‘ಡಿಯರ್ ಕ್ರಿಕೆಟ್, ಇನ್ನೊಂದು ಅವಕಾಶ ಕೊಡು’; ತನ್ನ ಅಳಲು ತೊಡಿಕೊಂಡ ಕನ್ನಡಿಗ ಕರುಣ್ ನಾಯರ್

Karun Nair: ಈ ತ್ರಿಶತಕದ ನಂತರ ಟೀಂ ಇಂಡಿಯಾದ ಟೆಸ್ಟ್ ತಂಡದಲ್ಲಿ ಖಾಯಂ ಸದಸ್ಯರಾಗುವ ಸೂಚನೆ ನೀಡಿದ್ದ ಕರುಣ್ ನಂತರ ಅಂದರೆ, ಮಾರ್ಚ್ 2017 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ಸರಣಿಯಲ್ಲಿ ಸತತ ವೈಫಲ್ಯಗಳಿಂದ ಟೆಸ್ಟ್ ತಂಡದಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದರು.

‘ಡಿಯರ್ ಕ್ರಿಕೆಟ್, ಇನ್ನೊಂದು ಅವಕಾಶ ಕೊಡು’; ತನ್ನ ಅಳಲು ತೊಡಿಕೊಂಡ ಕನ್ನಡಿಗ ಕರುಣ್ ನಾಯರ್
Karun Nair
Follow us
| Updated By: ಪೃಥ್ವಿಶಂಕರ

Updated on:Dec 11, 2022 | 5:34 PM

ಟೀಂ ಇಂಡಿಯಾದ (Team India) ಮಾಜಿ ಆಟಗಾರ ಹಾಗೂ ಕನ್ನಡಿಗ ಕರುಣ್ ನಾಯರ್ (Karun Nair) ತಂಡದ ಪರ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿ ಹಲವು ವರ್ಷಗಳೇ ಕಳೆದಿವೆ. ಸದ್ಯ 31 ವರ್ಷ ವಯಸ್ಸಾಗಿರುವ ಕರುಣ್​ಗೆ ಮತ್ತೆ ಟೀಂ ಇಂಡಿಯಾದ ಕದ ತೆರೆಯವುದು ಅಸಾಧ್ಯದ ಮಾತಾಗಿದೆ. ಆದರೆ ಕರುಣ್ ತಮ್ಮ ವೃತ್ತಿ ಬದುಕನ್ನು ಆರಂಭಿಸಿದಾಗ ಅವರ ಮೇಲಿದ್ದ ನಿರೀಕ್ಷೆಗಳೇ ಬೆರೆಯದ್ದಾಗಿದ್ದವು. ಅದರಲ್ಲೂ ತಾನು ಟೀಂ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಕಾಲಿಟ್ಟ ಎರಡನೇ ಟೆಸ್ಟ್ ಪಂದ್ಯದಲ್ಲಿ ದಾಖಲೆಯ ತ್ರಿಶತಕ ಸಿಡಿಸಿದ್ದ ಕರುಣ್ ಮೇಲೆ ಸಾಕಷ್ಟು ನಿರೀಕ್ಷೆಗಳು ಹುಟ್ಟಿಕೊಂಡಿದ್ದವು. ಆದರೆ ಕೇವಲ 4 ಟೆಸ್ಟ್​ ಪಂದ್ಯಗಳಿಗೆ ಟೀಂ ಇಂಡಿಯಾದಿಂದ ಗೇಟ್​ಪಾಸ್ ಪಡೆದುಕೊಂಡ ಕರುಣ್ ಆನಂತರ ಟೀಂ ಇಂಡಿಯಾದಲ್ಲಿ ಕಾಣಿಸಿಕೊಳ್ಳಲೇ ಇಲ್ಲ. ದೇಶೀ ಟೂರ್ನಿಗಳಲ್ಲಿ ಕರ್ನಾಟಕ ಪರ ಆಡುತ್ತಿದ್ದ ಕರುಣ್​ಗೆ ಈಗ ರಾಜ್ಯ ರಣಜಿ ತಂಡದಿಂದಲೂ ಕೋಕ್ ನೀಡಲಾಗಿದೆ. ಈ ಬಗ್ಗೆ ಅಸಮಾಧಾನಗೊಂಡಿರುವ ಕರುಣ್ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಮಾಡಿರುವ ಪೋಸ್ಟ್​ ಒಂದು ಈಗ ಸಖತ್ ವೈರಲ್ ಆಗುತ್ತಿದೆ.

ಎರಡನೇ ಟೆಸ್ಟ್ ಪಂದ್ಯದಲ್ಲಿ ತ್ರಿಶತಕ

ವಾಸ್ತವವಾಗಿ 2016ರಂದು ಇಂಗ್ಲೆಂಡ್ ವಿರುದ್ಧ ಮೊಹಾಲಿಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಿದ್ದ ಕರುಣ್, ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅದೇ ಇಂಗ್ಲೆಂಡ್ ತಂಡದ ವಿರುದ್ಧ ಭರ್ಜರಿ ತ್ರಿಶತಕ ಸಿಡಿಸಿ ಮಿಂಚಿದರು. ಕರುಣ್ ಅದ್ಭುತ ಆಟದಿಂದಾಗಿ ಟೀಂ ಇಂಡಿಯಾ ಈ ಟೆಸ್ಟ್ ಸರಣಿಯ ಐದನೇ ಪಂದ್ಯವನ್ನು ಇನ್ನಿಂಗ್ಸ್ ಮತ್ತು 75 ರನ್‌ಗಳಿಂದ ಗೆದ್ದುಕೊಂಡಿತ್ತು. ಈ ಪಂದ್ಯದಲ್ಲಿ ರನ್​ಗಳ ಶಿಖರ ನಿರ್ಮಿಸಿದ್ದ ಕರುಣ್ ತಮ್ಮ ಇನ್ನಿಂಗ್ಸ್​ನಲ್ಲಿ 32 ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳೊಂದಿಗೆ 303 ರನ್ ಚಚ್ಚಿದ್ದರು. ಈ ತ್ರಿಶತಕದೊಂದಿಗೆ ವೀರೇಂದ್ರ ಸೆಹ್ವಾಗ್ ನಂತರ ಈ ಸಾಧನೆ ಮಾಡಿದ ಭಾರತದ ಎರಡನೇ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.

ಈ ತ್ರಿಶತಕದ ನಂತರ ಟೀಂ ಇಂಡಿಯಾದ ಟೆಸ್ಟ್ ತಂಡದಲ್ಲಿ ಖಾಯಂ ಸದಸ್ಯರಾಗುವ ಸೂಚನೆ ನೀಡಿದ್ದ ಕರುಣ್ ನಂತರ ಅಂದರೆ, ಮಾರ್ಚ್ 2017 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ಸರಣಿಯಲ್ಲಿ ಸತತ ವೈಫಲ್ಯಗಳಿಂದ ಟೆಸ್ಟ್ ತಂಡದಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದರು. ಟೆಸ್ಟ್​ನಲ್ಲಿ ಮಾತ್ರವಲ್ಲದೆ 2016 ರಲ್ಲಿ ಜಿಂಬಾಬ್ವೆ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಕೇವಲ ಎರಡು ಪಂದ್ಯಗಳಲ್ಲಿ ಆಡುವ ಅವಕಾಶ ಪಡೆದಿದ್ದ ಕರುಣ್, ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಲಾಗದೆ, ಏಕದಿನ ತಂಡದಿಂದಲೂ ಹೊರನಡೆದಿದ್ದರು.

WTC Points Table: ಟೆಸ್ಟ್ ಚಾಂಪಿಯನ್‌ಶಿಪ್​ನಲ್ಲಿ ಕಾಂಗರೂಗಳಿಗೆ ನಂ.1 ಪಟ್ಟ; ಪಾಕ್ ಸೋತರಷ್ಟೇ ಭಾರತಕ್ಕೆ ಉಳಿಗಾಲ

ಡಿಯರ್ ಕ್ರಿಕೆಟ್, ನನಗೆ ಇನ್ನೊಂದು ಅವಕಾಶ ಕೊಡು

ಹೀಗೆ ಕೆಲವೇ ಕೆಲವು ಅವಕಾಶಗಳನ್ನು ಪಡೆದು, ಯಶಸ್ವಿಯಾಗದೆ ತಂಡದಿಂದ ಹೊರಗುಳಿದ ಕರುಣ್​ಗೆ ರಾಜ್ಯ ತಂಡದಲ್ಲೂ ಖಾಯಂ ಸ್ಥಾನ ಸಿಗಲಿಲ್ಲ. ಆಗಾಗ ದೇಶೀ ಟೂರ್ನಿಗಳನ್ನು ಆಡಿರುವ ಕರುಣ್​ರನ್ನು ಈಗ ರಣಜಿ ತಂಡದಿಂದಲೂ ಕೈಬಿಡಲಾಗಿದೆ. ಈಗ ತನಗಾಗಿರುವ ಅನ್ಯಾಯದ ಬಗ್ಗೆ ಮೌನ ಮುರಿದಿರುವ ಕರುಣ್, ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್​ ಹಾಕಿದ್ದು ಇದರಲ್ಲಿ, ‘ಡಿಯರ್ ಕ್ರಿಕೆಟ್, ನನಗೆ ಇನ್ನೊಂದು ಅವಕಾಶ ಕೊಡು’ ಎಂದು ಬರೆದುಕೊಂಡಿದ್ದಾರೆ. ಕರುಣ್ ಅವರ ಈ ಪೋಸ್ಟ್​ ನೋಡಿದ ಅನೇಕ ಮಾಜಿ ಕ್ರಿಕೆಟಿಗರು ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಮತ್ತೊಬ್ಬ ಕರ್ನಾಟಕದ ಆಟಗಾರ ದೊಡ್ಡ ಗಣೇಶ್ ಕರುಣ್​ಗೆ ಧೈರ್ಯ ತುಂಬುವ ಸಲುವಾಗಿ ಅವರ ಟ್ವೀಟ್​ಗೆ, ‘ಧೃಡವಾಗಿರುವ ಕರುಣ್, ನೀನು ಮತ್ತೆ ತಂಡಕ್ಕೆ ಹಿಂದಿರುಗುತ್ತೀಯ. ನೀನೊಬ್ಬ ಕ್ವಾಲಿಟಿ ಬ್ಯಾಟ್ಸ್​ಮನ್’ ಎಂದು ರೀಟ್ವೀಟ್ ಮಾಡಿದ್ದಾರೆ.

ಟೀಂ ಇಂಡಿಯಾದ ಕದ ಮುಚ್ಚಿದ ಬಳಿಕ ಕರ್ನಾಟಕದ ಪರ ದೇಶೀ ಟೂರ್ನಿಗಳಲ್ಲಿ ಆಡುವುದನ್ನು ಮುಂದುವರೆಸಿದ ಕರುಣ್, ಇಲ್ಲೂ ಸಹ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಹೀಗಾಗಿ ಕರುಣ್​ಗೆ ತಂಡದಲ್ಲಿ ಅವಕಾಶಗಳು ಕಡಿಮೆಯಾದವು. ಇದೀಗ ಆರಂಭವಾಗಲಿರುವ ರಣಜಿ ಟೂರ್ನಿಯ ಮೊದಲೆರಡು ಪಂದ್ಯಗಳಿಗೂ ಕರುಣ್​ಗೆ ರಾಜ್ಯ ತಂಡದಲ್ಲಿ ಅವಕಾಶ ಸಿಕ್ಕಿಲ್ಲ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:32 pm, Sun, 11 December 22

ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ