AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿಶತಕ ಬಾರಿಸಿದ ದೀಪಕ್ ಹೂಡಾ

Deepak Hooda: ದೀಪಕ್ ಹೂಡಾ ಈ ಹಿಂದೆ ಬರೋಡಾ ಪರ ರಣಜಿ ಪಂದ್ಯಗಳನ್ನಾಡುತ್ತಿದ್ದರು. ಇದೀಗ ರಾಜಸ್ಥಾನ್ ಪರ ಹೊಸ ಇನಿಂಗ್ಸ್ ಆರಂಭಿಸಿರುವ ಹೂಡಾ ಭರ್ಜರಿ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಈ ಡಬಲ್ ಸೆಂಚುರಿಯೊಂದಿಗೆ ಮುಂಬೈ ವಿರುದ್ಧ ರಾಜಸ್ಥಾನ್ ತಂಡವು ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ 363 ರನ್​ಗಳ ಬೃಹತ್ ಮುನ್ನಡೆ ಪಡೆದುಕೊಂಡಿದೆ.

ದ್ವಿಶತಕ ಬಾರಿಸಿದ ದೀಪಕ್ ಹೂಡಾ
Deepak Hooda
ಝಾಹಿರ್ ಯೂಸುಫ್
|

Updated on: Nov 04, 2025 | 10:54 AM

Share

ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಗ್ರೂಪ್-ಡಿ ಪಂದ್ಯದಲ್ಲಿ ದೀಪಕ್ ಹೂಡಾ ಭರ್ಜರಿ ದ್ವಿಶತಕ ಬಾರಿಸಿದ್ದಾರೆ. ಮುಂಬೈ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ತಂಡದ ನಾಯಕ ಮಹಿಪಾಲ್ ಲೋಮ್ರರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡವು ಮೊದಲ ಇನಿಂಗ್ಸ್​ನಲ್ಲಿ 254 ರನ್​ಗಳಿಸಿ ಆಲೌಟ್ ಆಯಿತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ರಾಜಸ್ಥಾನ್ ತಂಡಕ್ಕೆ ಆರಂಭಿಕ ದಾಂಡಿಗ ಸಚಿನ್ ಯಾದವ್ (92) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಹಿಪಾಲ್ ಲೋಮ್ರರ್ 41 ರನ್​ಗಳ ಕೊಡುಗೆ ನೀಡಿದರು.

ಆ ಬಳಿಕ ಕಣಕ್ಕಿಳಿದ ದೀಪಕ್ ಹೂಡಾ ಆಕರ್ಷಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದರು. ಆರಂಭದಲ್ಲಿ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದ್ದ ಹೂಡಾ ಕ್ರೀಸ್​ನಲ್ಲಿ ನೆಲೆಯೂರುತ್ತಿದ್ದಂತೆ ಬಿರುಸಿನ ಬ್ಯಾಟಿಂಗ್​ಗೆ ಮುಂದಾದರು. ಈ ಮೂಲಕ ಶತಕ ಪೂರೈಸಿದರು.

ಸೆಂಚುರಿ ಬಳಿಕ ಕೂಡ ಜವಾಬ್ದಾರಿಯುತ ಬ್ಯಾಟಿಂಗ್ ಮುಂದುವರೆಸಿದ ದೀಪಕ್ ಹೂಡಾ 335 ಎಸೆತಗಳಲ್ಲಿ 22 ಫೋರ್​ ಹಾಗೂ 2 ಸಿಕ್ಸರ್​ಗಳೊಂದಿಗೆ 248 ರನ್ ಬಾರಿಸಿದರು. ದೀಪಕ್ ಹೂಡಾ ಅವರ ಈ ದ್ವಿಶತಕದ ನೆರವಿನೊಂದಿಗೆ ರಾಜಸ್ಥಾನ್ ತಂಡವು 6 ವಿಕೆಟ್ ಕಳೆದುಕೊಂಡು 617 ರನ್​ಗಳಿಸಿ ಡಿಕ್ಲೇರ್ ಘೋಷಿಸಿತು.

363 ರನ್​ಗಳ ಹಿನ್ನಡೆ:

ಮೊದಲ ಇನಿಂಗ್ಸ್​ನಲ್ಲಿನ 363 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಮುಂಬೈ ತಂಡಕ್ಕೆ ಯಶಸ್ವಿ ಜೈಸ್ವಾಲ್ ಹಾಗೂ ಮುಶೀರ್ ಖಾನ್ ಭರ್ಜರಿ ಆರಂಭ ಒದಗಿಸಿದ್ದಾರೆ. 56 ಎಸೆತಗಳನ್ನು ಎದುರಿಸಿರುವ ಯಶಸ್ವಿ ಜೈಸ್ವಾಲ್ 8 ಫೋರ್​ಗಳೊಂದಿಗೆ 56 ರನ್ ಬಾರಿಸಿದರೆ, ಮುಶೀರ್ 32 ರನ್​ಗಳಿಸಿ ಉತ್ತಮ ಸಾಥ್ ನೀಡಿದ್ದಾರೆ. ಈ ಮೂಲಕ ಮುಂಬೈ ತಂಡವು 3ನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 89 ರನ್ ಕಲೆಹಾಕಿದೆ.

ಸದ್ಯ ಮುಂಬೈ ತಂಡವು 274 ರನ್​ಗಳ ಹಿನ್ನಡೆ ಹೊಂದಿದ್ದು, ನಾಲ್ಕನೇ ದಿನದಾಟದಲ್ಲಿ ಆಲೌಟ್ ಆಗದೇ ಪಂದ್ಯವನ್ನು ಡ್ರಾನತ್ತ ಕೊಂಡೊಯ್ಯುವ ಇರಾದೆಯಲ್ಲಿದ್ದಾರೆ. ಅತ್ತ ಕೊನೆಯ ದಿನದಾಟದೊಳಗೆ ಮುಂಬೈ ತಂಡವನ್ನು ಆಲೌಟ್ ಮಾಡಿದರೆ ಮಾತ್ರ ರಾಜಸ್ಥಾನ್ ತಂಡಕ್ಕೆ ಈ ಪಂದ್ಯದಲ್ಲಿ ವಿಜಯ ಸಾಧಿಸಬಹುದು. ಹೀಗಾಗಿ ಅಂತಿಮ ದಿನದಾಟದಂದು ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ರಾಜಸ್ಥಾನ್ ಪ್ಲೇಯಿಂಗ್ XI: ಅಭಿಜಿತ್ ತೋಮರ್, ದೀಪಕ್ ಹೂಡಾ, ಕಾರ್ತಿಕ್ ಶರ್ಮಾ, ಕುನಾಲ್ ಸಿಂಗ್ ರಾಥೋರ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರರ್ (ನಾಯಕ), ರಾಹುಲ್ ಚಹರ್, ಸಚಿನ್ ಯಾದವ್, ಅಶೋಕ್ ಶರ್ಮಾ, ಅಂಕಿತ್ ಚೌಧರಿ, ಆಕಾಶ್ ಮಹಾರಾಜ್ ಸಿಂಗ್, ಕುಕ್ನಾ ಅಜಯ್ ಸಿಂಗ್.

ಇದನ್ನೂ ಓದಿ: AUS vs IND: ಆಸ್ಟ್ರೇಲಿಯಾ ತಂಡದಿಂದ ಮೂವರು ರಿಲೀಸ್..!

ಮುಂಬೈ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಮುಶೀರ್ ಖಾನ್, ಅಜಿಂಕ್ಯ ರಹಾನೆ, ಹಿಮಾಂಶು ಸಿಂಗ್, ಸಿದ್ಧೇಶ್ ಲಾಡ್, ಸರ್ಫರಾಝ್ ಖಾನ್, ಶಮ್ಸ್ ಮುಲಾನಿ, ಆಕಾಶ್ ಆನಂದ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್ (ನಾಯಕ), ಇರ್ಫಾನ್ ಉಮೈರ್, ತುಷಾರ್ ದೇಶಪಾಂಡೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ