AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC vs RR IPL 2025: ರಾಜಸ್ಥಾನ್ ರಾಯಲ್ಸ್ ಸೋಲಿಗೆ ಕಾರಣವಾಗಿದ್ದು ಅವರದ್ದೇ ತಂಡದ ಈ 5 ಆಟಗಾರರು

ಇಂಡಿಯನ್ ಪ್ರೀಮಿಯರ್ ಲೀಗ್ 2025 ರ 32 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸೂಪರ್ ಓವರ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಸೋಲಿಸಿತು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡುವೆ ಈ ಪಂದ್ಯವು ಸಾಕಷ್ಟು ರೋಚಕತೆ ಸೃಷ್ಟಿಸಿತು. ಐಪಿಎಲ್ 18 ನೇ ಋತುವಿನ ಮೊದಲ ಸೂಪರ್ ಓವರ್ ಅನ್ನು ನಾವು ನೋಡುವ ಅವಕಾಶ ಸಿಕ್ಕಿತು. ರಾಜಸ್ಥಾನ್ ತಂಡ ತಾವು ಮಾಡಿದ ಕೆಲವು ತಪ್ಪುಗಳಿಂದ ಸೋಲು ಕಾಣಬೇಕಾಯಿತು.

DC vs RR IPL 2025: ರಾಜಸ್ಥಾನ್ ರಾಯಲ್ಸ್ ಸೋಲಿಗೆ ಕಾರಣವಾಗಿದ್ದು ಅವರದ್ದೇ ತಂಡದ ಈ 5 ಆಟಗಾರರು
Rajasthan Royals
Vinay Bhat
|

Updated on: Apr 17, 2025 | 9:22 AM

Share

ಬೆಂಗಳೂರು (ಏ. 17): ಇಂಡಿಯನ್ ಪ್ರೀಮಿಯರ್ ಲೀಗ್ 2025 ರ ಮೊದಲ ಸೂಪರ್ ಓವರ್ ಬುಧವಾರ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ (Delhi Capitals vs Rajasthan Royals) ನಡುವೆ ನಡೆಯಿತು. ಈ ಸೂಪರ್ ಓವರ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಗೆಲುವು ಸಾಧಿಸಿತು. ಇದಕ್ಕೂ ಮೊದಲು 189 ರನ್‌ಗಳ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ್ ಯಶಸ್ವಿ ಜೈಸ್ವಾಲ್ ಮತ್ತು ನಿತೀಶ್ ರಾಣಾ ತಲಾ 51 ರನ್ ಗಳಿಸುವ ಮೂಲಕ 4 ವಿಕೆಟ್‌ಗೆ 188 ರನ್ ಗಳಿಸಿತು. ರಾಜಸ್ಥಾನದ ಸೋಲಿನ ಅವರದ್ದೇ ತಂಡದ ಈ 5 ಆಟಗಾರರು ಪ್ರಮುಖ ಕಾರಣರಾದರು. ಈ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದರೆ ಬಹುಶಃ ಪಂದ್ಯವು ಸೂಪರ್ ಓವರ್‌ಗೆ ತಲುಪುತ್ತಿರಲಿಲ್ಲ.

ಧ್ರುವ್ ಜುರೆಲ್: ರಾಜಸ್ಥಾನ್ ರಾಯಲ್ಸ್ ತಂಡದ ಅನುಭವಿ ಬ್ಯಾಟ್ಸ್‌ಮನ್ ಧ್ರುವ್ ಜುರೆಲ್ ತಮ್ಮ ತಂಡವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ. ಕೊನೆಯ ಓವರ್‌ನಲ್ಲಿ ರಾಜಸ್ಥಾನ್ ಗೆಲುವಿಗೆ 9 ರನ್‌ಗಳು ಬೇಕಾಗಿದ್ದವು. ಆದರೆ ಅವರು ದೊಡ್ಡ ಹಿಟ್‌ಗಳನ್ನು ಸಿಡಿಸುವಲ್ಲಿ ವಿಫಲರಾದರು. ಜುರೆಲ್ 17 ಎಸೆತಗಳಲ್ಲಿ 26 ರನ್ ಗಳಿಸಿ ರನೌಟ್ ಆದರು.

ತುಷಾರ್ ದೇಶಪಾಂಡೆ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ವೇಗಿ ತುಷಾರ್ ದೇಶಪಾಂಡೆ ತುಂಬಾ ದುಬಾರಿಯಾದರು. ಅವರು ತಮ್ಮ 3 ಓವರ್‌ಗಳಲ್ಲಿ 12.70 ರ ಎಕಾನಮಿಯಲ್ಲಿ 38 ರನ್‌ಗಳನ್ನು ನೀಡಿದರು.

ಇದನ್ನೂ ಓದಿ
Image
ಸೂಪರ್ ಓವರ್‌ನಲ್ಲಿ ಸೋತ ನಂತರ ತಾಳ್ಮೆ ಕಳೆದುಕೊಂಡ ಸಂಜು ಸ್ಯಾಮ್ಸನ್
Image
ಗೆಲ್ಲುವ ಪಂದ್ಯ ಕೈಚೆಲ್ಲಿದ ರಾಜಸ್ಥಾನ್ ರಾಯಲ್ಸ್
Image
ಲಯ ತಪ್ಪಿದ ಸಂದೀಪ್; ಕುಳಿತಲ್ಲೇ ಕೋಪಗೊಂಡ ದ್ರಾವಿಡ್
Image
ಇಲ್ಲದ ರನ್ ಕದಿಯಲು ಹೋಗಿ ಶೂನ್ಯಕ್ಕೆ ಔಟಾದ ಕರುಣ್ ನಾಯರ್

ಸಂದೀಪ್ ಶರ್ಮಾ: ಡೆಲ್ಲಿ ಕ್ಯಾಪಿಟಲ್ಸ್ ತಂಡದ 20ನೇ ಓವರ್ ಅನ್ನು ಸಂದೀಪ್ ಶರ್ಮಾ ಎಸೆದರು. ಈ ಓವರ್‌ನಲ್ಲಿ ಸಂದೀಪ್ 19 ರನ್‌ಗಳನ್ನು ಬಿಟ್ಟುಕೊಟ್ಟರು. ಅಲ್ಲದೆ ಇವರು ಎಸೆದಿದ್ದು 11 ಎಸೆತಗಳನ್ನು. ಈ ಓವರ್‌ನಲ್ಲಿ ಸಂದೀಪ್ 4 ವೈಡ್ ಮತ್ತು 1 ನೋ ಬಾಲ್ ಕೂಡ ಎಸೆದರು. ಸಂದೀಪ್ ಶರ್ಮಾ ಐಪಿಎಲ್ ಇತಿಹಾಸದಲ್ಲಿ 11 ಎಸೆತಗಳ ಓವರ್ ಎಸೆದ ನಾಲ್ಕನೇ ಬೌಲರ್ ಎನಿಸಿಕೊಂಡರು.

ರಿಯಾನ್ ಪರಾಗ್: ಈ ಪಂದ್ಯದಲ್ಲಿ ರಿಯಾನ್ ಪರಾಗ್ ಅವರ ಬ್ಯಾಟ್ ಸದ್ದು ಮಾಡಲೇ ಇಲ್ಲ. ಅವರು 11 ಎಸೆತಗಳಲ್ಲಿ ಕೇವಲ 8 ರನ್ ಗಳಿಸಲು ಸಾಧ್ಯವಾಯಿತು. ಅಕ್ಷರ್ ಪಟೇಲ್ ಬೌಲಿಂಗ್​ನಲ್ಲಿ ಕ್ಲೀನ್ ಬೌಲ್ಡ್ ಆದರು.

DC vs RR Super Over: ಸೂಪರ್ ಓವರ್‌ನಲ್ಲಿ ಸೋತ ನಂತರ ತಾಳ್ಮೆ ಕಳೆದುಕೊಂಡ ಸಂಜು ಸ್ಯಾಮ್ಸನ್: ಪೋಸ್ಟ್ ಮ್ಯಾಚ್​ನಲ್ಲಿ ಏನಂದ್ರು ನೋಡಿ

ಶಿಮ್ರಾನ್ ಹೆಟ್ಮೆಯರ್: ಮಿಚೆಲ್ ಸ್ಟಾರ್ಕ್ ವಿರುದ್ಧದ ಕೊನೆಯ ಓವರ್‌ನಲ್ಲಿ ಶಿಮ್ರಾನ್ ಹೆಟ್ಮೆಯರ್ ಕೂಡ 19 ರನ್ ಗಳಿಸುವಲ್ಲಿ ವಿಫಲರಾದರು. ಅವರು 9 ಎಸೆತಗಳಲ್ಲಿ 15 ರನ್ ಗಳಿಸಿ ಅಜೇಯರಾಗಿ ಮರಳಿದರು.

ಐಪಿಎಲ್‌ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇದುವರೆಗೆ ಒಟ್ಟು ಐದು ಬಾರಿ ಸೂಪರ್ ಓವರ್ ಹಂತಕ್ಕೆ ತಲುಪಿದ್ದು, ಅದರಲ್ಲಿ ನಾಲ್ಕು ಬಾರಿ ಗೆದ್ದಿದೆ. ಈ ಮೂಲಕ ದೆಹಲಿ ತಂಡವು ಐಪಿಎಲ್‌ನಲ್ಲಿ ಅತಿ ಹೆಚ್ಚು ಸೂಪರ್ ಓವರ್‌ಗಳನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ವಿಷಯದಲ್ಲಿ ಅವರು ಪಂಜಾಬ್ ಕಿಂಗ್ಸ್ ತಂಡವನ್ನು ಹಿಂದಿಕ್ಕಿದ್ದಾರೆ. ಪಂಜಾಬ್ ಕಿಂಗ್ಸ್ ತಂಡವು ಮೂರು ಬಾರಿ ಸೂಪರ್ ಓವರ್‌ನಲ್ಲಿ ಗೆದ್ದು ಯಶಸ್ಸು ಸಾಧಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಯಾಮಿ ಗೌತಮ್
‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಯಾಮಿ ಗೌತಮ್
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ
ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ
ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ಮನೆ ಮಾಲೀಕ
ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ಮನೆ ಮಾಲೀಕ
ಮಕ್ಕಳಾಗಿಲ್ಲ ಎಂದು ಕೊರಗುತ್ತಿರುವವರಿಗೆ ದೇವಸ್ಥಾನದ ಬಗ್ಗೆ ಹೇಳಿದ ಶೈನ್
ಮಕ್ಕಳಾಗಿಲ್ಲ ಎಂದು ಕೊರಗುತ್ತಿರುವವರಿಗೆ ದೇವಸ್ಥಾನದ ಬಗ್ಗೆ ಹೇಳಿದ ಶೈನ್