AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಟ: ​ಐಪಿಎಲ್ ಟೂರ್ನಿಯಿಂದ ದೂರ ಸರಿದ ಕೆಚ್ಚೆದೆಯ ಆಟಗಾರ ಆರ್​ ಅಶ್ವಿನ್, ಆರ್​ಸಿಬಿ ತಂಡಕ್ಕೂ ಬರೆ; ಇಬ್ಬರು ಸ್ವದೇಶಕ್ಕೆ ವಾಪಸ್​

Ravichandran Ashwin withdraws from IPL: ಕೊರೊನಾ ಕಾಟ: ​ಐಪಿಎಲ್ ಟೂರ್ನಿಯ ಉಳಿದ ಪಂದ್ಯಗಳಿಂದ ದೂರ ಸರಿದ ಕೆಚ್ಚೆದೆಯ ಆಟಗಾರ ಆರ್​ ಅಶ್ವಿನ್​. ಈ ಮಧ್ಯೆ, ಇಡೀ ದೇಶವೇ ಕೊರೊನಾದಿಂದ ನಲುಗುತ್ತಿರುವಾಗ ಐಪಿಎಲ್ ನಗುತ್ತಿರುವುದರ ಬಗ್ಗೆ ಕ್ರಿಕೆಟ್​ ಪ್ರೇಮಿಗಳೂ ಸೇರಿದಂತೆ ಎಲ್ಲೆಡೆಯೂ ವ್ಯಾಪಕ ಟೀಕೆಗಳು ಕೇಳಿಬರುತ್ತಿವೆ. ಕೊರೊನಾದಿಂದಾಗಿ ಹಾಲಿ ಟೂರ್ನಿಯನ್ನು ಇಲ್ಲಿಗೇ ನಿಲ್ಲಿಸಿ ಎಂದು ಜನ ಕೇಳತೊಡಗಿದ್ದಾರೆ. ಹಾಲಿ ಐಪಿಎಲ್ ಟೂರ್ನಿ ಮೇ 30 ರವರೆಗೂ ನಡೆಯಲಿದೆ.

ಕೊರೊನಾ ಕಾಟ: ​ಐಪಿಎಲ್ ಟೂರ್ನಿಯಿಂದ ದೂರ ಸರಿದ ಕೆಚ್ಚೆದೆಯ ಆಟಗಾರ ಆರ್​ ಅಶ್ವಿನ್, ಆರ್​ಸಿಬಿ ತಂಡಕ್ಕೂ ಬರೆ; ಇಬ್ಬರು ಸ್ವದೇಶಕ್ಕೆ ವಾಪಸ್​
ಆರ್​. ಅಶ್ವಿನ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 26, 2021 | 1:01 PM

Share

ಕೆಚ್ಚೆದೆಯ ಆಟಗಾರ ಎಂದೇ ಕ್ರಿಕೆಟ್​ ಪ್ರೇಮಿಗಳಿಂದ ಗುರುತಿಸಲ್ಪಟ್ಟಿರುವ ಆರ್​ ಅಶ್ವಿನ್​ ಅವರು ಈ ಬಾರಿಯ ಐಪಿಎಲ್ 2021 ಗೆ ಗುಡ್​ ಬೈ ಹೇಳಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಪ್ರಸಕ್ತ ​ಐಪಿಎಲ್ ಟೂರ್ನಿಯ ಉಳಿದ ಪಂದ್ಯಗಳಿಂದ ತಾವು ದೂರ ಸರಿಯುತ್ತಿರುವುದಾಗಿ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಪರ ಆಡುವ ಸ್ಪಿನ್ನರ್ ತಮ್ಮ ನಿರ್ಧಾರ ಘೋಷಿಸಿದ್ದಾರೆ. ಇದಕ್ಕೆ ಮುಖ್ಯ ಕಾರಣ.. ಕೊರೊನಾ ಕಾಟ ಎಂಬುದಾಗಿ ಅವರು ಹೇಳಿದ್ದಾರೆ. ಕೊರೊನಾ ಸೋಂಕಿನಿಂದ ತಮ್ಮ ಕುಟುಂಬಸ್ಥರು ಬಳಲುತ್ತಿದ್ದಾರೆ. ಹಾಗಾಗಿ, ಈ ಪರಿಸ್ಥಿತಿಯಲ್ಲಿ ನಾನು ಅವರ ಜೊತೆಗೆ ಇರಬೇಕಾಗಿದೆ. ಹಾಗಾಗಿ ಈ ನಿರ್ಧಾರ ಅನಿವಾರ್ಯವಾಗಿದೆ ಎಂದು ಟ್ವೀಟ್​ ಮಾಡಿ ಅಶ್ವಿನ್ ತಿಳಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಕ್ಯಾಪ್ಟನ್​ ಅಶ್ವಿನ್​ ಅವರ ಈ ನಿರ್ಧಾರವನ್ನು ಸ್ವಾಗತಿಸಿ, ಟ್ವೀಟ್​ ಮಾಡಿದ್ದಾರೆ.

ಕೆಚ್ಚೆದೆಯ ಆಟಗಾರ 34 ವರ್ಷದ ಆರ್​ ಅಶ್ವಿನ್​ ಐಪಿಎಲ್ ಟೂರ್ನಿಯಿಂದ ದೂರ ಸರಿದಿರುವುದರಿಂದ ತಾವು ಆಡುವ ತಂಡ ಡೆಲ್ಲಿ ಕ್ಯಾಪಿಟಲ್ಸ್​ಗೆ ಭಾರಿ ಹೊಡೆತ ಬಿದ್ದಂತಾಗಿದೆ. ಜೊತೆಗೆ ಐಪಿಎಲ್ ಟೂರ್ನಿಗೂ ಇದು ನುಂಗಲಾರದ ತುತ್ತಾಗಿದೆ. ಆದರೆ ಕೊರೊನಾ ಮಾರಿ ದಿನೇದಿನೆ ದೇಶದಲ್ಲಿ ತನ್ನ ಕದಂಬಬಾಹುಗಳನ್ನು ಚಾಚುತ್ತಿರುವಾಗ ಪರಿಸ್ಥಿತಿ ಭೀಕರವೆನಿಸುತ್ತಿದೆ. 77 ಟೆಸ್ಟ್​ ಪಂದ್ಯಗಳನ್ನು ಆಡಿರುವ ಅಶ್ವಿನ್​ ರವಿಚಂದ್ರನ್, 111 ODIs, 46 T20 Internationals ಪಂದ್ಯಗಳನ್ನು ಆಡಿದ್ದಾರೆ.

ಈ ಮಧ್ಯೆ, ಇಡೀ ದೇಶವೇ ಕೊರೊನಾದಿಂದ ನಲುಗುತ್ತಿರುವಾಗ ಐಪಿಎಲ್ ನಗುತ್ತಿರುವುದರ ಬಗ್ಗೆ ಕ್ರಿಕೆಟ್​ ಪ್ರೇಮಿಗಳೂ ಸೇರಿದಂತೆ ಎಲ್ಲೆಡೆಯೂ ವ್ಯಾಪಕ ಟೀಕೆಗಳು ಕೇಳಿಬರುತ್ತಿವೆ. ಕೊರೊನಾದಿಂದಾಗಿ ಹಾಲಿ ಟೂರ್ನಿಯನ್ನು ಇಲ್ಲಿಗೇ ನಿಲ್ಲಿಸಿ ಎಂದು ಜನ ಕೇಳತೊಡಗಿದ್ದಾರೆ. ಹಾಲಿ ಐಪಿಎಲ್ ಟೂರ್ನಿ ಮೇ 30 ರವರೆಗೂ ನಡೆಯಲಿದೆ.

(Delhi Capitals spinner Ravichandran Ashwin withdraws from IPL to support family over COVID-19)

ಕೊರೊನಾ ಕಾಟವು ಆರ್​ಸಿಬಿ ತಂಡಕ್ಕೂ ಬರೆ ಹಾಕಿದೆ. ತಂಢದ ಪರ ಆಡುತ್ತಿದ್ದ ಆಸ್ಟ್ರೇಲಿಯಾದ ಇಬ್ಬರು ಆಟಗಾರರು ಸ್ವದೇಶಕ್ಕೆ ವಾಪಸ್​ ಆಗಿದ್ದಾರೆ. ಆರ್​ಸಿಬಿ ತಂಡದ ಪರ ಆಡುತ್ತಿದ್ದ ಆಸ್ಟ್ರೇಲಿಯಾದ ಕೇನ್ ರಿಚರ್ಡ್​ಸನ್ ಮತ್ತು ಅಡಂ ಜಂಪಾ ಅವರಿಬ್ಬರೂ ಕೊರೊನಾ ಸೋಂಕಿನ ಪ್ರಮಾಣ ಮಾರಣಾಂತಿಕವಾಗಿ ಹೆಚ್ಚುತ್ತಿರುವುದರಿಂದ ಸ್ವದೇಶಕ್ಕೆ ಮರಳಿದ್ದಾರೆ.

Published On - 10:15 am, Mon, 26 April 21

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ