AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಸೌತ್ ಆಫ್ರಿಕಾ ಸರಣಿಗೂ ಟೀಮ್ ಇಂಡಿಯಾ ಆಟಗಾರ ಡೌಟ್..!

India vs South Africa: ಡಿಸೆಂಬರ್ 17 ರಿಂದ ಸೌತ್ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಲಿದೆ. ಈ ಸರಣಿಗೂ ಮುನ್ನ ದೀಪಕ್ ಚಹರ್ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವುದು ಅನುಮಾನ. ಏಕೆಂದರೆ ಅವರ ತಂದೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

IND vs SA: ಸೌತ್ ಆಫ್ರಿಕಾ ಸರಣಿಗೂ ಟೀಮ್ ಇಂಡಿಯಾ ಆಟಗಾರ ಡೌಟ್..!
ಟೀಮ್ ಇಂಡಿಯಾ
TV9 Web
| Edited By: |

Updated on:Dec 10, 2023 | 8:28 PM

Share

ಟೀಮ್ ಇಂಡಿಯಾ ವೇಗಿ ದೀಪಕ್ ಚಹರ್ (Deepak Chahar) ಸೌತ್ ಆಫ್ರಿಕಾ ವಿರುದ್ಧದ ಸೀಮಿತ ಓವರ್​ಗಳ ಸರಣಿಯಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಗಾಯದ ಕಾರಣ ಕಳೆದ ಕೆಲ ತಿಂಗಳಿಂದ ಮೈದಾನದದಿಂದ ಹೊರಗುಳಿದಿದ್ದ ದೀಪಕ್ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿ ಹಾಗೂ ಏಕದಿನ ಸರಣಿಗೆ ಆಯ್ಕೆಯಾಗಿದ್ದರು.

ಆದರೆ ತಂದೆ ಅನಾರೋಗ್ಯದ ಕಾರಣ ಅವರು ಸೌತ್ ಆಫ್ರಿಕಾಗೆ ಪ್ರಯಾಣ ಬೆಳೆಸಿಲ್ಲ. ಹೀಗಾಗಿ 3 ಪಂದ್ಯಗಳ ಟಿ20 ಸರಣಿಯಿಂದ ಅವರು ಹೊರಗುಳಿದಿದ್ದರು. ಇದೀಗ ಏಕದಿನ ಸರಣಿಗೂ ಅವರು ಅಲಭ್ಯರಾಗುವ ಸಾಧ್ಯತೆಯಿದೆ.

ದೀಪಕ್ ಚಹರ್ ಇನ್ನೂ ಡರ್ಬನ್‌ನಲ್ಲಿರುವ ಭಾರತ ತಂಡವನ್ನು ಸೇರಿಕೊಂಡಿಲ್ಲ. ಅವರ ಕುಟುಂಬದ ಸದಸ್ಯರೊಬ್ಬರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಅವರ ಕುಟುಂಬದ ಸದಸ್ಯರ ಆರೋಗ್ಯದ ಆಧಾರದ ಮೇಲೆ ಅವರು ತಂಡವನ್ನು ಸೇರಬಹುದು ಅಥವಾ ಸೇರಿಕೊಳ್ಳದೇ ಇರಬಹುದು” ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡಿಸೆಂಬರ್ 17 ರಿಂದ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಶುರುವಾಗಲಿದ್ದು, ಇದಕ್ಕೂ ಮುನ್ನ ದೀಪಕ್ ಚಹರ್ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವುದು ಕೂಡ ಅನುಮಾನ.

ಈ ಬಗ್ಗೆ ಇನ್​ಸೈಡ್​ ಸ್ಪೋರ್ಟ್ಸ್ ಜೊತೆ ಮಾತನಾಡಿರುವ ದೀಪಕ್ ಚಹರ್, ನನಗೆ ನನ್ನ ತಂದೆ ಬಹಳ ಮುಖ್ಯ. ಅವರು ನನ್ನನ್ನು ಆಟಗಾರನನ್ನಾಗಿ ಮಾಡಿದವರು. ಸದ್ಯದ ಸ್ಥಿತಿಯಲ್ಲಿ ಅವರನ್ನು ಬಿಟ್ಟು ಎಲ್ಲಿಯೂ ಹೋಗಲು ಸಾಧ್ಯವಿಲ್ಲ ಎಂದಿದ್ದಾರೆ.

ಅಲ್ಲದೆ ಸೌತ್ ಆಫ್ರಿಕಾ ವಿರುದ್ಧದ ಸರಣಿ ಬಗ್ಗೆ ಕೇಳಿದಾಗ, ನಾನು ಭಾರತ ತಂಡವನ್ನು ಕೂಡಿಕೊಳ್ಳುವುದು ನನ್ನ ತಂದೆಯ ಆರೋಗ್ಯದ ಮೇಲೆ ಅವಲಂಬಿತವಾಗಿದೆ ಎಂದು ಒತ್ತಿ ಹೇಳಿದರು. ಇದು ನನ್ನ ತಂದೆಯ ಆರೋಗ್ಯವನ್ನು ಅವಲಂಬಿಸಿರುತ್ತದೆ. ಸದ್ಯಕ್ಕೆ ಅವರನ್ನು ಬಿಟ್ಟು ಹೋಗಲಾರೆ ಎಂದು ತಿಳಿಸಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದಲೂ ದೀಪಕ್ ಚಹರ್ ಹೊರಗುಳಿಯುವ ಸಾಧ್ಯತೆಯಿದೆ.

ಭಾರತ ಏಕದಿನ ತಂಡ: ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್ , ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ದೀಪಕ್ ಚಹರ್.

ಇದನ್ನೂ ಓದಿ: IPL 2024: ಐಪಿಎಲ್ ಯಾವಾಗ ಶುರು? ಇಲ್ಲಿದೆ ಉತ್ತರ

ಭಾರತ-ಸೌತ್ ಆಫ್ರಿಕಾ ಏಕದಿನ ಸರಣಿ ವೇಳಾಪಟ್ಟಿ:

  • ಡಿಸೆಂಬರ್ 17- ಮೊದಲ ಏಕದಿನ ಪಂದ್ಯ (ಜೋಹಾನ್ಸ್​ಬರ್ಗ್​)
  • ಡಿಸೆಂಬರ್ 19- ಎರಡನೇ ಏಕದಿನ ಪಂದ್ಯ (ಗೆಬರ್ಹ)
  • ಡಿಸೆಂಬರ್ 21- ಮೂರನೇ ಏಕದಿನ ಪಂದ್ಯ (ಪಾರ್ಲ್​)

Published On - 8:26 pm, Sun, 10 December 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್