AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೂಪರ್​ಮ್ಯಾನ್​ ಕ್ಯಾಚ್ ಹಿಡಿದು ಎಲ್ಲರನ್ನು ದಂಗಾಗಿಸಿದ ಡೇವಿಡ್​ ವಾರ್ನರ್..!

David Warner's stunning catch: ಶ್ರೀಲಂಕಾ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಅಧ್ಭುತ ಕ್ಯಾಚ್ ಹಿಡಿಯುವ ಮೂಲಕ ಆಸ್ಟ್ರೇಲಿಯಾ ಆಟಗಾರ ಡೇವಿಡ್ ವಾರ್ನರ್​ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ.

Viral Video: ಸೂಪರ್​ಮ್ಯಾನ್​ ಕ್ಯಾಚ್ ಹಿಡಿದು ಎಲ್ಲರನ್ನು ದಂಗಾಗಿಸಿದ ಡೇವಿಡ್​ ವಾರ್ನರ್..!
David Warner
TV9 Web
| Edited By: |

Updated on: Jun 15, 2022 | 2:57 PM

Share

ಆಸ್ಟ್ರೇಲಿಯಾದ ಆಟಗಾರ ಡೇವಿಡ್ ವಾರ್ನರ್ ಮೈದಾನದಲ್ಲಿನ ವೀರಾವೇಶಕ್ಕೆ ಹೆಸರುವಾಸಿ. ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸುವ ವಾರ್ನರ್, ಅದ್ಭುತ ಫೀಲ್ಡರ್ ಎಂಬುದು ಗೊತ್ತಿರುವ ವಿಚಾರ. ಇದೀಗ ತಮ್ಮ 35 ವಯಸ್ಸಿನಲ್ಲಿ ಹಿಡಿದಿರುವ ಸೂಪರ್​ ಮ್ಯಾನ್​ ಕ್ಯಾಚ್​ವೊಂದರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಮಂಗಳವಾರ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಾರ್ನರ್ ಈ ಅದ್ಭುತ ಕ್ಯಾಚ್ ಹಿಡಿಇದ್ದಾರೆ. ಶ್ರೀಲಂಕಾದ ಇನ್ನಿಂಗ್ಸ್‌ನ 16 ನೇ ಓವರ್‌ನಲ್ಲಿ, ಧನಂಜಯ ಡಿ ಸಿಲ್ವಾ ಆಷ್ಟನ್ ಅಗರ್‌ ಮಿಡ್ ಆನ್‌ನತ್ತ ಬಾರಿಸಿದ್ದರು. ಆದರೆ ಅಲ್ಲೇ ಫೀಲ್ಡಿಂಗ್​ನಲ್ಲಿ ವಾರ್ನರ್ ಬಲಕ್ಕೆ ಓಡಿ ಅಧ್ಭುತವಾಗಿ ಜಿಗಿಯುವ ಮೂಲಕ ಎಡಗೈಯಲ್ಲಿ ಚೆಂಡನ್ನು ಬಂಧಿಸಿದರು. ಅಲ್ಲಿಗೆ ಧನಂಜಯ ಡಿಸಿಲ್ವಾ ಇನಿಂಗ್ಸ್ ಅಂತ್ಯವಾಯಿತು.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ಕುಸಾಲ್ ಮೆಂಡಿಸ್​ ಅವರ ಅಜೇಯ 86 ರನ್​ಗಳ ನೆರವಿನಿಂದ 50 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 300 ರನ್​ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಚೇಸ್ ಮಾಡಲು ಹೊರಟಾಗ ಮಳೆ ಬಂದಿದ್ದರಿಂದ ಆಸ್ಟ್ರೇಲಿಯಾಗೆ ಡಕ್​ವರ್ಥ್​ ಲೂಯಿಸ್​ ನಿಯಮದ ಪ್ರಕಾರ 44 ಓವರ್​ಗಳಲ್ಲಿ 282 ರನ್​ಗಳ ಟಾರ್ಗೆಟ್ ನೀಡಲಾಯಿತು.

ಈ ಕಠಿಣ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ ಗ್ಲೆನ್ ಮ್ಯಾಕ್ಸ್​ವೆಲ್ ಅಬ್ಬರಿಸಿದ್ದರು. 51 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 6 ಫೋರ್​ನೊಂದಿಗೆ 80 ರನ್​ ಬಾರಿಸುವ ಮೂಲಕ 42.3 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡವು ರೋಚಕ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಶ್ರೀಲಂಕಾ ವಿರುದ್ದದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವು 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?