AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಲೀಕರ ಮೇಲೆ ಸ್ಟೇಡಿಯಂನಲ್ಲಿ ದಾಳಿ

ISL 2025: ಈ ಬಾರಿಯ ಇಂಡಿಯನ್ ಸೂಪರ್ ಲೀಗ್ ಫುಟ್​ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬೆಂಗಳೂರು ಎಫ್​ಸಿ ಹಾಗೂ ಮೋಹನ್ ಬಗಾನ್ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಇಲ್ಲಿ ಮೋಹನ್ ಬಗಾನ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಒಡೆತನದಲ್ಲಿದ್ದರೆ, ಬೆಂಗಳೂರು ಎಫ್​ಸಿ ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕರಾದ ಪಾರ್ಥ್ ಜಿಂದಾಲ್ ಅವರ ಮಾಲೀಕತ್ವದ ತಂಡ ಎಂಬುದು ವಿಶೇಷ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಲೀಕರ ಮೇಲೆ ಸ್ಟೇಡಿಯಂನಲ್ಲಿ ದಾಳಿ
Parth Jindal
ಝಾಹಿರ್ ಯೂಸುಫ್
|

Updated on:Apr 16, 2025 | 10:17 AM

Share

ಇಂಡಿಯನ್ ಸೂಪರ್ ಲೀಗ್ 2024-2025ರ (ISL) ಫೈನಲ್ ಪಂದ್ಯದ ವೇಳೆ ಮೋಹನ್ ಬಗಾನ್ ಸೂಪರ್ ಜೈಂಟ್ಸ್‌ (MGSG) ತಂಡದ ಕೆಲ ಅಭಿಮಾನಿಗಳು ಬೆಂಗಳೂರು ಎಫ್​ಸಿ ತಂಡದ ಮಾಲೀಕ ಪಾರ್ಥ್ ಜಿಂದಾಲ್ (Parth Jindal) ಮೇಲೆ ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಏಪ್ರಿಲ್ 12 ರಂದು ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆದ ಐಎಸ್‌ಎಲ್ ಫೈನಲ್‌ನಲ್ಲಿ ಮೋಹನ್ ಬಗಾನ್ ಸೂಪರ್ ಜೈಂಟ್ಸ್​  ಹಾಗೂ ಬೆಂಗಳೂರು ಎಫ್‌ಸಿ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯವನ್ನು ವೀಕ್ಷಿಸಲು ಪಾರ್ಥ್ ಜಿಂದಾಲ್ ಕೂಡ ಸ್ಟೇಡಿಯಂನಲ್ಲಿ ಹಾಜರಿದ್ದರು. ಈ ವೇಳೆ ಮೋಹನ್ ಬಗಾನ್ ಸೂಪರ್ ಜೈಂಟ್ಸ್‌ ತಂಡದ ಅಭಿಮಾನಿಗಳು ತಮ್ಮ ಮಾಲೀಕರ ಮೇಲೆ ಪಟಾಕಿಗಳೊಂದಿಗೆ ದಾಳಿ ನಡೆಸಿದ್ದಾರೆ ಎಂದು ಬೆಂಗಳೂರು ಎಫ್‌ಸಿ (ಬಿಎಫ್‌ಸಿ) ಆರೋಪಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಲೀಕರು:

ಪಾರ್ಥ್ ಜಿಂದಾಲ್ ಐಪಿಎಲ್​ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹ ಮಾಲೀಕರು. ಹಾಗೆಯೇ ಇಂಡಿಯನ್ ಸೂಪರ್ ಲೀಗ್ ಫುಟ್​ಬಾಲ್​ ಟೂರ್ನಿಯಲ್ಲಿ ಬೆಂಗಳೂರು ಎಫ್​ಸಿ ತಂಡದ ಮಾಲಕತ್ವವನ್ನು ಹೊಂದಿದ್ದಾರೆ. ಹೀಗಾಗಿ ಬೆಂಗಳೂರು ತಂಡದ ಫೈನಲ್ ಪಂದ್ಯವನ್ನು ವೀಕ್ಷಿಸಲು ಪಾರ್ಥ್ ಜಿಂದಾಲ್ ​ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಹಾಜರಿದ್ದರು.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಈ ವೇಳೆ ಮೋಹನ್ ಬಗಾನ್ ಅಭಿಮಾನಿಗಳ ಒಂದು ಗುಂಪು ಪಾರ್ಥ್ ಅವರ ಮೇಲೆ ಉದ್ದೇಶಪೂರ್ವಕವಾಗಿ ಪಟಾಕಿಗಳೊಂದಿಗೆ ದಾಳಿ ನಡೆಸಿದ್ದಾರೆ. ಅಲ್ಲದೆ ಬೆಂಗಳೂರು ಎಫ್​ಸಿ ಬೆಂಬಲಿಗರ ಮೇಲೂ ಪಟಾಕಿಗಳನ್ನು ಎಸೆದಿದ್ದಾರೆ. ಇದರಿಂದಾಗಿ ಬಿಎಫ್‌ಸಿ ಅಭಿಮಾನಿಯ ಕಣ್ಣಿಗೆ ಗಾಯವಾಗಿದೆ ಎಂದು ಬಿಎಫ್​ಸಿ ಆರೋಪಿಸಿದೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕರು:

ಮೋಹನ್ ಬಗಾನ್ ಸೂಪರ್ ಜೈಂಟ್ಸ್ ತಂಡವು ಐಪಿಎಲ್​ನ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಅವರ ಒಡೆತನದಲ್ಲಿದೆ. ಇದೀಗ ಮೋಹನ್ ಬಗಾನ್ ಸೂಪರ್ ಜೈಂಟ್ಸ್ ತಂಡದ ಅಭಿಮಾನಿಗಳ ಈ ದಾಳಿಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಬಿಎಫ್‌ಸಿ ತನ್ನ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ನೀಡಿದೆ.

ಎಐಎಫ್‌ಎಫ್‌ಗೆ ದೂರು:

ಈ ವಿಷಯದಲ್ಲಿ ಬಿಎಫ್‌ಸಿ ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಮತ್ತು ಐಎಸ್‌ಎಲ್ ಸಂಘಟಕರಾದ ಎಫ್‌ಎಸ್‌ಡಿಎಲ್‌ಗೆ ಔಪಚಾರಿಕ ದೂರು ನೀಡಿದೆ. ಈ ಘಟನೆಯನ್ನು ಗಂಭೀರವಾಗಿ ತನಿಖೆ ಮಾಡಿ ಭವಿಷ್ಯದಲ್ಲಿ ಕ್ರೀಡಾಂಗಣದಲ್ಲಿ ಅಭಿಮಾನಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕ್ಲಬ್ ಒತ್ತಾಯಿಸಿದೆ.

ಫುಟ್​ಬಾಲ್ ಪ್ರಿಯರಿಗೆ ಕ್ರೀಡಾಂಗಣಗಳು ಸುರಕ್ಷಿತ ಸ್ಥಳಗಳಾಗಿರಬೇಕು. ಇಂತಹ ಘಟನೆಗಳಿಗೆ ಫುಟ್‌ಬಾಲ್ ಅಥವಾ ಯಾವುದೇ ಕ್ರೀಡೆಯಲ್ಲಿ ಸ್ಥಾನವಿಲ್ಲ ಎಂದು ಬೆಂಗಳೂರು ಫುಟ್​ಬಾಲ್ ಕ್ಲಬ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಫೈನಲ್ ಪಂದ್ಯ ಹೇಗಿತ್ತು?

ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದ ಮೊದಲಾರ್ಧದಲ್ಲಿ ಉಭಯ ತಂಡಗಳು ಯಾವುದೇ ಗೋಲುಗಳಿಸಿರಲಿಲ್ಲ. ಆದರೆ ದ್ವಿತೀಯಾರ್ಧ ಶುರುವಾದ ಬೆನ್ನಲ್ಲೇ, 49ನೇ ನಿಮಿಷದಲ್ಲಿ ಮೋಹನ್ ಬಗಾನ್ ತಂಡದ ಆಲ್ಬರ್ಟೊ ರೊಡ್ರಿಗಸ್ ಸೆಲ್ಫ್ ಗೋಲು ಗಳಿಸಿ  ಬಿಎಫ್‌ಸಿಗೆ ಮುನ್ನಡೆ ಒದಗಿಸಿದರು.

ಆ ಬಳಿಕ ಕಂಬ್ಯಾಕ್ ಮಾಡಿದ ಮೋಹನ್ ಬಗಾನ್ ತಂಡವು ಉತ್ತಮ ಪ್ರದರ್ಶನ ನೀಡಿತು. ಅಲ್ಲದೆ 72ನೇ ನಿಮಿಷದಲ್ಲಿ ಜೇಸನ್ ಕಮ್ಮಿಂಗ್ಸ್ ಪೆನಾಲ್ಟಿ ಮೂಲಕ ಗೋಲು ಗಳಿಸಿ ಪಂದ್ಯವನ್ನು ಸಮಬಲಗೊಳಿಸಿದರು.

ಇದನ್ನೂ ಓದಿ: 7/3, 65/5, 211/9: ಹೊಸ ಇತಿಹಾಸ ಬರೆದ ಡೆಲ್ಲಿ ಕ್ಯಾಪಿಟಲ್ಸ್

ನಿಗದಿತ ಸಮಯದಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿದ್ದರಿಂದ ಪಂದ್ಯವು ಹೆಚ್ಚುವರಿ ಸಮಯದತ್ತ ಸಾಗಿತು. ಈ ವೇಳೆ ಜೇಮೀ ಮ್ಯಾಕ್ಲಾರೆನ್ 96 ನೇ ನಿಮಿಷದಲ್ಲಿ ಗೆಲುವಿನ ಬಾರಿಸಿ 1-2 ಅಂತರದಿಂದ ಮೋಹನ್ ಬಗಾನ್ ತಂಡಕ್ಕೆ ಗೆಲುವು ತಂದು ಕೊಟ್ಟರು. ಈ ಗೆಲುವಿನೊಂದಿಗೆ ಮೋಹನ್ ಬಗಾನ್ ಸೂಪರ್ ಜೈಂಟ್ಸ್ ತಂಡವು  ISL ಡಬಲ್ (ಲೀಗ್ ಶೀಲ್ಡ್ + ISL ಕಪ್) ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

Published On - 9:55 am, Wed, 16 April 25

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ