AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಜೆರ್ಸಿಯನ್ನು ತೆಗೆದು ಹಾಕುವಂತೆ ಜೈಲರ್ ನಿರ್ಮಾಪಕರಿಗೆ ಕೋರ್ಟ್ ಸೂಚನೆ

RCB: ನಮ್ಮ ಅನುಮತಿಯಿಲ್ಲದೆ ತಮ್ಮ ಜೆರ್ಸಿಯನ್ನು ಬಳಸಿ ನಕಾರಾತ್ಮಕವಾಗಿ ಬಿಂಬಿಸಲಾಗಿದೆ. ಇದರಿಂದ ಆರ್​ಸಿಬಿ ಬ್ರ್ಯಾಂಡ್ ಇಮೇಜ್​ಗೆ ಮತ್ತು ಇಕ್ವಿಟಿಗೆ ಹಾನಿಯುಂಟಾಗುತ್ತಿದೆ. ಹೀಗಾಗಿ ಈ ದೃಶ್ಯಗಳನ್ನು ಚಿತ್ರದಿಂದ ತೆಗೆದು ಹಾಕುವಂತೆ ಆರ್​ಸಿಬಿ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಕೋರ್ಟ್​ ಮೆಟ್ಟಿಲೇರಿದ್ದರು.

RCB ಜೆರ್ಸಿಯನ್ನು ತೆಗೆದು ಹಾಕುವಂತೆ ಜೈಲರ್ ನಿರ್ಮಾಪಕರಿಗೆ ಕೋರ್ಟ್ ಸೂಚನೆ
Jailer - RCB
TV9 Web
| Edited By: |

Updated on:Aug 28, 2023 | 6:20 PM

Share

ಸೆಪ್ಟೆಂಬರ್ 1 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಜೆರ್ಸಿಯನ್ನು ಹೊಂದಿರುವ ದೃಶ್ಯವನ್ನು ಯಾವುದೇ ಥಿಯೇಟರ್‌ಗಳಲ್ಲಿ ಪ್ರದರ್ಶಿಸದಂತೆ “ಜೈಲರ್” ಚಲನಚಿತ್ರದ ನಿರ್ಮಾಪಕರಿಗೆ ದೆಹಲಿ ಹೈಕೋರ್ಟ್ ನಿರ್ದೇಶಿಸಿದೆ. ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಚಿತ್ರದ ಪಾತ್ರವೊಂದಕ್ಕೆ ಆರ್​ಸಿಬಿ ಜೆರ್ಸಿಯನ್ನು ಬಳಸಲಾಗಿದೆ. ಇದೀಗ ಈ ಆರ್​ಸಿಬಿ ಜೆರ್ಸಿಯ ಧರಿಸಿರುವ ಪಾತ್ರಧಾರಿಯ ದೃಶ್ಯಕ್ಕೆ ಕತ್ತರಿ ಹಾಕುವಂತೆ ಕೋರ್ಟ್​ ಸೂಚಿಸಿದೆ.

ಈ ಚಿತ್ರದ ಕಾಂಟ್ರಾಕ್ಟ್​ ಕಿಲ್ಲರ್ ಪಾತ್ರದಲ್ಲಿ ಆರ್​ಸಿಬಿ ಜೆರ್ಸಿ ಧರಿಸಿರುವ ವ್ಯಕ್ತಿ ಕಾಣಿಸಿಕೊಂಡಿದ್ದರು. ಅಲ್ಲದೆ ಈ ಪಾತ್ರಧಾರಿ ಮಹಿಳೆಯ ಬಗ್ಗೆ ಅವಹೇಳನಕಾರಿ ಮತ್ತು ಸ್ತ್ರೀದ್ವೇಷದ ಡೈಲಾಗ್​ಗಳನ್ನು ಹೇಳುವುದನ್ನು ಜೈಲರ್​ ಚಿತ್ರದಲ್ಲಿ ಕಾಣಬಹುದು. ಇದರ ವಿರುದ್ಧ ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಕೋರ್ಟ್ ಮೆಟ್ಟಿಲೇರಿದ್ದರು.

ನಮ್ಮ ಅನುಮತಿಯಿಲ್ಲದೆ ತಮ್ಮ ಜೆರ್ಸಿಯನ್ನು ಬಳಸಿ ನಕಾರಾತ್ಮಕವಾಗಿ ಬಿಂಬಿಸಲಾಗಿದೆ. ಇದರಿಂದ ಆರ್​ಸಿಬಿ ಬ್ರ್ಯಾಂಡ್ ಇಮೇಜ್​ಗೆ ಮತ್ತು ಇಕ್ವಿಟಿಗೆ ಹಾನಿಯುಂಟಾಗುತ್ತಿದೆ ಎಂದು ಆರ್​ಸಿಬಿ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ವಾದವನ್ನು ಮುಂದಿಟ್ಟಿದೆ.

ಈ ಮೊಕದ್ದಮೆಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್, ಜೈಲರ್ ಚಿತ್ರದಿಂದ ಈ ದೃಶ್ಯವನ್ನು ಅಥವಾ ಆರ್​ಸಿಬಿ ಜೆರ್ಸಿ ಧರಿಸಿರುವುದನ್ನು ತೆಗೆದು ಹಾಕುವಂತೆ ಸೂಚಿಸಿದೆ. ಅಷ್ಟೇ ಅಲ್ಲದೆ ಚಿತ್ರವು ಟಿವಿ, ಸ್ಯಾಟ್​ಲೈಟ್ ಅಥವಾ ಒಟಿಟಿಯಲ್ಲಿ ಬಿಡುಗಡೆ ಮೊದಲು ಈ ದೃಶ್ಯವನ್ನು ಎಡಿಟ್ ಮಾಡಬೇಕೆಂದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: RCB ಯಿಂದ ಇಬ್ಬರು, CSK ಯಿಂದ ಒಬ್ಬರು: ತಂಡದಲ್ಲಿ ಮುಂಬೈ ಅವರದ್ದೇ ದರ್ಬಾರು..!

ದೆಹಲಿ ಹೈಕೋರ್ಟ್​ನ ಈ ಎಲ್ಲಾ ಆದೇಶಗಳಿಗೂ ಜೈಲರ್​ ನಿರ್ಮಾಪಕರು ಒಪ್ಪಿಗೆ ಸೂಚಿಸಿದ್ದಾರೆ. ಹಾಗೆಯೇ ಸದ್ಯ ಥಿಯೇಟರ್​ನಲ್ಲಿರುವ ಜೈಲರ್ ಚಿತ್ರದಿಂದ, ಸೆಪ್ಟೆಂಬರ್ 1 ರೊಳಗೆ ಆರ್​ಸಿಬಿ ಜೆರ್ಸಿಯ ದೃಶ್ಯವನ್ನು ತೆಗೆದು ಹಾಕುವಂತೆ ಕೋರ್ಟ್ ಸೂಚಿಸಿದೆ. ಹಾಗೆಯೇ ನ್ಯಾಯಾಲಯದ ಸಂಪೂರ್ಣ ಶುಲ್ಕವನ್ನು ಫಿರ್ಯಾದಿದಾರರಿಗೆ ಮರುಪಾವತಿಸಲು ದೆಹಲಿ ಹೈಕೋರ್ಟ್ ಆದೇಶಿಸಿದೆ.

Published On - 6:18 pm, Mon, 28 August 23

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ