AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ದೀಪಕ್ ಹೂಡಾ-ಅಕ್ಷರ್​ ಪಟೇಲ್​ಗೆ ಅಗ್ನಿ ಪರೀಕ್ಷೆ..!

Team India: ಪ್ರಸ್ತುತ ತಂಡದಲ್ಲಿ ಆಲ್​ರೌಂಡರ್​ ಆಗಿ ದೀಪಕ್ ಹೂಡಾ ಹಾಗೂ ಅಕ್ಷರ್ ಪಟೇಲ್ ಸ್ಥಾನ ಪಡೆದಿದ್ದಾರೆ. ಇವರಿಬ್ಬರಲ್ಲಿ ಒಬ್ಬರು ಜಡೇಜಾ ಸ್ಥಾನದಲ್ಲಿ ಕಣಕ್ಕಿಯುವುದು ಖಚಿತ.

T20 World Cup 2022: ದೀಪಕ್ ಹೂಡಾ-ಅಕ್ಷರ್​ ಪಟೇಲ್​ಗೆ ಅಗ್ನಿ ಪರೀಕ್ಷೆ..!
Deepak Hooda-Axar Patel
TV9 Web
| Edited By: |

Updated on: Sep 15, 2022 | 2:31 PM

Share

ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾ 6 ಟಿ20 ಪಂದ್ಯಗಳನ್ನಾಡಲಿದೆ. ಆಸ್ಟ್ರೇಲಿಯಾ ವಿರುದ್ಧ 3 ಟಿ20 ಪಂದ್ಯಗಳನ್ನಾಡಿದರೆ, ಇದಾದ ಬಳಿಕ ಸೌತ್ ಆಫ್ರಿಕಾ ವಿರುದ್ದ ಮೂರು ಪಂದ್ಯಗಳಲ್ಲಿ ಸೆಣಸಲಿದೆ. ವಿಶೇಷ ಎಂದರೆ ಈ 6 ಪಂದ್ಯಗಳ ಮೂಲಕ ಟಿ20 ವಿಶ್ವಕಪ್​ಗೆ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ಅನ್ನು ರೂಪಿಸಲು ಕೋಚ್ ರಾಹುಲ್ ದ್ರಾವಿಡ್ ಹಾಗೂ ನಾಯಕ ರೋಹಿತ್ ಶರ್ಮಾ ಪ್ಲ್ಯಾನ್ ರೂಪಿಸಿದ್ದಾರೆ.

ಏಕೆಂದರೆ ಟಿ20 ವಿಶ್ವಕಪ್ ತಂಡದಲ್ಲಿ ಪ್ರಮುಖ ಆಲ್​ರೌಂಡರ್ ರವೀಂದ್ರ ಜಡೇಜಾ ಇಲ್ಲ. ಗಾಯದ ಕಾರಣ ಜಡೇಜಾ ಅವರನ್ನು ಈ ಬಾರಿ ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲಾಗಿಲ್ಲ. ಹೀಗಾಗಿ ಅವರ ಸ್ಥಾನದಲ್ಲಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದೇ ದೊಡ್ಡ ಪ್ರಶ್ನೆ. ಈ ಪ್ರಶ್ನೆಗೆ ಮುಂಬರುವ 6 ಪಂದ್ಯಗಳ ಮೂಲಕ ಉತ್ತರ ಕಂಡುಕೊಳ್ಳುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

ಪ್ರಸ್ತುತ ತಂಡದಲ್ಲಿ ಆಲ್​ರೌಂಡರ್​ ಆಗಿ ದೀಪಕ್ ಹೂಡಾ ಹಾಗೂ ಅಕ್ಷರ್ ಪಟೇಲ್ ಸ್ಥಾನ ಪಡೆದಿದ್ದಾರೆ. ಇವರಿಬ್ಬರಲ್ಲಿ ಒಬ್ಬರು ಜಡೇಜಾ ಸ್ಥಾನದಲ್ಲಿ ಕಣಕ್ಕಿಯುವುದು ಖಚಿತ. ಇಲ್ಲಿ ಇಬ್ಬರೂ ಸ್ಪಿನ್ ಬೌಲಿಂಗ್ ಆಲ್​ರೌಂಡರ್ ಆಗಿರುವ ಕಾರಣ ಯಾರನ್ನು ಆಯ್ಕೆ ಮಾಡುವುದು ಎಂಬ ಚಿಂತೆ ಎದುರಾಗಿದೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇಲ್ಲಿ ಬ್ಯಾಟಿಂಗ್​ಗೆ ಪ್ರಾಮುಖ್ಯತೆ ನೀಡಿದರೆ ದೀಪಕ್ ಹೂಡಾಗೆ ಚಾನ್ಸ್​ ಸಿಗುವುದು ಖಚಿತ. ಇನ್ನು ಬೌಲಿಂಗ್​​ಗೆ ಮಣೆಹಾಕುವುದಾದರೆ ಹೂಡಾಗಿಂತ ಅಕ್ಷರ್ ಪಟೇಲ್ ಉತ್ತಮ ಆಯ್ಕೆ. ಹೀಗಾಗಿ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ಸರಣಿಗಳಲ್ಲಿ ಈ ಇಬ್ಬರಿಗೂ ಅವಕಾಶ ನೀಡಿ ಪರೀಕ್ಷಿಸಲಾಗುತ್ತದೆ.

ಈ ವೇಳೆ ಯಾರು ಉತ್ತಮ ಪ್ರದರ್ಶನ ನೀಡುತ್ತಾರೋ ಅವರು ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾದ​ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಲಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಸರಣಿಯು ಅಕ್ಷರ್ ಪಟೇಲ್ ಹಾಗೂ ದೀಪಕ್ ಹೂಡಾ ಪಾಲಿಗೆ ಅಗ್ನಿ ಪರೀಕ್ಷೆಯಾಗಿರಲಿದೆ.

ಏಕೆಂದರೆ ಏಷ್ಯಾಕಪ್​ ವೇಳೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ ಅನ್ನು ಅನೇಕ ಬಾರಿ ಬದಲಿಸಿದ್ದರು. ಈ ಬಗ್ಗೆ ಭಾರೀ ಟೀಕೆಗಳು ಕೂಡ ಕೇಳಿ ಬಂದಿತ್ತು. ಹಾಗಾಗಿ ಈ ಬಾರಿ ಮುಂಬರುವ 6 ಪಂದ್ಯಗಳ ಮೂಲಕ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ಅನ್ನು ರೂಪಿಸಲು ಕೋಚ್ ರಾಹುಲ್ ಹಾಗೂ ನಾಯಕ ರೋಹಿತ್ ಶರ್ಮಾ ಪ್ಲ್ಯಾನ್ ರೂಪಿಸಿದ್ದಾರೆ.

ಅದರಂತೆ ಟಿ20 ವಿಶ್ವಕಪ್​ನ ಟೀಮ್ ಇಂಡಿಯಾ ಪ್ಲೇಯಿಂಗ್​ ಇಲೆವೆನ್ ಅಕ್ಷರ್ ಪಟೇಲ್ ಸ್ಥಾನ ಪಡೆಯಲಿದ್ದಾರಾ ಅಥವಾ ದೀಪಕ್ ಹೂಡಾ ಸ್ಥಾನ ಖಚಿತಪಡಿಸಿಕೊಳ್ಳಲಿದ್ದಾರಾ ಎಂಬುದು ಭಾರತದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಪಂದ್ಯಗಳ ಮೂಲಕ ನಿರ್ಧಾರವಾಗಲಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ