
ಟೆಸ್ಟ್ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿಯ (Virat Kohli) ಯುಗಾಂತ್ಯವಾಗಿದೆ. ಈ ಯುಗಾಂತ್ಯದ ಬೆನ್ನಲ್ಲೇ ದೆಹಲಿ ರಣಜಿ ತಂಡದ ಕೋಚ್ ಸರಣ್ದೀಪ್ ಸಿಂಗ್ ನೀಡಿರುವ ಹೇಳಿಕೆಯು ಇದೀಗ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಏಕೆಂದರೆ ವಿರಾಟ್ ಕೊಹ್ಲಿ ತಿಂಗಳುಗಳ ಹಿಂದೆ ಇಂಗ್ಲೆಂಡ್ನಲ್ಲಿ ಚೆನ್ನಾಗಿ ಆಡಬೇಕೆಂದು ಕೋಚ್ ಜೊತೆ ಚರ್ಚಿಸಿದ್ದರು. ಆದರೆ ಇದೀಗ ಸರಣಿ ಆರಂಭಕ್ಕೆ ವಾರಗಳಿರುವಾಗ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ದೆಹಲಿ ತಂಡದ ಕೋಚ್ ಸರಣ್ದೀಪ್ ಸಿಂಗ್, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಬಳಿಕ ವಿರಾಟ್ ಕೊಹ್ಲಿ ದೆಹಲಿ ಪರ ರಣಜಿ ಪಂದ್ಯವಾಡಿದ್ದರು. ಈ ವೇಳೆ ಅವರು ರೆಡ್ ಬಾಲ್ ಕ್ರಿಕೆಟ್ನಲ್ಲಿ ಮತ್ತಷ್ಟು ಸಾಧನೆ ಮಾಡುವ ಇಂಗಿತವನ್ನು ಸಹ ವ್ಯಕ್ತಪಡಿಸಿದ್ದರು.
ಅಲ್ಲದೆ ಟೆಸ್ಟ್ ಕ್ರಿಕೆಟ್ನಿಂದ ಹಿಂದೆ ಸರಿಯುವ ಯಾವುದೇ ಸೂಚನೆಯನ್ನು ಸಹ ನೀಡಿರಲಿಲ್ಲ. ಅವರು ಇಂಗ್ಲೆಂಡ್ ಪ್ರವಾಸಕ್ಕೆ ಸಿದ್ಧತೆ ನಡೆಸುತ್ತಿದ್ದರು. ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಕೌಂಟಿ ಕ್ರಿಕೆಟ್ ಪಂದ್ಯಗಳನ್ನು ಆಡುತ್ತೀರಾ ಎಂದು ನಾನು ಅವರನ್ನು ಕೇಳಿದ್ದೆ?. ಅದಕ್ಕೆ ಇಲ್ಲ, ನಾನು ಭಾರತ-ಎ ಪಂದ್ಯಗಳನ್ನು ಆಡುತ್ತೇನೆ ಎಂದಿದ್ದರು.
ಅಂದರೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಸಿದ್ಧತೆ ಮಾಡಿಕೊಳ್ಳಲು ಅವರು ಭಾರತ ಎ ತಂಡದ ವಿರುದ್ಧ 2 ಪಂದ್ಯಗಳನ್ನು ಆಡಲಿದ್ದೇನೆ ಎಂದು ತಿಳಿಸಿದ್ದರು. ಅಷ್ಟೇ ಅಲ್ಲದೆ, ಈ ಬಾರಿ ಇಂಗ್ಲೆಂಡ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ವಿಶ್ವಾಸವನ್ನು ವಿರಾಟ್ ಕೊಹ್ಲಿ ವ್ಯಕ್ತಪಡಿಸಿದ್ದರು ಎಂದು ಸರಣ್ದೀಪ್ ಸಿಂಗ್ ಹೇಳಿದ್ದಾರೆ.
ಈ ಬಾರಿಯೂ ಇಂಗ್ಲೆಂಡ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಸಾಕಷ್ಟು ರನ್ ಗಳಿಸಲು ಬಯಸಿದ್ದರು. 2018 ರಲ್ಲಿ 3-4 ಶತಕಗಳನ್ನು ಬಾರಿಸಿದ್ದೆ. ಅದನ್ನೇ ಪುನರಾವರ್ತಿಸುವುದಾಗಿ ಕೊಹ್ಲಿ ನನ್ನ ಜೊತೆ ಹೇಳಿದ್ದರು. ಈ ಮೂಲಕ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡುವುದನ್ನು ಅವರು ಖಚಿತಪಡಿಸಿದ್ದರು. ಆದರೆ ಇದೀಗ ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ ಎಂದು ಸರಣ್ದೀಪ್ ಸಿಂಗ್ ಹೇಳಿದ್ದಾರೆ.
ಇತ್ತ ವಿರಾಟ್ ಕೊಹ್ಲಿಗೆ ಆಪ್ತರಾಗಿರುವ ದೆಹಲಿ ಕೋಚ್ ನೀಡಿರುವ ಹೇಳಿಕೆಯು ಹೊಸ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಇಂಗ್ಲೆಂಡ್ ಸರಣಿಯಲ್ಲಿ ಚೆನ್ನಾಗಿ ಆಡಬೇಕೆಂದು ಬಯಸಿದ್ದ ಕೊಹ್ಲಿಯಿಂದ ಒತ್ತಾಯ ಪೂರ್ವಕ ನಿವೃತ್ತಿ ಘೋಷಿಸುವಂತೆ ಮಾಡಿದ್ರಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಇದನ್ನೂ ಓದಿ: IPL 2025: 3 ಬಿಗ್ ಮ್ಯಾಚಸ್: RCB ತಂಡದ ಹೊಸ ವೇಳಾಪಟ್ಟಿ ಇಲ್ಲಿದೆ
ಒಟ್ಟಿನಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ 14 ವರ್ಷಗಳ ಕಾಲ ಕಿಂಗ್ ಆಗಿ ಮೆರೆದಿದ್ದ ವಿರಾಟ್ ಕೊಹ್ಲಿ ಬೀಳ್ಕೊಡುಗೆಯ ಪಂದ್ಯವಿಲ್ಲದೇ ತನ್ನ ದೀರ್ಘಾವಧಿ ಕೆರಿಯರ್ ಅನ್ನು ಅಂತ್ಯಗೊಳಿಸಿದ್ದಾರೆ. ಇಂತಹದೊಂದು ಅಂತ್ಯ ಅವಶ್ಯಕತೆಯಿತ್ತಾ ಎಂಬ ಅಭಿಮಾನಿಗಳ ಪ್ರಶ್ನೆಗೆ ಇದೀಗ ಸರಣ್ದೀಪ್ ಸಿಂಗ್ ನೀಡಿರುವ ಹೇಳಿಕೆಯು ಉತ್ತರವಾಗಿ ನಿಂತಿದೆ.