David Warner: SRH ತಂಡದಲ್ಲಿಲ್ಲ ಸ್ಥಾನ: ಪ್ರೇಕ್ಷಕನಾಗಿ ಕಾಣಿಸಿಕೊಂಡ ಡೇವಿಡ್ ವಾರ್ನರ್

IPL 2021: ಐಪಿಎಲ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಡೇವಿಡ್ ವಾರ್ನರ್ ಅವರನ್ನು ಟೂರ್ನಿಯ ಮೊದಲಾರ್ಧದ ವೇಳೆ ಹೈದರಾಬಾದ್ ಫ್ರಾಂಚೈಸಿ ನಾಯಕತ್ವದಿಂದ ಕೆಳಗಿಳಿಸಿತ್ತು.

David Warner: SRH ತಂಡದಲ್ಲಿಲ್ಲ ಸ್ಥಾನ: ಪ್ರೇಕ್ಷಕನಾಗಿ ಕಾಣಿಸಿಕೊಂಡ ಡೇವಿಡ್ ವಾರ್ನರ್
David Warner
Follow us
| Edited By: Zahir Yusuf

Updated on:Oct 04, 2021 | 3:47 PM

ದುಬೈನಲ್ಲಿ ಭಾನುವಾರ ನಡೆದ ಐಪಿಎಲ್​ನ (IPL 2021) 49ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿತ್ತು. ಮಾಡು ಇಲ್ಲವೇ ಮಡಿ ಎಂಬಂತಿದ್ದ ಈ ಪಂದ್ಯದಲ್ಲಿ ಕೆಕೆಆರ್​ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸುವ ಮೂಲಕ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಂಡಿದೆ. ಇನ್ನು ಪಂದ್ಯದ ವೇಳೆ ಎಸ್​ಆರ್​ಹೆಚ್ (SRH)​ ತಂಡದ ಮಾಜಿ ನಾಯಕ ಡೇವಿಡ್ ವಾರ್ನರ್ (David Warner) ಕಾಣಿಸಿಕೊಂಡಿದ್ದು ವಿಶೇಷ. ಏಕೆಂದರೆ ಕಳೆದೆರಡು ಪಂದ್ಯಗಳ ವೇಳೆ ಎಸ್​ಆರ್​ಹೆಚ್​ ಡಗೌಟ್​ನಲ್ಲಿ ವಾರ್ನರ್ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ ವಾರ್ನರ್ ಅವರನ್ನು ಇಡೀ ಟೂರ್ನಿಯಿಂದಲೇ ಕೈಬಿಡಲಾಗಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಇದರ ಬೆನ್ನಲ್ಲೇ ಸನ್​ರೈಸರ್ಸ್​ ಹೈದರಾಬಾದ್ ಫ್ರಾಂಚೈಸಿ ವಿರುದ್ದ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ಆದರೆ ಕೆಕೆಆರ್ ವಿರುದ್ದದ ಪಂದ್ಯದ ವೇಳೆ ಮತ್ತೊಮ್ಮೆ ಡೇವಿಡ್ ವಾರ್ನರ್ ಕಾಣಿಸಿಕೊಂಡಿದ್ದು ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಿತ್ತು. ಇದಾಗ್ಯೂ ವಾರ್ನರ್ ಡಗೌಟ್​ನಲ್ಲಿ ಕೂತಿರಲಿಲ್ಲ. ಬದಲಾಗಿ ಅಭಿಮಾನಿಗಳ ಮಧ್ಯೆ ಕುಳಿತು ತಂಡಕ್ಕೆ ಬೆಂಬಲ ನೀಡಿದ್ದರು. ಎಸ್​ಆರ್​ಹೆಚ್​ ಜೆರ್ಸಿಯೊಂದಿಗೆ ಕಾಣಿಸಿಕೊಂಡಿದ್ದ ವಾರ್ನರ್​ ಸ್ಟೇಡಿಯಂನಲ್ಲಿ ಕೂತು ತಂಡ ಬಾವುಟವನ್ನು ಹಿಡಿದು ಹುರಿದುಂಬಿಸುತ್ತಿರುವುದು ಕಂಡು ಬಂತು. ಡೇವಿಡ್ ವಾರ್ನರ್ ಅವರ ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಬಾರಿಯ ಐಪಿಎಲ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಡೇವಿಡ್ ವಾರ್ನರ್ ಅವರನ್ನು ಟೂರ್ನಿಯ ಮೊದಲಾರ್ಧದ ವೇಳೆ ಹೈದರಾಬಾದ್ ಫ್ರಾಂಚೈಸಿ ನಾಯಕತ್ವದಿಂದ ಕೆಳಗಿಳಿಸಿತ್ತು. ಆ ಬಳಿಕ ನ್ಯೂಜಿಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್​ಗೆ ನಾಯಕತ್ವ ನೀಡಲಾಗಿತ್ತು. ಇದಾಗ್ಯೂ ದ್ವಿತಿಯಾರ್ಧದಲ್ಲಿ ಕಾಣಿಸಿಕೊಂಡ ವಾರ್ನರ್ ಮೊದಲೆರಡು ಪಂದ್ಯಗಳಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಹೀಗಾಗಿ ಅವರನ್ನು ಆಡುವ ಬಳಗದಿಂದ ಕೈಬಿಟ್ಟು ಅವರ ಬದಲಿಗೆ ಜೇಸನ್ ರಾಯ್​ಗೆ ಅವಕಾಶ ನೀಡಲಾಗಿತ್ತು. ಈ ಬದಲಾವಣೆಗಳ ಹೊರತಾಗಿಯೂ ಸನ್​ರೈಸರ್ಸ್​ ಹೈದರಾಬಾದ್ ತಂಡದ ಫಲಿತಾಂಶದಲ್ಲಿ ಯಾವುದೇ ಮಹತ್ವದ ಬದಲಾವಣೆಯಾಗಿಲ್ಲ. ಆಡಿರುವ 12 ಪಂದ್ಯಗಳಲ್ಲಿ 10 ರಲ್ಲಿ ಸೋತು ಸನ್​ರೈಸರ್ಸ್​ ಹೈದರಾಬಾದ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

Happy Birthday Rishabh Pant: ರಿಷಭ್ ಪಂತ್​ಗೆ ಹುಟ್ಟುಹಬ್ಬದ ಸಂಭ್ರಮ: ಯಂಗ್ ವಿಕೆಟ್ ಕೀಪರ್​ನ ಮೂರು ಅಮೋಘ ದಾಖಲೆ ಇಲ್ಲಿದೆ

Yuzvendra Chahal: ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದ ಯುಜ್ವೇಂದ್ರ ಚಹಾಲ್: ಟಿ-20 ವಿಶ್ವಕಪ್​ಗೆ ಆಯ್ಕೆ ಪಕ್ಕಾ

(David Warner Waves SRH Flag From The Stands)

Published On - 2:52 pm, Mon, 4 October 21

ತಾಜಾ ಸುದ್ದಿ
ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ಶೃಂಗೇರಿ ತೆರಳುವ ವಾಹನ ಸವಾರರಿಗೆ ಎಚ್ಚರಿಕೆ
ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ಶೃಂಗೇರಿ ತೆರಳುವ ವಾಹನ ಸವಾರರಿಗೆ ಎಚ್ಚರಿಕೆ
ಬಾಗಲಕೋಟೆ: ಬರಿಗೈಯಿಂದ ಕುದಿಯುವ ಹುಗ್ಗಿ ತೆಗೆದ ಸ್ವಾಮೀಜಿ
ಬಾಗಲಕೋಟೆ: ಬರಿಗೈಯಿಂದ ಕುದಿಯುವ ಹುಗ್ಗಿ ತೆಗೆದ ಸ್ವಾಮೀಜಿ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ