AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್ ತಂಡದ ಘೋಷಣೆಗೆ ಗಡುವು: ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರು..!

ODI World Cup 2023: ಏಕದಿನ ವಿಶ್ವಕಪ್​ ಅಕ್ಟೋಬರ್ 5 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

ವಿಶ್ವಕಪ್ ತಂಡದ ಘೋಷಣೆಗೆ ಗಡುವು: ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರು..!
Team India
TV9 Web
| Edited By: |

Updated on: Aug 05, 2023 | 6:33 PM

Share

ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ಗಾಗಿ ತಂಡಗಳನ್ನು ಪ್ರಕಟಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಗಡುವು ವಿಧಿಸಿದೆ. ಅದರಂತೆ ಸೆಪ್ಟೆಂಬರ್ 5 ರೊಳಗೆ 10 ತಂಡಗಳು ತಮ್ಮ ಬಳಗವನ್ನು ಘೋಷಿಸಬೇಕೆಂದು ಐಸಿಸಿ ತಿಳಿಸಿದೆ. ಅಂದರೆ ಇನ್ನುಳಿದಿರುವುದು ಕೇವಲ 1 ತಿಂಗಳು ಮಾತ್ರ. ಇದರೊಳಗೆ ಬಲಿಷ್ಠ ತಂಡವನ್ನು ರೂಪಿಸಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ. ಏಕೆಂದರೆ ಟೀಮ್ ಇಂಡಿಯಾದ ಕೆಲ ಸ್ಟಾರ್ ಆಟಗಾರರು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಆಟಗಾರರು ಮುಂಬರುವ ಏಕದಿನ ವಿಶ್ವಕಪ್​ಗೆ ಫಿಟ್ ಆಗಿರಲಿದ್ದಾರಾ ಎಂಬುದು ಇನ್ನು ಕೂಡ ನಿರ್ಧಾರವಾಗಿಲ್ಲ.

ಕಳೆದ ಒಂದು ವರ್ಷದಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದ ಜಸ್​ಪ್ರೀತ್ ಬುಮ್ರಾ ಐರ್ಲೆಂಡ್ ವಿರುದ್ಧದ ಸರಣಿಯ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ. ಆದರೆ ಮತ್ತೊಂದೆಡೆ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ಹಾಗೂ ರಿಷಭ್ ಪಂತ್ ಇನ್ನೂ ಕೂಡ ಗಾಯಾಳುಗಳಾಗಿ ಉಳಿದಿದ್ದಾರೆ.

ಇದಾಗ್ಯೂ ಕೆಎಲ್ ರಾಹುಲ್ ಬ್ಯಾಟಿಂಗ್ ಅಭ್ಯಾಸ ಆರಂಭಿಸಿರುವ ಕಾರಣ ಏಷ್ಯಾಕಪ್ ಮೂಲಕ ತಂಡಕ್ಕೆ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ. ಆದರೆ ಏಷ್ಯಾಕಪ್​ನಲ್ಲಿ ಭಾರತದ ಮೊದಲ ಪಂದ್ಯವಿರುವುದು ಸೆಪ್ಟೆಂಬರ್ 2 ರಂದು. ಅಂದರೆ ಪಾಕಿಸ್ತಾನ್ ವಿರುದ್ಧದ ಪಂದ್ಯದ ಮೂಲಕ ಕೆಎಲ್ ರಾಹುಲ್ ಕಂಬ್ಯಾಕ್ ಮಾಡಬಹುದು. ಆದರೆ ಇದಾಗಿ ಎರಡು ದಿನಗಳಲ್ಲೇ ಟೀಮ್ ಇಂಡಿಯಾ ಏಕದಿನ ವಿಶ್ವಕಪ್ ತಂಡವನ್ನು ಪ್ರಕಟಿಸಬೇಕಾಗುತ್ತದೆ.

ಇಲ್ಲಿ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಅವರು ಏಷ್ಯಾಕಪ್ ಮೂಲಕ ಕಂಬ್ಯಾಕ್ ಮಾಡಿದರೂ ಅವರ ಫಾರ್ಮ್​ ಅನ್ನು ನಿರ್ಧರಿಸಲು ಸಾಧ್ಯವಾಗುವುದಿಲ್ಲ. ಇದುವೇ ಈಗ ಆಯ್ಕೆ ಸಮಿತಿಯ ಚಿಂತೆಯನ್ನು ಹೆಚ್ಚಿಸಿದೆ.

ಮತ್ತೊಂದೆಡೆ ರಿಷಭ್ ಪಂತ್ ಕೂಡ ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಆದರೆ ವಿಶ್ವಕಪ್​ ವೇಳೆಗೆ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸುವುದು ಅನುಮಾನ. ಹೀಗಾಗಿ ಅವರನ್ನು ತಂಡದಿಂದ ಹೊರಗಿಡಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ.

ಬದಲಾವಣೆಗೆ ಅವಕಾಶ:

ಏಕದಿನ ವಿಶ್ವಕಪ್​ಗೆ ತಂಡವನ್ನು ಪ್ರಕಟಿಸಿದರೂ ಆ ಬಳಿಕ ಟೀಮ್ ಅನ್ನು ಬದಲಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಆದರೆ ಇದು ಏಕದಿನ ವಿಶ್ವಕಪ್ ಆರಂಭಕ್ಕೂ ಒಂದು ವಾರಗಳ ಮುಂಚಿತವಾಗಿರಬೇಕು ಎಂದು ತಿಳಿಸಲಾಗಿದೆ.

ಅಂದರೆ ಸೆಪ್ಟೆಂಬರ್ 28 ರ ಬಳಿಕ ತಂಡದಲ್ಲಿ ಯಾವುದೇ ಬದಲಾವಣೆ ಮಾಡುವಂತಿಲ್ಲ. ಒಂದು ವೇಳೆ ಗಾಯದ ಸಮಸ್ಯೆ ಅಥವಾ ಇನ್ನಿತರ ಮುಖ್ಯ ಕಾರಣಗಳಿಗಾಗಿ ತಂಡದಲ್ಲಿ ಬದಲಾವಣೆ ತರಬಹುದು. ಅದಕ್ಕೆ ಐಸಿಸಿಯ ಟೆಕ್ನಿಕಲ್ ಕಮಿಟಿಯ ಅನುಮತಿ ಪಡೆಯಬೇಕಾಗುತ್ತದೆ. ಹೀಗಾಗಿ ಮುಂದಿನ ಒಂದು ತಿಂಗಳಲ್ಲಿ ಬಲಿಷ್ಠ ಟೀಮ್ ಇಂಡಿಯಾವನ್ನು ರೂಪಿಸಬೇಕಾದ ಅನಿವಾರ್ಯತೆ ಬಿಸಿಸಿಐ ಆಯ್ಕೆ ಸಮಿತಿ ಮುಂದಿದೆ.

ಏಕದಿನ ವಿಶ್ವಕಪ್ ವೇಳಾಪಟ್ಟಿ:

ಏಕದಿನ ವಿಶ್ವಕಪ್​ ಅಕ್ಟೋಬರ್ 5 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ