AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಯ ಪಂದ್ಯಕ್ಕೂ ಮುನ್ನ ಗ್ರೀನ್ ಕ್ಯಾಪ್ ಕಳವು: ದಯವಿಟ್ಟು ಕೊಟ್ಬಿಡಿ ಎಂದ ವಾರ್ನರ್..!

David Warner: ಸಿಡ್ನಿಯಲ್ಲಿ ಜನವರಿ 3 ರಿಂದ ಶುರುವಾಗಲಿರುವ ಪಾಕಿಸ್ತಾನ್ ವಿರುದ್ಧದ ಪಂದ್ಯದ ಮೂಲಕ ಡೇವಿಡ್ ವಾರ್ನರ್ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ. ಆದರೆ ಕಡೆಯ ಟೆಸ್ಟ್ ಪಂದ್ಯಕ್ಕೂ ಮುನ್ನ ಕಳೆದ 12 ವರ್ಷ ಅವರು ಧರಿಸಿದ್ದ ಬ್ಯಾಗಿ ಗ್ರೀನ್ ಕ್ಯಾಪ್ ಕಳೆದು ಹೋಗಿದೆ.

ಕೊನೆಯ ಪಂದ್ಯಕ್ಕೂ ಮುನ್ನ ಗ್ರೀನ್ ಕ್ಯಾಪ್ ಕಳವು: ದಯವಿಟ್ಟು ಕೊಟ್ಬಿಡಿ ಎಂದ ವಾರ್ನರ್..!
David Warner
TV9 Web
| Edited By: |

Updated on: Jan 02, 2024 | 10:07 AM

Share

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ದಿಗ್ಗಜ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ (David Warner) ಅವರ ‘ಬ್ಯಾಗಿ ಗ್ರೀನ್ ಕ್ಯಾಪ್’ ಕಳವಾಗಿದೆ. ಈ ಬಗ್ಗೆ ಖುದ್ದು ವಾರ್ನರ್ ಅವರೇ ಮಾಹಿತಿ ನೀಡಿದ್ದು, ದಯವಿಟ್ಟು ಹಿಂತಿರುಗಿಸುವಂತೆ ಮನವಿ ಮಾಡಿದ್ದಾರೆ. ಬಾಕ್ಸಿಂಗ್ ಡೇ ಟೆಸ್ಟ್ ಮುಗಿದ ನಂತರ ಡೇವಿಡ್ ವಾರ್ನರ್ ಮೆಲ್ಬೋರ್ನ್‌ನಿಂದ ಸಿಡ್ನಿಗೆ ಬಂದಿದ್ದರು. ಇದಾಗ್ಯೂ ಅವರ ಒಂದು ಬ್ಯಾಕ್​ಪ್ಯಾಕ್ ಲಗೇಜ್ ಸಿಡ್ನಿಗೆ ತಲುಪಿರಲಿಲ್ಲ. ಹೋಟೆಲ್ ಹಾಗೂ ಏರ್​ಪೋರ್ಟ್​ನಲ್ಲಿ ಕ್ಯಾಮೆರಾಗಳನ್ನು ಪರಿಶೀಲಿಸಿದರೂ ಈ ಬಗ್ಗೆ ಖಚಿತ ಮಾಹಿತಿ ದೊರೆತಿಲ್ಲ. ಹೀಗಾಗಿ ಸೋಷಿಯಲ್ ಮೀಡಿಯಾ ಮೂಲಕ ಗ್ರೀನ್ ಕ್ಯಾಪ್ ಹಿಂತಿರುಗಿಸುವಂತೆ ವಾರ್ನರ್ ಮನವಿ ಮಾಡಿದ್ದಾರೆ.

ನನ್ನ ಬ್ಯಾಗ್‌ಗಳನ್ನು ತೆರೆದು ಬ್ಯಾಕ್‌ಪ್ಯಾಕ್ ತೆಗೆದುಕೊಂಡು ಹೋಗುವುದನ್ನು ಯಾರೂ ನೋಡಿಲ್ಲ. ನೀವು ವಿಮಾನ ನಿಲ್ದಾಣದಲ್ಲಿ ಅಥವಾ ಹೊರಗೆ ಕೆಲಸ ಮಾಡುತ್ತಿದ್ದರೆ, ಅಚಾತುರ್ಯದಿಂದ ನನ್ನ ಬ್ಯಾಕ್​ಪ್ಯಾಕ್ ಅನ್ನು ತೆಗೆದುಕೊಂಡಿದ್ದರೆ, ಅದನ್ನು ನನಗೆ ಹಿಂತಿರುಗಿಸಿ. ನಾನು ನಿಮಗೆ ಬೇರೊಂದು ಬ್ಯಾಕ್​ಪ್ಯಾಕ್ ನೀಡುತ್ತೇನೆ ಎಂದು ವಾರ್ನರ್ ತಿಳಿಸಿದ್ದಾರೆ.

ಸದ್ಯ ಕಳುವಾಗಿರುವ ಬ್ಯಾಕ್​ಪ್ಯಾಕ್​ನಲ್ಲಿ ಡೇವಿಡ್ ವಾರ್ನರ್ ಅವರ ಬ್ಯಾಗಿ ಗ್ರೀನ್ ಕ್ಯಾಪ್ ಇದ್ದು, ಸಿಡ್ನಿ ಟೆಸ್ಟ್ ಪಂದ್ಯಕ್ಕೂ ಮುನ್ನ ಅದನ್ನು ಹಿಂತಿರುಗಿಸುವಂತೆ ಸೋಷಿಯಲ್ ಮೀಡಿಯಾ ಮೂಲಕ ಮನವಿ ಸಲ್ಲಿಸಿದ್ದಾರೆ.

ಬ್ಯಾಗಿ ಗ್ರೀನ್ ಕ್ಯಾಪ್ ಎಂದರೇನು?

ಟೆಸ್ಟ್ ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯನ್ನರು ಧರಿಸುವ ಕ್ಯಾಪ್ ಅನ್ನು ಬ್ಯಾಗಿ ಗ್ರೀನ್ ಕ್ಯಾಪ್ ಎಂದು ಕರೆಯಲಾಗುತ್ತದೆ. ಈ ಕ್ಯಾಪ್ ಇದೀಗ ವಾರ್ನರ್ ಪಾಲಿಗೆ ಅತ್ಯಮೂಲ್ಯ. ಏಕೆಂದರೆ ಪಾದಾರ್ಪಣೆ ಸಮಯದಲ್ಲಿ ಪಡೆದ ಬ್ಯಾಗಿ ಗ್ರೀನ್ ಕ್ಯಾಪ್ ಅನ್ನು ಬದಲಿಸುವ ಸಂಪ್ರದಾಯ ಆಸ್ಟ್ರೇಲಿಯಾ ಕ್ರಿಕೆಟ್​ನಲ್ಲಿಲ್ಲ.

ಕಳೆದ ಒಂದು ದಶಕದಿಂದಲೂ ಕಾಪಾಡಿಕೊಂಡು ಬಂದಿದ್ದ ಈ ಕ್ಯಾಪ್ ನಿವೃತ್ತಿಗೂ ಮುನ್ನ ಕಳೆದು ಹೋಗಿರುವುದು ಡೇವಿಡ್ ವಾರ್ನರ್ ಅವರನ್ನು ಚಿಂತೆಗೀಡು ಮಾಡಿದೆ. ಹೀಗಾಗಿಯೇ ನನ್ನ ಲಗೇಜ್ ಬ್ಯಾಗ್ ಅನ್ನು ನೀವಿಟ್ಟುಕೊಳ್ಳಿ, ದಯವಿಟ್ಟು ಗ್ರೀನ್ ಕ್ಯಾಪ್ ಹಿಂತಿರುಗಿಸಿ ಎಂದು ಡೇವಿಡ್ ವಾರ್ನರ್ ಮನವಿ ಮಾಡಿದ್ದಾರೆ.

ವಾರ್ನರ್ ನಿವೃತ್ತಿ:

ಸಿಡ್ನಿಯಲ್ಲಿ ಜನವರಿ 3 ರಿಂದ ಶುರುವಾಗಲಿರುವ ಪಾಕಿಸ್ತಾನ್ ವಿರುದ್ಧದ ಪಂದ್ಯದ ಮೂಲಕ ಡೇವಿಡ್ ವಾರ್ನರ್ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ. ಆದರೆ ಕಡೆಯ ಟೆಸ್ಟ್ ಪಂದ್ಯಕ್ಕೂ ಮುನ್ನ ಕಳೆದ 12 ವರ್ಷ ಅವರು ಧರಿಸಿದ್ದ ಬ್ಯಾಗಿ ಗ್ರೀನ್ ಕ್ಯಾಪ್ ಕಳೆದು ಹೋಗಿದೆ. ಇದೀಗ ನಿವೃತ್ತಿಗೂ ಮುನ್ನ ತನ್ನ ಕ್ಯಾಪ್ ಅನ್ನು ಹಿಂತಿರುಗಿಸುವಂತೆ ವಾರ್ನರ್ ಸೋಷಿಯಲ್ ಮೀಡಿಯಾದಲ್ಲಿ ಅಂಗಲಾಚಿದ್ದಾರೆ.

ಏಕೆಂದರೆ ಪಾದಾರ್ಪಣೆ ಪಂದ್ಯದಲ್ಲಿ ಧರಿಸಿದ್ದ ಕ್ಯಾಪ್​ನೊಂದಿಗೆ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳುವ ಇರಾದೆಯಲ್ಲಿದ್ದಾರೆ ಡೇವಿಡ್ ವಾರ್ನರ್. ಆದರೆ ಕೊನೆಯ ಪಂದ್ಯಕ್ಕೂ ಮುನ್ನ ಅವರು ಕ್ಯಾಪ್ ಕಳುವಾಗಿರುವುದು ಅವರನ್ನು ಚಿಂತೆಗೀಡು ಮಾಡಿದೆ.

ಹೀಗಾಗಿ ಸೋಷಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ವಿಡಿಯೋವನ್ನು ಹಂಚಿಕೊಂಡಿದ್ದು, ನನ್ನ ಬ್ಯಾಗಿ ಗ್ರೀನ್ ಕ್ಯಾಪ್ ಅನ್ನು ಯಾರಾದರೂ ಹೊಂದಿದ್ದರೆ ದಯವಿಟ್ಟು ಅದನ್ನು ಹಿಂತಿರುಗಿಸಿ. ಮೆಲ್ಬೋರ್ನ್‌ನಿಂದ ಸಿಡ್ನಿಗೆ ಬರುತ್ತಿದ್ದಾಗ ಈ ಕ್ಯಾಪ್ ಕಳವಾಗಿದೆ.

ಇದನ್ನೂ ಓದಿ: ಎಲ್ಲರನ್ನೂ ಹಿಂದಿಕ್ಕಿ ಸಿಕ್ಸರ್ ಕಿಂಗ್ ಎನಿಸಿಕೊಂಡ ಯುಎಇ ಬ್ಯಾಟರ್..!

ತಂಡದ ಹೋಟೆಲ್ ಮತ್ತು ಏರ್‌ಲೈನ್‌ಗಳ ಸಿಸಿಟಿವಿ ಕ್ಯಾಮೆರಾಗಳನ್ನು ಸಹ ಪರಿಶೀಲಿಸಿದರೂ, ಯಾವುದೇ ಪ್ರಯೋಜನವಾಗಲಿಲ್ಲ. ಹೀಗಾಗಿ ಈ ವಿಡಿಯೋ ನೋಡಿಯಾದರೂ ನನ್ನ ಗ್ರೀನ್ ಕ್ಯಾಪ್​ ಅನ್ನು ಹಿಂತಿರುಗಿಸುವಂತೆ ಡೇವಿಡ್ ವಾರ್ನರ್  ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ