AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರನೌಟ್​ಗೆ ಅವಕಾಶವಿದ್ದರೂ ಔಟ್ ಮಾಡದ ದೀಪಕ್ ಚಹರ್..!

Deepak Chahar: ವಿಶೇಷ ಎಂದರೆ ಈ ಇನಿಂಗ್ಸ್​ನ ಮೊದಲ ಎಸೆತದಲ್ಲೇ ಕೈಯಾ ಅವರನ್ನು ಔಟ್ ಮಾಡುವ ಅವಕಾಶ ವೇಗಿ ದೀಪಕ್ ಚಹರ್ ಮುಂದಿತ್ತು.

Viral Video: ರನೌಟ್​ಗೆ ಅವಕಾಶವಿದ್ದರೂ ಔಟ್ ಮಾಡದ ದೀಪಕ್ ಚಹರ್..!
Deepak Chahar
TV9 Web
| Edited By: |

Updated on: Aug 23, 2022 | 10:37 AM

Share

ಭಾರತ-ಜಿಂಬಾಬ್ವೆ ನಡುವಣ ಏಕದಿನ ಸರಣಿ ಮುಗಿದಿದೆ. ಈ ಸರಣಿಯನ್ನು 3-0 ಅಂತರದಿಂದ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಆತಿಥೇಯರನ್ನು ಕ್ಲೀನ್ ಸ್ವೀಪ್ ಮಾಡಿದೆ. ಆದರೆ ಮೊದಲೆರಡು ಪಂದ್ಯಗಳಲ್ಲಿ ನೀರಯಾಸವಾಗಿ ಗೆದ್ದಿದ್ದ ಟೀಮ್ ಇಂಡಿಯಾಗೆ ಜಿಂಬಾಬ್ವೆ ಭರ್ಜರಿ ಪೈಪೋಟಿ ನೀಡಿತ್ತು ಎಂಬುದು ವಿಶೇಷ. ಟೀಮ್ ಇಂಡಿಯಾ ನೀಡಿದ 290 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಜಿಂಬಾಬ್ವೆ ಪರ ಇನ್ನೊಸೆಂಟ್ ಕೈಯಾ ಹಾಗೂ ಕೈಟಾನೊ ಇನಿಂಗ್ಸ್ ಆರಂಭಿಸಿದ್ದರು.

ವಿಶೇಷ ಎಂದರೆ ಈ ಇನಿಂಗ್ಸ್​ನ ಮೊದಲ ಎಸೆತದಲ್ಲೇ ಕೈಯಾ ಅವರನ್ನು ಔಟ್ ಮಾಡುವ ಅವಕಾಶ ವೇಗಿ ದೀಪಕ್ ಚಹರ್ ಮುಂದಿತ್ತು. ನಾನ್‌ಸ್ಟ್ರೈಕರ್‌ನ ತುದಿಯಲ್ಲಿದ್ದ ಓಪನರ್ ಇನ್ನೋಸೆಂಟ್ ಕೈಯಾ ಚಹರ್ ಚೆಂಡೆಸೆಯುವ ಮುನ್ನವೇ ಕ್ರೀಸ್ ಬಿಟ್ಟಿದ್ದರು. ಇದನ್ನು ಗಮಿಸಿದ ಟೀಮ್ ಇಂಡಿಯಾ ವೇಗಿ ಮಂಕಡ್ ರನೌಟ್ ಮಾಡಿದರು. ಆದರೆ ಅಂಪೈರ್​ಗೆ ಯಾವುದೇ ಮನವಿ ಸಲ್ಲಿಸದೇ ಜೀವದಾನ ನೀಡಿದರು. ಅಂದರೆ ದೀಪಕ್ ಚಹರ್ ಅಪೀಲ್ ಮಾಡಿದ್ದರೆ ಅಂಪೈರ್​ಗೆ ಔಟ್ ನೀಡುವ ಅವಕಾಶವಿತ್ತು. ಇದಕ್ಕೆ ಮುಂದಾಗದೇ ದೀಪಕ್ ಚಹರ್ ಮತ್ತೆ ಬೌಲಿಂಗ್ ಮಾಡಲು ಮುಂದಾದರು.

ಇದೀಗ ದೀಪಕ್ ಚಹರ್ ಅವರ ಮಂಕಡಿಂಗ್ ರನೌಟ್ ವಿಡಿಯೋ ವೈರಲ್ ಆಗಿದೆ. ಅಲ್ಲದೆ ಬೇಲ್ಸ್ ಎಗರಿಸಿದರೂ ಔಟ್​ಗಾಗಿ ಮೇಲ್ಮನವಿ ಸಲ್ಲಿಸದೇ ಕ್ರೀಡಾ ಸ್ಪೂರ್ತಿ ಮೆರೆದಿದಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಇನ್ನು ದೀಪಕ್ ಚಹರ್ ನೀಡಿದ ಈ ಜೀವದಾನವನ್ನು ಬಳಸಿಕೊಳ್ಳುವಲ್ಲಿ ಇನ್ನೊಸೆಂಟ್ ಕೈಯಾ ವಿಫಲರಾದರು. 9 ಎಸೆತಗಳಲ್ಲಿ 6 ರನ್​ಗಳಿಸಿ ಕೊನೆಗೆ ಚಹರ್ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆಗಿ ಹೊರನಡೆದರು.

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 290 ರನ್​ಗಳ ಬೃಹತ್ ಗುರಿ ಬೆನ್ನತ್ತಿದ ಜಿಂಬಾಬ್ವೆ ತಂಡವು 276 ರನ್​ಗಳಿಗೆ ಆಲೌಟ್ ಆಗುವ ಮೂಲಕ 13 ರನ್​ಗಳಿಂದ ವಿರೋಚಿತ ಸೋಲೊಪ್ಪಿಕೊಂಡಿತು.

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​