AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್‌ನಿಂದ ದೀಪಕ್ ಚಹಾರ್ ಔಟ್! ಶಮಿ, ಸಿರಾಜ್, ಶಾರ್ದೂಲ್​ಗೆ ಆಸ್ಟ್ರೇಲಿಯಾ ಟಿಕೆಟ್; ವರದಿ

T20 World Cup 2022: ದೀಪಕ್ ಅವರನ್ನು ಮೀಸಲು ಆಟಗಾರರ ಪಟ್ಟಿಯಿಂದ ಕೈಬಿಟ್ಟಿದ್ದು ಅವರ ಬದಲಿಗೆ ಮತ್ತೊಬ್ಬ ವೇಗಿ ಶಾರ್ದೂಲ್ ಠಾಕೂರ್ ಭಾರತದ ಮೀಸಲು ಆಟಗಾರರ ಪಟ್ಟಿಗೆ ಎಂಟ್ರಿಕೊಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಟಿ20 ವಿಶ್ವಕಪ್‌ನಿಂದ ದೀಪಕ್ ಚಹಾರ್ ಔಟ್! ಶಮಿ, ಸಿರಾಜ್, ಶಾರ್ದೂಲ್​ಗೆ ಆಸ್ಟ್ರೇಲಿಯಾ ಟಿಕೆಟ್; ವರದಿ
ದೀಪಕ್ ಚಹಾರ್, ಶಾರ್ದೂಲ್ ಠಾಕೂರ್
TV9 Web
| Updated By: ಪೃಥ್ವಿಶಂಕರ|

Updated on:Oct 12, 2022 | 12:33 PM

Share

ಟೀಂ ಇಂಡಿಯಾದ ಯುವ ವೇಗದ ಬೌಲರ್ ದೀಪಕ್ ಚಹಾರ್ (Deepak Chahar) 2022 ರ ಟಿ20 ವಿಶ್ವಕಪ್​ನಿಂದ (T20 World Cup) ಹೊರಗುಳಿದಿದ್ದಾರೆ ಎಂದು ‘ಸ್ಪೋರ್ಟ್ಸ್ ಟಾಕ್’ ವರದಿ ಮಾಡಿದೆ. ಈ ವರದಿಯ ಪ್ರಕಾರ ದೀಪಕ್ ಅವರನ್ನು ಮೀಸಲು ಆಟಗಾರರ ಪಟ್ಟಿಯಿಂದ ಕೈಬಿಟ್ಟಿದ್ದು ಅವರ ಬದಲಿಗೆ ಮತ್ತೊಬ್ಬ ವೇಗಿ ಶಾರ್ದೂಲ್ ಠಾಕೂರ್ (Shardul Thakur) ಭಾರತದ ಮೀಸಲು ಆಟಗಾರರ ಪಟ್ಟಿಗೆ ಎಂಟ್ರಿಕೊಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಮೊದಲು ಮೊಹಮ್ಮದ್ ಶಮಿ (Mohammad Shami), ದೀಪಕ್ ಚಹಾರ್, ಶ್ರೇಯಸ್ ಅಯ್ಯರ್ ಮತ್ತು ರವಿ ಬಿಷ್ಣೋಯ್ ಅವರು ಟಿ20 ವಿಶ್ವಕಪ್ 2022 ರ ಟೀಂ ಇಂಡಿಯಾದ ಮೀಸಲು ಆಟಗಾರರಾಗಿ ಆಯ್ಕೆಯಾಗಿದ್ದರು. ಆದರೆ ಇತ್ತೀಚಿನ ವರದಿಗಳ ಪ್ರಕಾರ, ಇಂಜುರಿ ಕಾರಣ ಟಿ20 ವಿಶ್ವಕಪ್​ನಿಂದ ಹೊರಬಿದ್ದಿರುವ ಜಸ್ಪ್ರೀತ್ ಬುಮ್ರಾ ಅವರ ಸ್ಥಾನಕ್ಕೆ ಮೊಹಮ್ಮದ್ ಶಮಿ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಿದ ಸಿರಾಜ್ ನಡುವೆ ಫೈಪೋಟಿ ಇದೆ ಎಂದು ಹೇಳಲಾಗುತ್ತಿದೆ.

ಹೀಗಾಗಿ ಕೊರೊನಾದಿಂದ ಗುಣಮುಖರಾಗಿರುವ ಶಮಿ, ಆಫ್ರಿಕಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಿರುವ ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಆಸ್ಟ್ರೇಲಿಯಾಕ್ಕೆ ಹಾರಲು ಸಿದ್ಧರಾಗಿದ್ದಾರೆ ಎಂದು ವರದಿಯಾಗಿದೆ. ಐಸಿಸಿ ನೀಡಿರುವ ಗಡುವಿನ ಮೊದಲು ಟೀಮ್ ಇಂಡಿಯಾ ತನ್ನ 15 ಜನರ ತಂಡವನ್ನು ಅಂತಿಮಗೊಳಿಸಬೇಕಾಗಿದ್ದು, ಅಕ್ಟೋಬರ್ 15 ರ ಒಳಗೆ ಅಂತಿಮ ತಂಡದ ಪಟ್ಟಿಯನ್ನು ಟೀಂ ಇಂಡಿಯಾ ಐಸಿಸಿಗೆ ಸಲ್ಲಿಸಬೇಕಾಗುತ್ತದೆ.

ಶಮಿ, ಸಿರಾಜ್ ಹಾಗೂ ಶಾರ್ದೂಲ್ ಆಸ್ಟ್ರೇಲಿಯಾಕ್ಕೆ ತಲುಪಿದ ನಂತರ ಬುಮ್ರಾ ಬದಲಿಗೆ ಯಾರನ್ನು ಆಡಿಸಬೇಕು ಎಂದು ನಾಯಕ ರೋಹಿತ್ ಶರ್ಮಾ ಮತ್ತು ಮ್ಯಾನೇಜ್‌ಮೆಂಟ್ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಆದರೆ ವಿಶ್ವಕಪ್‌ಗೆ ಬುಮ್ರಾ ಆಗಲಿ, ರವೀಂದ್ರ ಜಡೇಜಾ ಆಗಲಿ ಅಥವಾ ದೀಪಕ್ ಚಹಾರ್ ಆಗಲಿ ಲಭ್ಯವಾಗದಿರುವುದು ಭಾರತಕ್ಕೆ ದೊಡ್ಡ ಹಿನ್ನಡೆಯಾಗಿದ್ದು, ಎಲ್ಲಾ ಮೂವರು ಆಟಗಾರರು ಗಾಯದಿಂದ ಹೊರಗುಳಿದಿದ್ದಾರೆ.

ಇನ್ನು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಆಡಲಿರುವ ಪಂದ್ಯಗಳ ಬಗ್ಗೆ ಮಾತನಾಡುವುದಾದರೆ ಅಕ್ಟೋಬರ್ 23 ರಂದು ಪಾಕಿಸ್ತಾನ ವಿರುದ್ಧದ ಪಂದ್ಯದೊಂದಿಗೆ ಟೀಂ ಇಂಡಿಯಾ ತನ್ನ ವಿಶ್ವಕಪ್‌ ಅಭಿಯಾನವನ್ನು ಆರಂಭಿಸಲಿದೆ. ಆ ಬಳಿಕ ಅಕ್ಟೋಬರ್ 27 ರಂದು ಭಾರತ ಅರ್ಹತಾ ಸುತ್ತಲ್ಲಿ ಎ ಗುಂಪಿನ ರನ್ನರ್ ಅಪ್ ತಂಡವನ್ನು ಎದುರಿಸಲಿದೆ. ಇದರ ನಂತರ ಅಕ್ಟೋಬರ್ 30 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯ ನಡೆಯಲಿದೆ. ನವೆಂಬರ್ 2 ರಂದು ಬಾಂಗ್ಲಾದೇಶವನ್ನು ಎದುರಿಸಲಿದ್ದು, ನವೆಂಬರ್ 6 ರಂದು ಬಿ ಗುಂಪಿನಿಂದ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದ ತಂಡದ ವಿರುದ್ಧ ಪಂದ್ಯವನ್ನಾಡಲಿದೆ.

Published On - 11:45 am, Wed, 12 October 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ