AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Capitals: ಮೊದಲ 4 ಪಂದ್ಯಗಳಲ್ಲಿ 4 ಗೆಲುವು, ಬಳಿಕ ಹೀನಾಯ ಸೋಲು: ಡೆಲ್ಲಿ ಕ್ಯಾಪಿಟಲ್ಸ್ ಎಲ್ಲಿ ತಪ್ಪು ಮಾಡುತ್ತಿದೆ?

ಡೆಲ್ಲಿ ಕ್ಯಾಪಿಟಲ್ಸ್‌ನ ಅಗ್ರ ಕ್ರಮಾಂಕದಲ್ಲಿ ಸ್ಥಿರತೆಯ ಕೊರತೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಕೆಎಲ್ ರಾಹುಲ್ ಹೊರತುಪಡಿಸಿ, ಯಾವುದೇ ಬ್ಯಾಟ್ಸ್‌ಮನ್ ಸ್ಥಿರವಾಗಿ ರನ್ ಗಳಿಸಲು ಸಾಧ್ಯವಾಗಿಲ್ಲ. ರಾಹುಲ್ 11 ಪಂದ್ಯಗಳಲ್ಲಿ 493 ರನ್ ಗಳಿಸಿದ್ದಾರೆ. ಇದನ್ನು ಹೊರತುಪಡಿಸಿ, ಯಾವುದೇ ಬ್ಯಾಟ್ಸ್‌ಮನ್ 300 ರನ್‌ಗಳನ್ನು ಸಹ ಗಳಿಸಿಲ್ಲ.

Delhi Capitals: ಮೊದಲ 4 ಪಂದ್ಯಗಳಲ್ಲಿ 4 ಗೆಲುವು, ಬಳಿಕ ಹೀನಾಯ ಸೋಲು: ಡೆಲ್ಲಿ ಕ್ಯಾಪಿಟಲ್ಸ್ ಎಲ್ಲಿ ತಪ್ಪು ಮಾಡುತ್ತಿದೆ?
Delhi Capitals (1)
Vinay Bhat
|

Updated on: May 19, 2025 | 9:42 AM

Share

ಬೆಂಗಳೂರು (ಮೇ. 19): ಇಂಡಿಯನ್ ಪ್ರೀಮಿಯರ್ ಲೀಗ್ 2025 ಡೆಲ್ಲಿ ಕ್ಯಾಪಿಟಲ್ಸ್ ಗೆ (Delhi Capitals) ಉತ್ತಮ ಆರಂಭ ಸಿಕ್ಕಿತು. ತಂಡವು ತಾನು ಆಡಿದ ಮೊದಲ ನಾಲ್ಕು ಪಂದ್ಯಗಳ ಪೈಕಿ ನಾಲ್ಕರಲ್ಲೂ ಗೆದ್ದು ಟೇಬಲ್ ಟಾಪರ್ ಆಗಿತ್ತು. ಅಕ್ಷರ್ ಪಟೇಲ್ ನಾಯಕತ್ವದಲ್ಲಿ ಆಟಗಾರರು ಅದ್ಭುತ ಆರಂಭ ಮಾಡಿದ್ದರು. ಆದರೆ ನಂತರ ಅವರು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯವನ್ನು ಸೋತರು. ಆ ಪಂದ್ಯದ ನಂತರ ದೆಹಲಿ ತಂಡ ಇದುವರೆಗೆ 8 ಪಂದ್ಯಗಳನ್ನು ಆಡಿದೆ. ಇದರಲ್ಲಿ ತಂಡವು ಕೇವಲ ಎರಡು ಗೆಲುವುಗಳನ್ನು ಮಾತ್ರ ಕಂಡಿದೆ. ಇದರಲ್ಲಿ ಒಂದು ಗೆಲುವು ಸೂಪರ್ ಓವರ್ ಮೂಲಕ. ಉತ್ತಮ ಆರಂಭ ಪಡೆದಿದ್ದ ಡೆಲ್ಲಿ ಕ್ಯಾಪಿಟಲ್ಸ್ ಮಹತ್ವದ ಹಂತದಲ್ಲಿ ಎಲ್ಲಿ ತಪ್ಪು ಮಾಡುತ್ತಿದೆ ಎಂಬುದನ್ನು ನೋಡೋಣ.

ಅಗ್ರ ಕ್ರಮಾಂಕದಲ್ಲಿ ಸ್ಥಿರತೆಯ ಕೊರತೆ

ಡೆಲ್ಲಿ ಕ್ಯಾಪಿಟಲ್ಸ್‌ನ ಅಗ್ರ ಕ್ರಮಾಂಕದಲ್ಲಿ ಸ್ಥಿರತೆಯ ಕೊರತೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಕೆಎಲ್ ರಾಹುಲ್ ಹೊರತುಪಡಿಸಿ, ಯಾವುದೇ ಬ್ಯಾಟ್ಸ್‌ಮನ್ ಸ್ಥಿರವಾಗಿ ರನ್ ಗಳಿಸಲು ಸಾಧ್ಯವಾಗಿಲ್ಲ. ರಾಹುಲ್ 11 ಪಂದ್ಯಗಳಲ್ಲಿ 493 ರನ್ ಗಳಿಸಿದ್ದಾರೆ. ಇದನ್ನು ಹೊರತುಪಡಿಸಿ, ಯಾವುದೇ ಬ್ಯಾಟ್ಸ್‌ಮನ್ 300 ರನ್‌ಗಳನ್ನು ಸಹ ಗಳಿಸಿಲ್ಲ. ಮುಖ್ಯವಾಗಿ ಫಾಫ್ ಡು ಪ್ಲೆಸಿಸ್ ಮತ್ತು ಕರುಣ್ ನಾಯರ್ ಸ್ಥಿರವಾಗಿ ರನ್ ಗಳಿಸುವಲ್ಲಿ ವಿಫಲರಾದರು.

ಇದನ್ನೂ ಓದಿ
Image
ಡೆಲ್ಲಿ-ಜಿಟಿ ಪಂದ್ಯದಲ್ಲಿ ನಿರ್ಮಾಣವಾಗಿದ್ದು ಈ 5 ದೊಡ್ಡ ದಾಖಲೆಗಳು
Image
ಅವಮಾನಕರ ಸೋಲಿನ ನಂತರ ಅಕ್ಷರ್ ಪಟೇಲ್ ದುಃಖದ ಮಾತು
Image
ಡೆಲ್ಲಿ ವಿರುದ್ಧ 10 ವಿಕೆಟ್​ಗಳಿಂದ ಗೆದ್ದು ಇತಿಹಾಸ ಸೃಷ್ಟಿಸಿದ ಗುಜರಾತ್
Image
ಕೊಹ್ಲಿ ದಾಖಲೆ ಮುರಿದ ಕೆಎಲ್ ರಾಹುಲ್

ಪೇಸ್ ಬೌಲಿಂಗ್ ಬಲಿಷ್ಠವಾಗಿ ಕಾಣುತ್ತಿಲ್ಲ

ಋತುವಿನ ಆರಂಭಿಕ ಪಂದ್ಯಗಳಲ್ಲಿ ಮಿಚೆಲ್ ಸ್ಟಾರ್ಕ್ ಅದ್ಭುತ ಬೌಲಿಂಗ್ ಮಾಡಿದರು. ಆದರೆ ಅದನ್ನು ಹೊರತುಪಡಿಸಿ ವೇಗಿಗಳು ಪ್ರಭಾವ ಬೀರುವಲ್ಲಿ ವಿಫಲರಾಗಿದ್ದಾರೆ. ಮುಖೇಶ್ ಕುಮಾರ್ ನಿರಂತರವಾಗಿ ದುಬಾರಿ ಎಂದು ಸಾಬೀತಾದ ನಂತರ ಅವರನ್ನು ಕೈಬಿಡಲಾಗಿದೆ. ದುಷ್ಮಂತ ಚಮೀರ ಮತ್ತು ಮೋಹಿಲ್ ಶರ್ಮಾ ಕೂಡ ವಿಶೇಷವಾದದ್ದೇನನ್ನೂ ಮಾಡಲು ಸಾಧ್ಯವಾಗಿಲ್ಲ. ಸ್ಟಾರ್ಕ್ ನಿರ್ಗಮನದ ನಂತರ, ಬೌಲಿಂಗ್ ಇನ್ನಷ್ಟು ನಿಷ್ಪರಿಣಾಮಕಾರಿಯಾಗಿ ಕಾಣುತ್ತಿದೆ. ಇದರಿಂದಲೇ ಸದ್ಯ ಇವರ ಪ್ಲೇ ಆಫ್ ಮುಚ್ಚುವ ಹಂತಕ್ಕೆ ತಲುಪಿದೆ.

ಕುಲದೀಪ್ ಯಾದವ್ ವಿಕೆಟ್ ಪಡೆಯುತ್ತಿಲ್ಲ

ಕುಲದೀಪ್ ಯಾದವ್ ಐಪಿಎಲ್ 2025 ರ ಆರಂಭಿಕ ಪಂದ್ಯಗಳಲ್ಲಿ ಅದ್ಭುತ ಬೌಲಿಂಗ್ ಮಾಡಿದರು. ಅವರು ಪರ್ಪಲ್ ಕ್ಯಾಪ್‌ನ ರೇಸ್‌ನಲ್ಲಿ ಕೂಡ ಕಾಣಿಸಿಕೊಂಡರು. ಆದರೆ ಅವರ ಫಾರ್ಮ್ ಕುಸಿದಿದೆ. ಕಳೆದ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಅವರು ಒಂದೇ ಒಂದು ವಿಕೆಟ್ ಪಡೆಯಲಿಲ್ಲ. ಇದೇ ಕಾರಣಕ್ಕೆ ದೆಹಲಿ ತಂಡ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ಸ್‌ಮನ್‌ಗಳ ಮೇಲೆ ಒತ್ತಡ ಹೇರಲು ಸಾಧ್ಯವಾಗುತ್ತಿಲ್ಲ.

DC vs GT, IPL 2025: ರಾಹುಲ್- ಸುದರ್ಶನ್ ಶತಕ: ಡೆಲ್ಲಿ-ಜಿಟಿ ಪಂದ್ಯದಲ್ಲಿ ನಿರ್ಮಾಣವಾಗಿದ್ದು ಈ 5 ದೊಡ್ಡ ದಾಖಲೆಗಳು

ಅಕ್ಷರ್ ನಾಯಕತ್ವ ಹಲವು ಸಂದರ್ಭಗಳಲ್ಲಿ ವಿಫಲ

ಹಲವು ಸಂದರ್ಭಗಳಲ್ಲಿ, ಅಕ್ಷರ್ ಪಟೇಲ್ ಅವರ ನಾಯಕತ್ವವನ್ನು ಯಾರೂ ಅರ್ಥಮಾಡಿಕೊಳ್ಳಲಾಗುತ್ತಿಲ್ಲ. ನಟರಾಜನ್ ಪವರ್‌ಪ್ಲೇನಲ್ಲಿ ಬೌಲಿಂಗ್ ಮಾಡುವುದಕ್ಕೆ ಹೆಸರುವಾಸಿಯಲ್ಲ, ಆದರೆ ಗುಜರಾತ್ ವಿರುದ್ಧದ ಪಂದ್ಯದಲ್ಲಿ ಅವರಿಗೆ ಹೊಸ ಚೆಂಡನ್ನು ನೀಡಲಾಯಿತು. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಸ್ಟಾರ್ಕ್ ಮತ್ತು ಚಮೀರ ತಮ್ಮ ಓವರ್‌ಗಳನ್ನು ಬೌಲ್ ಮಾಡಿದ ನಂತರವೂ, ಮುಖೇಶ್ ಅವರಿಗೆ 19 ನೇ ಓವರ್ ನೀಡಲಾಯಿತು. ಇದಿಷ್ಟೆ ಅಲ್ಲದೆ, ಪಂದ್ಯದಿಂದ ಪಂದ್ಯಕ್ಕೆ ತಂಡದ ಆರಂಭಿಕ ಜೋಡಿ ಕೂಡ ನಿರಂತರವಾಗಿ ಬದಲಾಗುತ್ತಿದೆ.

ಸದ್ಯ ಗುಜರಾತ್ ವಿರುದ್ಧ ದೆಹಲಿ ಸೋತಿರುವುದರಿಂದ ಉಳಿದ ಎರಡೂ ಪಂದ್ಯಗಳನ್ನು ಗೆಲ್ಲಲೇಬೇಕು. ಆಗ ಇವರ ಅಂಕ 17ಕ್ಕೆ ತಲುಪುತ್ತದೆ. ಪ್ಲೇ ಅರ್ಹತೆಯು ನಿವ್ವಳ ರನ್ ದರ ಮತ್ತು ಇತರ ಫಲಿತಾಂಶಗಳನ್ನು ಅವಲಂಬಿಸಿರುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ