AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾದಾ, ಯುವಿ, ವಾಸ್… ಡೆಲ್ಲಿ ಕ್ಯಾಪಿಟಲ್ಸ್ ಹೊಸ ‘ಮಾಸ್ಟರ್ ಮೈಂಡ್ಸ್’

ಭಾರತೀಯ ಕ್ರಿಕೆಟ್‌ಗೆ ಆಕ್ರಮಣಕಾರಿ ಆಟದ ಶೈಲಿಯನ್ನು ಪರಿಚಯಿಸಿದ ಸೌರವ್ ಗಂಗೂಲಿ ಮತ್ತು ಎರಡು ಬಾರಿ ವಿಶ್ವಕಪ್ ಗೆಲ್ಲಿಸಿಕೊಟ್ಟ ಮ್ಯಾಚ್ ವಿನ್ನರ್ ಯುವರಾಜ್ ಸಿಂಗ್ ಈಗ ಒಂದೇ ಡಗೌಟ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ! ಹೌದು, ಮುಂಬರುವ ಐಪಿಎಲ್ ಸೀಸನ್-20 ಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಅಸಾಧಾರಣ ಕೋಚಿಂಗ್ ಪ್ಯಾನೆಲ್ ಒಂದನ್ನು ಅಖಾಡಕ್ಕಿಳಿಸಲು ಸಂಪೂರ್ಣವಾಗಿ ಸಜ್ಜಾಗಿದೆ.

ದಾದಾ, ಯುವಿ, ವಾಸ್... ಡೆಲ್ಲಿ ಕ್ಯಾಪಿಟಲ್ಸ್ ಹೊಸ 'ಮಾಸ್ಟರ್ ಮೈಂಡ್ಸ್'
ದಾದಾ, ಯುವಿ, ವಾಸ್Image Credit source: x.com
ಝಾಹಿರ್ ಯೂಸುಫ್
|

Updated on: Sep 13, 2026 | 12:25 PM

Share

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-20 ಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಭರ್ಜರಿ ಸಿದ್ಧತೆಗಳನ್ನು ಆರಂಭಿಸಿದೆ. ಇದರ ಮೊದಲ ಹೆಜ್ಜೆಯಾಗಿ ಇದೀಗ ಡೆಲ್ಲಿ ತಂಡದ ಹೊಸ ಕೋಚಿಂಗ್ ಸಿಬ್ಬಂದಿಯನ್ನು ಆಯ್ಕೆ ಮಾಡಲಾಗಿದೆ. ಈ ಕೋಚಿಂಗ್ ಬಳಗದಲ್ಲಿ ಟೀಮ್ ಇಂಡಿಯಾದ ಮೂವರು ಮಾಜಿ ಕ್ರಿಕೆಟಿಗರು ಹಾಗೂ ಶ್ರೀಲಂಕಾದ ಮಾಜಿ ವೇಗಿ ಕಾಣಿಸಿಕೊಂಡಿರುವುದು ವಿಶೇಷ. ಅದರಂತೆ ಮುಂಬರುವ ಸೀಸನ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್‌ಗಳಾಗಿ ಸೌರವ್ ಗಂಗೂಲಿ, ಯುವರಾಜ್ ಸಿಂಗ್, ಚಾಮಿಂಡ ವಾಸ್ ಹಾಗೂ ಅಮಿತ್ ಮಿಶ್ರಾ ಕಾರ್ಯನಿರ್ವಹಿಸಲಿದ್ದಾರೆ.

  • ಮುಖ್ಯ ಕೋಚ್: ಸೌರವ್ ಗಂಗೂಲಿ (ಟೀಮ್ ಇಂಡಿಯಾದ ಮಾಜಿ ನಾಯಕ)
  • ಸಹಾಯಕ ಕೋಚ್: ಯುವರಾಜ್ ಸಿಂಗ್ (ಭಾರತದ ವಿಶ್ವಕಪ್ ಹೀರೊ)
  • ವೇಗದ ಬೌಲಿಂಗ್ ಕೋಚ್: ಚಾಮಿಂಡ ವಾಸ್ (ಶ್ರೀಲಂಕಾದ ಮಾಜಿ ದಿಗ್ಗಜ ವೇಗಿ)
  • ಸ್ಪಿನ್ ಬೌಲಿಂಗ್ ಕೋಚ್: ಅಮಿತ್ ಮಿಶ್ರಾ (ಟೀಮ್ ಇಂಡಿಯಾ ಮಾಜಿ ಸ್ಪಿನ್ನರ್)

ಮಾಲೀಕರು ಬದಲಾವಣೆ:

ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು JSW ಗ್ರೂಪ್ ಮತ್ತು GMR ಗ್ರೂಪ್ ನಡುವಿನ 50:50 ಜಂಟಿ ಮಾಲೀಕತ್ವದಲ್ಲಿದೆ. ಇವರಿಬ್ಬರ ನಡುವಿನ ಒಪ್ಪಂದದ ಪ್ರಕಾರ, ಪುರುಷರ ಐಪಿಎಲ್ ತಂಡದ ಕ್ರಿಕೆಟ್ ಕಾರ್ಯಾಚರಣೆಯ ಜವಾಬ್ದಾರಿಯನ್ನು ತಲಾ 2 ವರ್ಷಗಳ ಅವಧಿಗೆ ಸರದಿಯ ಆಧಾರದ ಮೇಲೆ ನಿರ್ವಹಿಸಲಾಗುತ್ತದೆ.

ಐಪಿಎಲ್​ 2025 ಮತ್ತು 2026ರ ಸೀಸನ್‌ಗಳಕ್ಕು ತಂಡದ ಸಂಪೂರ್ಣ ಜವಾಬ್ದಾರಿ GMR ಗ್ರೂಪ್ ಬಳಿ ಇತ್ತು. ಈ ಅವಧಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಮುಖ್ಯ ಕೋಚ್ ಆಗಿ ಹೇಮಂಗ್ ಬದಾನಿ ಮತ್ತು ವೇಣುಗೋಪಾಲ್ ರಾವ್ ಕ್ರಿಕೆಟ್ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು.

ಇದೀಗ 2027 ಮತ್ತು 2028ರ ಸೀಸನ್​ಗಾಗಿ JSW ಗ್ರೂಪ್ ಡೆಲ್ಲಿ ಕ್ಯಾಪಿಟಲ್ಸ್​ ಕಾರ್ಯಾಚರಣೆಯ ಜವಾಬ್ದಾರಿಯನ್ನು ಪಡೆದುಕೊಂಡಿದೆ. ಅದರಂತೆ ಇದೀಗ ಕೋಚಿಂಗ್ ಸಿಬ್ಬಂದಿಗಳಲ್ಲಿ ಮಹತ್ವದ ಬದಲಾವಣೆಯಾಗಿದೆ.

ಡೆಲ್ಲಿ ಶಿಬಿರದಲ್ಲಿ ಲಂಕಾ ಮಾಜಿ ವೇಗಿ:

ಫ್ರಾಂಚೈಸಿಯು ಈ ಹೊಸ ಬದಲಾವಣೆಗಳನ್ನು ಇನ್ನೂ ಅಧಿಕೃತವಾಗಿ ಪ್ರಕಟಿಸದಿದ್ದರೂ, ಹೊಸದಾಗಿ ನೇಮಕಗೊಂಡಿರುವ ವೇಗದ ಬೌಲಿಂಗ್ ಕೋಚ್ ಚಮಿಂಡಾ ವಾಸ್ ಅವರು ಈಗಾಗಲೇ ಕಾರ್ಯಪ್ರವೃತ್ತರಾಗಿದ್ದಾರೆ. ನವದೆಹಲಿಯಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಿ-ಸೀಸನ್ ಟ್ರಯಲ್ಸ್‌ನಲ್ಲಿ ವಾಸ್ ಭಾಗವಹಿಸಿದ್ದು, ಯುವ ಪ್ರತಿಭೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ಸಚಿನ್ ಸಾರ್ವಕಾಲಿಕ ರನ್ ದಾಖಲೆ ಮುರಿಯಲಿದ್ದಾರಾ ಜೋ ರೂಟ್?

ಒಟ್ಟಾರೆಯಾಗಿ, ಮೆಗಾ ಹರಾಜಿಗೂ ಮುನ್ನವೇ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಈ ಮಾಸ್ಟರ್ ಪ್ಲಾನ್ ರೂಪಿಸಿದ್ದು, ಕ್ರಿಕೆಟ್ ಜಗತ್ತಿನ ಈ ದಿಗ್ಗಜರ ಮಾರ್ಗದರ್ಶನದಲ್ಲಿ ತಂಡವು ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಗೆಲ್ಲುವ ಕನಸನ್ನು ನನಸು ಮಾಡಿಕೊಳ್ಳಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ