AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೂಪರ್​ಮ್ಯಾನ್​ ಕ್ಯಾಚ್ ಹಿಡಿದು ಎಲ್ಲರನ್ನು ದಂಗಾಗಿಸಿದ ಡೇವಿಡ್​ ವಾರ್ನರ್..!

David Warner's stunning catch: ಶ್ರೀಲಂಕಾ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಅಧ್ಭುತ ಕ್ಯಾಚ್ ಹಿಡಿಯುವ ಮೂಲಕ ಆಸ್ಟ್ರೇಲಿಯಾ ಆಟಗಾರ ಡೇವಿಡ್ ವಾರ್ನರ್​ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ.

Viral Video: ಸೂಪರ್​ಮ್ಯಾನ್​ ಕ್ಯಾಚ್ ಹಿಡಿದು ಎಲ್ಲರನ್ನು ದಂಗಾಗಿಸಿದ ಡೇವಿಡ್​ ವಾರ್ನರ್..!
David Warner
TV9 Web
| Edited By: |

Updated on: Jun 15, 2022 | 2:57 PM

Share

ಆಸ್ಟ್ರೇಲಿಯಾದ ಆಟಗಾರ ಡೇವಿಡ್ ವಾರ್ನರ್ ಮೈದಾನದಲ್ಲಿನ ವೀರಾವೇಶಕ್ಕೆ ಹೆಸರುವಾಸಿ. ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸುವ ವಾರ್ನರ್, ಅದ್ಭುತ ಫೀಲ್ಡರ್ ಎಂಬುದು ಗೊತ್ತಿರುವ ವಿಚಾರ. ಇದೀಗ ತಮ್ಮ 35 ವಯಸ್ಸಿನಲ್ಲಿ ಹಿಡಿದಿರುವ ಸೂಪರ್​ ಮ್ಯಾನ್​ ಕ್ಯಾಚ್​ವೊಂದರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಮಂಗಳವಾರ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಾರ್ನರ್ ಈ ಅದ್ಭುತ ಕ್ಯಾಚ್ ಹಿಡಿಇದ್ದಾರೆ. ಶ್ರೀಲಂಕಾದ ಇನ್ನಿಂಗ್ಸ್‌ನ 16 ನೇ ಓವರ್‌ನಲ್ಲಿ, ಧನಂಜಯ ಡಿ ಸಿಲ್ವಾ ಆಷ್ಟನ್ ಅಗರ್‌ ಮಿಡ್ ಆನ್‌ನತ್ತ ಬಾರಿಸಿದ್ದರು. ಆದರೆ ಅಲ್ಲೇ ಫೀಲ್ಡಿಂಗ್​ನಲ್ಲಿ ವಾರ್ನರ್ ಬಲಕ್ಕೆ ಓಡಿ ಅಧ್ಭುತವಾಗಿ ಜಿಗಿಯುವ ಮೂಲಕ ಎಡಗೈಯಲ್ಲಿ ಚೆಂಡನ್ನು ಬಂಧಿಸಿದರು. ಅಲ್ಲಿಗೆ ಧನಂಜಯ ಡಿಸಿಲ್ವಾ ಇನಿಂಗ್ಸ್ ಅಂತ್ಯವಾಯಿತು.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ಕುಸಾಲ್ ಮೆಂಡಿಸ್​ ಅವರ ಅಜೇಯ 86 ರನ್​ಗಳ ನೆರವಿನಿಂದ 50 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 300 ರನ್​ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಚೇಸ್ ಮಾಡಲು ಹೊರಟಾಗ ಮಳೆ ಬಂದಿದ್ದರಿಂದ ಆಸ್ಟ್ರೇಲಿಯಾಗೆ ಡಕ್​ವರ್ಥ್​ ಲೂಯಿಸ್​ ನಿಯಮದ ಪ್ರಕಾರ 44 ಓವರ್​ಗಳಲ್ಲಿ 282 ರನ್​ಗಳ ಟಾರ್ಗೆಟ್ ನೀಡಲಾಯಿತು.

ಈ ಕಠಿಣ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ ಗ್ಲೆನ್ ಮ್ಯಾಕ್ಸ್​ವೆಲ್ ಅಬ್ಬರಿಸಿದ್ದರು. 51 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 6 ಫೋರ್​ನೊಂದಿಗೆ 80 ರನ್​ ಬಾರಿಸುವ ಮೂಲಕ 42.3 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡವು ರೋಚಕ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಶ್ರೀಲಂಕಾ ವಿರುದ್ದದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವು 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!