AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೂಪರ್​ಮ್ಯಾನ್​ ಕ್ಯಾಚ್ ಹಿಡಿದು ಎಲ್ಲರನ್ನು ದಂಗಾಗಿಸಿದ ಡೇವಿಡ್​ ವಾರ್ನರ್..!

David Warner's stunning catch: ಶ್ರೀಲಂಕಾ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಅಧ್ಭುತ ಕ್ಯಾಚ್ ಹಿಡಿಯುವ ಮೂಲಕ ಆಸ್ಟ್ರೇಲಿಯಾ ಆಟಗಾರ ಡೇವಿಡ್ ವಾರ್ನರ್​ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ.

Viral Video: ಸೂಪರ್​ಮ್ಯಾನ್​ ಕ್ಯಾಚ್ ಹಿಡಿದು ಎಲ್ಲರನ್ನು ದಂಗಾಗಿಸಿದ ಡೇವಿಡ್​ ವಾರ್ನರ್..!
David Warner
TV9 Web
| Updated By: ಝಾಹಿರ್ ಯೂಸುಫ್|

Updated on: Jun 15, 2022 | 2:57 PM

Share

ಆಸ್ಟ್ರೇಲಿಯಾದ ಆಟಗಾರ ಡೇವಿಡ್ ವಾರ್ನರ್ ಮೈದಾನದಲ್ಲಿನ ವೀರಾವೇಶಕ್ಕೆ ಹೆಸರುವಾಸಿ. ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸುವ ವಾರ್ನರ್, ಅದ್ಭುತ ಫೀಲ್ಡರ್ ಎಂಬುದು ಗೊತ್ತಿರುವ ವಿಚಾರ. ಇದೀಗ ತಮ್ಮ 35 ವಯಸ್ಸಿನಲ್ಲಿ ಹಿಡಿದಿರುವ ಸೂಪರ್​ ಮ್ಯಾನ್​ ಕ್ಯಾಚ್​ವೊಂದರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಮಂಗಳವಾರ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಾರ್ನರ್ ಈ ಅದ್ಭುತ ಕ್ಯಾಚ್ ಹಿಡಿಇದ್ದಾರೆ. ಶ್ರೀಲಂಕಾದ ಇನ್ನಿಂಗ್ಸ್‌ನ 16 ನೇ ಓವರ್‌ನಲ್ಲಿ, ಧನಂಜಯ ಡಿ ಸಿಲ್ವಾ ಆಷ್ಟನ್ ಅಗರ್‌ ಮಿಡ್ ಆನ್‌ನತ್ತ ಬಾರಿಸಿದ್ದರು. ಆದರೆ ಅಲ್ಲೇ ಫೀಲ್ಡಿಂಗ್​ನಲ್ಲಿ ವಾರ್ನರ್ ಬಲಕ್ಕೆ ಓಡಿ ಅಧ್ಭುತವಾಗಿ ಜಿಗಿಯುವ ಮೂಲಕ ಎಡಗೈಯಲ್ಲಿ ಚೆಂಡನ್ನು ಬಂಧಿಸಿದರು. ಅಲ್ಲಿಗೆ ಧನಂಜಯ ಡಿಸಿಲ್ವಾ ಇನಿಂಗ್ಸ್ ಅಂತ್ಯವಾಯಿತು.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ಕುಸಾಲ್ ಮೆಂಡಿಸ್​ ಅವರ ಅಜೇಯ 86 ರನ್​ಗಳ ನೆರವಿನಿಂದ 50 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 300 ರನ್​ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಚೇಸ್ ಮಾಡಲು ಹೊರಟಾಗ ಮಳೆ ಬಂದಿದ್ದರಿಂದ ಆಸ್ಟ್ರೇಲಿಯಾಗೆ ಡಕ್​ವರ್ಥ್​ ಲೂಯಿಸ್​ ನಿಯಮದ ಪ್ರಕಾರ 44 ಓವರ್​ಗಳಲ್ಲಿ 282 ರನ್​ಗಳ ಟಾರ್ಗೆಟ್ ನೀಡಲಾಯಿತು.

ಈ ಕಠಿಣ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ ಗ್ಲೆನ್ ಮ್ಯಾಕ್ಸ್​ವೆಲ್ ಅಬ್ಬರಿಸಿದ್ದರು. 51 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 6 ಫೋರ್​ನೊಂದಿಗೆ 80 ರನ್​ ಬಾರಿಸುವ ಮೂಲಕ 42.3 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡವು ರೋಚಕ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಶ್ರೀಲಂಕಾ ವಿರುದ್ದದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವು 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್