸೆತದಲ್ಲೇ ಟಿ20 ಕ್ರಿಕೆಟ್​ನ ಕಿಲ್ಲರ್ ಬ್ಯಾಟ್ಸ್​ಮನ್ ಎಂದೇ ಗುರುತಿಸಿಕೊಂಡಿರುವ ಡೇವಿಡ್ ಮಿಲ್ಲರ್ ರನ್ನು ಇನ್​ ಸ್ವಿಂಗ್ ಎಸೆತದ ಮೂಲಕ ಅರ್ಷದೀಪ್ ಸಿಂಗ್ ಕ್ಲೀನ್ ಬೌಲ್ಡ್ ಮಾಡಿದರು. ವಿಶೇಷ ಎಂದರೆ ಈ ಒಂದು ವಿಕೆಟ್ ಇದೀಗ ದೀರ್ಘಾವಧಿಯ ದಾಖಲೆಗೆ ಬ್ರೇಕ್ ಹಾಕಿದೆ.

ಅಂದರೆ ಡೇವಿಡ್ ಮಿಲ್ಲರ್ ಇದಕ್ಕೂ ಮುನ್ನ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 90 ಇನಿಂಗ್ಸ್​ ಆಡಿದ್ದಾರೆ. ಈ ವೇಳೆ ಒಮ್ಮೆಯೂ ಶೂನ್ಯಕ್ಕೆ ಔಟಾಗಿರಲಿಲ್ಲ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಡಕ್​ ಔಟ್ ಆಗದೇ ಹೊಸ ಇತಿಹಾಸವನ್ನು ಮಿಲ್ಲರ್ ನಿರ್ಮಿಸಿದ್ದರು. ಆದರೆ ಈ ಇತಿಹಾಸವನ್ನು ಕೇವಲ ಒಂದು ಎಸೆತದ ಮೂಲಕ ಅರ್ಷದೀಪ್ ಸಿಂಗ್ ಅಳಿಸಿಹಾಕಿದ್ದಾರೆ.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

91ನೇ ಇನಿಂಗ್ಸ್​ನಲ್ಲಿ ಎದುರಿಸಿದ ಮೊದಲ ಎಸೆತದಲ್ಲೇ ಡೇವಿಡ್ ಮಿಲ್ಲರ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವಲ್ಲಿ ಅರ್ಷದೀಪ್ ಸಿಂಗ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಕಿಲ್ಲರ್ ಮಿಲ್ಲರ್​ರನ್ನು ಶೂನ್ಯಕ್ಕೆ ಔಟ್ ಮಾಡಿದ ಮೊದಲ ಬೌಲರ್ ಎಂಬ ಹೊಸ ಇತಿಹಾಸ ನಿರ್ಮಿಸಿದ್ದಾರೆ ಟೀಮ್ ಇಂಡಿಯಾದ ಯುವ ಎಡಗೈ ವೇಗಿ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 106 ರನ್​ ಕಲೆಹಾಕಿತು. ಟೀಮ್ ಇಂಡಿಯಾ ಪರ 4 ಓವರ್​ಗಳಲ್ಲಿ 32 ರನ್​ ನೀಡಿ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆದರೆ, ದೀಪಕ್ ಚಹರ್ 4 ಓವರ್​ನಲ್ಲಿ 24 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು.

ಅದರಂತೆ 107 ರನ್​ಗಳ ಸಾಧಾರಣ ಗುರಿ ಪಡೆದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಅರ್ಧಶತಕ ಬಾರಿಸಿ ಅಬ್ಬರಿಸಿದರು. ಪರಿಣಾಮ ಕೇವಲ 16.4 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 110 ರನ್​ಗಳಿಸಿ 8 ವಿಕೆಟ್​ಗಳಿಂದ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ 3 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಅಂತರದಿಂದ ಮುನ್ನಡೆ ಪಡೆದುಕೊಂಡಿದೆ.

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್