AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬ್ಯಾಷ್ ಪಂದ್ಯವನ್ನಾಡಲು ಹೆಲಿಕಾಪ್ಟರ್​ನಲ್ಲಿ ಬಂದಿಳಿದ ವಾರ್ನರ್; ವಿಡಿಯೋ ನೋಡಿ

David Warner: ರಾಷ್ಟ್ರೀಯ ತಂಡಕ್ಕೆ ವಿದಾಯ ಹೇಳಿದ್ದ ಬಳಿಕ ಟಿ20 ಲೀಗ್​ನಲ್ಲಿ ಕಣಕ್ಕಿಳಿಯುತ್ತಿರುವ ವಾರ್ನರ್​ರನ್ನು ಹೆಲಿಕಾಪ್ಟರ್ ಮೂಲಕ ನೇರವಾಗಿ ಸಿಡ್ನಿ ಮೈದಾನಕ್ಕೆ ಕರೆತರಲಾಯಿತು. ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ ಕ್ರಿಕೆಟಿಗನೊಬ್ಬ ಕ್ರಿಕೆಟ್ ಮೈದಾನಕ್ಕೆ ಹೆಲಿಕಾಪ್ಟರ್​ನಲ್ಲಿ ಬಂದಿಳಿದ ದಾಖಲೆ ಡೇವಿಡ್ ವಾರ್ನರ್ ಹೆಸರಿನಲ್ಲಿ ದಾಖಲಾಯಿತು.

ಬಿಗ್ ಬ್ಯಾಷ್ ಪಂದ್ಯವನ್ನಾಡಲು ಹೆಲಿಕಾಪ್ಟರ್​ನಲ್ಲಿ ಬಂದಿಳಿದ ವಾರ್ನರ್; ವಿಡಿಯೋ ನೋಡಿ
ಡೇವಿಡ್ ವಾರ್ನರ್
ಪೃಥ್ವಿಶಂಕರ
|

Updated on:Jan 12, 2024 | 7:48 PM

Share

ಕೆಲವೇ ದಿನಗಳ ಹಿಂದೆ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್​ಗೆ ತನ್ನ ತವರು ಮೈದಾನವಾದ ಸಿಡ್ನಿಯಲ್ಲೇ ವಿದಾಯ ಹೇಳಿದ್ದ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ (David Warner) ಇದೀಗ ಬಿಗ್ ಬ್ಯಾಷ್ ಲೀಗ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಿಗ್ ಬ್ಯಾಷ್​ನಲ್ಲಿ (Big Bash League) ಇಂದು ಸಿಡ್ನಿ ಥಂಡರ್ ಮತ್ತು ಸಿಡ್ನಿ ಸಿಕ್ಸರ್ಸ್ ತಂಡಗಳ ನಡುವೆ ಪಂದ್ಯ ನಡೆಯಿತು. ಈ ಪಂದ್ಯ ಆರಂಭಕ್ಕೂ ಮುನ್ನ ಸಿಡ್ನಿ ಥಂಡರ್ ಪರ ಕಣಕ್ಕಿಳಿಯುವ ಸಲುವಾಗಿ ಡೇವಿಡ್ ವಾರ್ನರ್ ಸಿಡ್ನಿ ಮೈದಾನಕ್ಕೆ ಆಗಮಿಸಿದರು. ಸಿಡ್ನಿ ಮೈದಾನಕ್ಕೆ ವಾರ್ನರ್ ಆಗಮನ ಹೇಗಿತ್ತೆಂದರೆ ಕ್ರಿಕೆಟ್ ಇತಿಹಾಸದಲ್ಲೇ ಕ್ರಿಕೆಟಿಗೊಬ್ಬನಿಗೆ ಈ ರೀತಿಯ ಗ್ಯ್ರಾಂಡ್ ಎಂಟ್ರಿ ಹಿಂದೆಂದೂ ಸಿಕ್ಕಿರಲಿಲ್ಲ. ವಾಸ್ತವವಾಗಿ ರಾಷ್ಟ್ರೀಯ ತಂಡಕ್ಕೆ ವಿದಾಯ ಹೇಳಿದ್ದ ಬಳಿಕ ಟಿ20 ಲೀಗ್​ನಲ್ಲಿ ಕಣಕ್ಕಿಳಿಯುತ್ತಿರುವ ವಾರ್ನರ್​ರನ್ನು ಹೆಲಿಕಾಪ್ಟರ್ (helicopter) ಮೂಲಕ ನೇರವಾಗಿ ಸಿಡ್ನಿ ಮೈದಾನಕ್ಕೆ ಕರೆತರಲಾಯಿತು. ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ ಕ್ರಿಕೆಟಿಗನೊಬ್ಬ ಕ್ರಿಕೆಟ್ ಮೈದಾನಕ್ಕೆ ಹೆಲಿಕಾಪ್ಟರ್​ನಲ್ಲಿ ಬಂದಿಳಿದ ದಾಖಲೆ ಡೇವಿಡ್ ವಾರ್ನರ್ ಹೆಸರಿನಲ್ಲಿ ದಾಖಲಾಯಿತು.

ಅಷ್ಟಕ್ಕೂ ವಾರ್ನರ್ ಅವರ ಈ ರೀತಿಯ ಗ್ರ್ಯಾಂಡ್ ಎಂಟ್ರಿಯ ಹಿಂದೆ ಕಾರಣವೂ ಇದೆ. ಅದೆನೆಂದರೆ ಇಂದು ವಾರ್ನರ್ ಅವರ ಸಹೋದರ ವೈವಾಹಿಕ ಜೀವನಕ್ಕೆ ಕಾಲಿರಿಸಿದರು. ಹಾಗಾಗಿ ಸಹೋದರನ ಮದುವೆಯಲ್ಲಿ ಪಾಲ್ಗೊಂಡ ವಾರ್ನರ್ ಆ ನಂತರ ಬಿಗ್ ಬ್ಯಾಷ್ ಪಂದ್ಯವನ್ನಾಡಲು ಹೆಲಿಕಾಪ್ಟರ್‌ ಏರಿದರು. ಇದರಿಂದಾಗಿಯೇ ವಾರ್ನರ್ ಪಂದ್ಯದ ಆರಂಭಕ್ಕೂ ಮುನ್ನ ಕ್ರೀಡಾಂಗಣವನ್ನು ತಲುಪಲುನ ಸಾಧ್ಯವಾಯಿತು.

ವಿಡಿಯೋ ಹಂಚಿಕೊಂಡ ಬಿಬಿಎಲ್

ಡೇವಿಡ್ ವಾರ್ನರ್ ಹೆಲಿಕಾಪ್ಟರ್ ಮೂಲಕ ಮೈದಾನಕ್ಕೆ ಎಂಟ್ರಿಕೊಟ್ಟ ವಿಡಿಯೋವನ್ನು BBL ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಮೈದಾನಕ್ಕೆ ಹೆಲಿಕಾಪ್ಟರ್​ನಲ್ಲಿ ಬಂದ ಬಳಿಕ ಚಾನೆಲ್ 7 ಗೆ ನೀಡಿದ ಹೇಳಿಕೆಯಲ್ಲಿ ವಾರ್ನರ್, ಈ ರೈಡ್ ತುಂಬಾ ಚೆನ್ನಾಗಿತ್ತು. ಮೇಲಿನಿಂದ ಸಿಡ್ನಿಯನ್ನು ನೋಡುವುದು ವಿಭಿನ್ನ ಸಂತೋಷ, ಅದು ಸಾಕಷ್ಟು ಅದ್ಭುತವಾಗಿತ್ತು. ಕಳೆದ ವಾರ ಈ ಮೈದಾನದಲ್ಲಿ ನನಗೆ ಬಹಳ ವಿಶೇಷವಾದ ಕ್ಷಣವಾಗಿತ್ತು (ವಾರ್ನರ್ ಇದೇ ಮೈದಾನದಲ್ಲಿ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದರು) ಎಂದರು.

ವಾರ್ನರ್ ತಂಡಕ್ಕೆ ಸೋಲು

ಇನ್ನು ಪಂದ್ಯದ ವಿಚಾರಕ್ಕೆ ಬಂದರೆ ಸಿಡ್ನಿ ಥಂಡರ್ ಮತ್ತು ಸಿಡ್ನಿ ಸಿಕ್ಸರ್ಸ್ ತಂಡಗಳ ನಡುವೆ ಪಂದ್ಯದಲ್ಲಿ ವಾರ್ನರ್ ಪ್ರತಿನಿಧಿಸಿದ್ದ ಸಿಡ್ನಿ ಥಂಡರ್ ತಂಡ 19 ರನ್​ಗಳ ಸೋಲು ಅನುಭವಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಡ್ನಿ ಸಿಕ್ಸರ್ಸ್ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 151 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಸಿಡ್ನಿ ಥಂಡರ್ ತಂಡ 20ನೇ ಓವರ್​ನಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 132 ರನ್​ ಕೆಲಹಾಕಲಷ್ಟೇ ಶಕ್ತವಾಯಿತು. ಈ ಪಂದ್ಯದಲ್ಲಿ ವಾರ್ನರ್ 39 ಎಸೆತಗಳನ್ನು ಎದುರಿಸಿ 1 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 37 ರನ್ ಕಲೆಹಾಕಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:46 pm, Fri, 12 January 24

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್