AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಸೌತ್ ಆಫ್ರಿಕಾ ಸರಣಿಗೂ ಟೀಮ್ ಇಂಡಿಯಾ ಆಟಗಾರ ಡೌಟ್..!

India vs South Africa: ಡಿಸೆಂಬರ್ 17 ರಿಂದ ಸೌತ್ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಲಿದೆ. ಈ ಸರಣಿಗೂ ಮುನ್ನ ದೀಪಕ್ ಚಹರ್ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವುದು ಅನುಮಾನ. ಏಕೆಂದರೆ ಅವರ ತಂದೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

IND vs SA: ಸೌತ್ ಆಫ್ರಿಕಾ ಸರಣಿಗೂ ಟೀಮ್ ಇಂಡಿಯಾ ಆಟಗಾರ ಡೌಟ್..!
ಟೀಮ್ ಇಂಡಿಯಾ
Follow us
TV9 Web
| Updated By: ಝಾಹಿರ್ ಯೂಸುಫ್

Updated on:Dec 10, 2023 | 8:28 PM

ಟೀಮ್ ಇಂಡಿಯಾ ವೇಗಿ ದೀಪಕ್ ಚಹರ್ (Deepak Chahar) ಸೌತ್ ಆಫ್ರಿಕಾ ವಿರುದ್ಧದ ಸೀಮಿತ ಓವರ್​ಗಳ ಸರಣಿಯಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಗಾಯದ ಕಾರಣ ಕಳೆದ ಕೆಲ ತಿಂಗಳಿಂದ ಮೈದಾನದದಿಂದ ಹೊರಗುಳಿದಿದ್ದ ದೀಪಕ್ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿ ಹಾಗೂ ಏಕದಿನ ಸರಣಿಗೆ ಆಯ್ಕೆಯಾಗಿದ್ದರು.

ಆದರೆ ತಂದೆ ಅನಾರೋಗ್ಯದ ಕಾರಣ ಅವರು ಸೌತ್ ಆಫ್ರಿಕಾಗೆ ಪ್ರಯಾಣ ಬೆಳೆಸಿಲ್ಲ. ಹೀಗಾಗಿ 3 ಪಂದ್ಯಗಳ ಟಿ20 ಸರಣಿಯಿಂದ ಅವರು ಹೊರಗುಳಿದಿದ್ದರು. ಇದೀಗ ಏಕದಿನ ಸರಣಿಗೂ ಅವರು ಅಲಭ್ಯರಾಗುವ ಸಾಧ್ಯತೆಯಿದೆ.

ದೀಪಕ್ ಚಹರ್ ಇನ್ನೂ ಡರ್ಬನ್‌ನಲ್ಲಿರುವ ಭಾರತ ತಂಡವನ್ನು ಸೇರಿಕೊಂಡಿಲ್ಲ. ಅವರ ಕುಟುಂಬದ ಸದಸ್ಯರೊಬ್ಬರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಅವರ ಕುಟುಂಬದ ಸದಸ್ಯರ ಆರೋಗ್ಯದ ಆಧಾರದ ಮೇಲೆ ಅವರು ತಂಡವನ್ನು ಸೇರಬಹುದು ಅಥವಾ ಸೇರಿಕೊಳ್ಳದೇ ಇರಬಹುದು” ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡಿಸೆಂಬರ್ 17 ರಿಂದ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಶುರುವಾಗಲಿದ್ದು, ಇದಕ್ಕೂ ಮುನ್ನ ದೀಪಕ್ ಚಹರ್ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವುದು ಕೂಡ ಅನುಮಾನ.

ಈ ಬಗ್ಗೆ ಇನ್​ಸೈಡ್​ ಸ್ಪೋರ್ಟ್ಸ್ ಜೊತೆ ಮಾತನಾಡಿರುವ ದೀಪಕ್ ಚಹರ್, ನನಗೆ ನನ್ನ ತಂದೆ ಬಹಳ ಮುಖ್ಯ. ಅವರು ನನ್ನನ್ನು ಆಟಗಾರನನ್ನಾಗಿ ಮಾಡಿದವರು. ಸದ್ಯದ ಸ್ಥಿತಿಯಲ್ಲಿ ಅವರನ್ನು ಬಿಟ್ಟು ಎಲ್ಲಿಯೂ ಹೋಗಲು ಸಾಧ್ಯವಿಲ್ಲ ಎಂದಿದ್ದಾರೆ.

ಅಲ್ಲದೆ ಸೌತ್ ಆಫ್ರಿಕಾ ವಿರುದ್ಧದ ಸರಣಿ ಬಗ್ಗೆ ಕೇಳಿದಾಗ, ನಾನು ಭಾರತ ತಂಡವನ್ನು ಕೂಡಿಕೊಳ್ಳುವುದು ನನ್ನ ತಂದೆಯ ಆರೋಗ್ಯದ ಮೇಲೆ ಅವಲಂಬಿತವಾಗಿದೆ ಎಂದು ಒತ್ತಿ ಹೇಳಿದರು. ಇದು ನನ್ನ ತಂದೆಯ ಆರೋಗ್ಯವನ್ನು ಅವಲಂಬಿಸಿರುತ್ತದೆ. ಸದ್ಯಕ್ಕೆ ಅವರನ್ನು ಬಿಟ್ಟು ಹೋಗಲಾರೆ ಎಂದು ತಿಳಿಸಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದಲೂ ದೀಪಕ್ ಚಹರ್ ಹೊರಗುಳಿಯುವ ಸಾಧ್ಯತೆಯಿದೆ.

ಭಾರತ ಏಕದಿನ ತಂಡ: ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್ , ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ದೀಪಕ್ ಚಹರ್.

ಇದನ್ನೂ ಓದಿ: IPL 2024: ಐಪಿಎಲ್ ಯಾವಾಗ ಶುರು? ಇಲ್ಲಿದೆ ಉತ್ತರ

ಭಾರತ-ಸೌತ್ ಆಫ್ರಿಕಾ ಏಕದಿನ ಸರಣಿ ವೇಳಾಪಟ್ಟಿ:

  • ಡಿಸೆಂಬರ್ 17- ಮೊದಲ ಏಕದಿನ ಪಂದ್ಯ (ಜೋಹಾನ್ಸ್​ಬರ್ಗ್​)
  • ಡಿಸೆಂಬರ್ 19- ಎರಡನೇ ಏಕದಿನ ಪಂದ್ಯ (ಗೆಬರ್ಹ)
  • ಡಿಸೆಂಬರ್ 21- ಮೂರನೇ ಏಕದಿನ ಪಂದ್ಯ (ಪಾರ್ಲ್​)

Published On - 8:26 pm, Sun, 10 December 23

ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!