AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಕ್ಯಾಚ್ ಹಿಡಿದ ಸಿರಾಜ್​ರನ್ನು ಮೈದಾನದಲ್ಲೇ ನಿಂದಿಸಿದ ಚಹರ್..!

Deepak Chahar - Mohammed Siraj: ಈ ಪಂದ್ಯದಲ್ಲಿ 228 ರನ್​ಗಳ ಟಾರ್ಗೆಟ್ ಪಡೆದ ಟೀಮ್ ಇಂಡಿಯಾ ಪರ ಆರಂಭಿಕ ಬ್ಯಾಟ್ಸ್​ಮನ್​ಗಳು ವಿಫಲರಾದರು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ದಿನೇಶ್ ಕಾರ್ತಿಕ್ 21 ಎಸೆತಗಳಲ್ಲಿ 46 ರನ್​ ಬಾರಿಸಿ ಅಬ್ಬರಿಸಿದರು.

VIDEO: ಕ್ಯಾಚ್ ಹಿಡಿದ ಸಿರಾಜ್​ರನ್ನು ಮೈದಾನದಲ್ಲೇ ನಿಂದಿಸಿದ ಚಹರ್..!
Deepak Chahar - Mohammed Siraj
TV9 Web
| Edited By: |

Updated on: Oct 05, 2022 | 10:25 AM

Share

India vs South Africa 3rd T20: ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಮೂರು ಪಂದ್ಯಗಳ ಸರಣಿಯ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 49 ರನ್‌ಗಳಿಂದ ಭಾರತ ತಂಡವನ್ನು ಸೋಲಿಸಿತು. ಇದಾಗ್ಯೂ ಮೊದಲೆರಡು ಪಂದ್ಯಗಳಲ್ಲಿ ಜಯ ಸಾಧಿಸಿರುವ ಟೀಮ್ ಇಂಡಿಯಾ 2-1 ಅಂತರದಿಂದ ಸರಣಿ ಗೆದ್ದುಕೊಂಡಿದೆ. ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಟೀಮ್ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) ದಕ್ಷಿಣ ಆಫ್ರಿಕಾ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು.

ಹೀಗೆ ಸಿಕ್ಕ ಅವಕಾಶವನ್ನು ಬಳಸಿಕೊಂಡ ಸೌತ್ ಆಫ್ರಿಕಾ ಬ್ಯಾಟ್ಸ್​​ಮನ್​ಗಳಾದ ರಿಲೀ ರೊಸ್ಸೋ (48 ಎಸೆತಗಳಲ್ಲಿ 100 ರನ್) ಮತ್ತು ಕ್ವಿಂಟನ್ ಡಿ ಕಾಕ್ (43 ಎಸೆತಗಳಲ್ಲಿ 68) ಸ್ಪೋಟಕ ಬ್ಯಾಟಿಂಗ್ ನಡೆಸಿದರು. ಹಾಗೆಯೇ ಅಂತಿಮ ಓವರ್​ ವೇಳೆ ಕಣಕ್ಕಿಳಿದ ಡೇವಿಡ್ ಮಿಲ್ಲರ್ ದೀಪಕ್ ಚಹರ್​ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸ್ ಸಿಡಿಸುವ ಮೂಲಕ ಅಬ್ಬರಿಸಿದರು. ಪರಿಣಾಮ ಸೌತ್ ಆಫ್ರಿಕಾ ತಂಡವು 20 ಓವರ್‌ಗಳಲ್ಲಿ 227/3 ರನ್​ಗಳ ಬೃಹತ್ ಮೊತ್ತ ಪೇರಿಸಿತು.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಆದರೆ ಕೊನೆಯ ಓವರ್​ನ 5ನೇ ಎಸೆತದಲ್ಲಿ ಡೇವಿಡ್ ಮಿಲ್ಲರ್ ಕ್ಯಾಚ್ ನೀಡಿದ್ದರು. ಚಹರ್​ ಎಸೆತದಲ್ಲಿ ಲೆಗ್​ಸೈಡ್​ನತ್ತ ಭರ್ಜರಿ ಶಾಟ್ ಬಾರಿಸಿದ್ದರು. ಈ ವೇಳೆ ಬೌಂಡರಿ ಲೈನ್​ನಲ್ಲಿದ್ದ ಮೊಹಮ್ಮದ್ ಸಿರಾಜ್ ಕ್ಯಾಚ್ ಹಿಡಿದರೂ, ಹಿಂದಕ್ಕೆ ಸಾಗಿ ಬೌಂಡರಿ ಲೈನ್ ಮೆಟ್ಟಿದರು. ಮೊದಲೇ ಎರಡು ಸಿಕ್ಸ್ ಹೊಡೆಸಿಕೊಂಡು ಕುಪಿತಗೊಂಡಿದ್ದ ದೀಪಕ್ ಚಹರ್ ಮತ್ತಷ್ಟು ಕೋಪಗೊಂಡರು. ಅಲ್ಲದೆ ಕ್ಯಾಚ್ ಹಿಡಿದು ಬೌಂಡರಿ ಲೈನ್ ಮೆಟ್ಟಿದ ಸಿರಾಜ್​ ರನ್ನು ಮೈದಾನದಲ್ಲೇ ನಿಂದಿಸಿದರು. ಇತ್ತ  ನಾಯಕ ರೋಹಿತ್ ಶರ್ಮಾ ಕೂಡ ತಮ್ಮ ಆಕ್ರೋಶವನ್ನು ಹಾವಭಾವದ ಮೂಲಕ ಪ್ರದರ್ಶಿಸಿದರು. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ 228 ರನ್​ಗಳ ಟಾರ್ಗೆಟ್ ಪಡೆದ ಟೀಮ್ ಇಂಡಿಯಾ ಪರ ಆರಂಭಿಕ ಬ್ಯಾಟ್ಸ್​ಮನ್​ಗಳು ವಿಫಲರಾದರು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ದಿನೇಶ್ ಕಾರ್ತಿಕ್ 21 ಎಸೆತಗಳಲ್ಲಿ 46 ರನ್​ ಬಾರಿಸಿ ಅಬ್ಬರಿಸಿದರು. ಆದರೆ ಉತ್ತಮ ದಾಳಿ ಸಂಘಟಿಸುವಲ್ಲಿ ಯಶಸ್ವಿಯಾದ ಸೌತ್ ಆಫ್ರಿಕಾ ತಂಡವು ಅಂತಿಮವಾಗಿ 18.3 ಓವರ್​ಗಳಲ್ಲಿ ಟೀಮ್ ಇಂಡಿಯಾವನ್ನು 170 ರನ್​ಗಳಿಗೆ ಆಲೌಟ್ ಮಾಡಿತು. ಈ ಮೂಲಕ ಗೆಲುವಿನೊಂದಿಗೆ ಸರಣಿಯನ್ನು ಅಂತ್ಯಗೊಳಿಸಿದೆ.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?