AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಜೆರ್ಸಿಯನ್ನು ತೆಗೆದು ಹಾಕುವಂತೆ ಜೈಲರ್ ನಿರ್ಮಾಪಕರಿಗೆ ಕೋರ್ಟ್ ಸೂಚನೆ

RCB: ನಮ್ಮ ಅನುಮತಿಯಿಲ್ಲದೆ ತಮ್ಮ ಜೆರ್ಸಿಯನ್ನು ಬಳಸಿ ನಕಾರಾತ್ಮಕವಾಗಿ ಬಿಂಬಿಸಲಾಗಿದೆ. ಇದರಿಂದ ಆರ್​ಸಿಬಿ ಬ್ರ್ಯಾಂಡ್ ಇಮೇಜ್​ಗೆ ಮತ್ತು ಇಕ್ವಿಟಿಗೆ ಹಾನಿಯುಂಟಾಗುತ್ತಿದೆ. ಹೀಗಾಗಿ ಈ ದೃಶ್ಯಗಳನ್ನು ಚಿತ್ರದಿಂದ ತೆಗೆದು ಹಾಕುವಂತೆ ಆರ್​ಸಿಬಿ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಕೋರ್ಟ್​ ಮೆಟ್ಟಿಲೇರಿದ್ದರು.

RCB ಜೆರ್ಸಿಯನ್ನು ತೆಗೆದು ಹಾಕುವಂತೆ ಜೈಲರ್ ನಿರ್ಮಾಪಕರಿಗೆ ಕೋರ್ಟ್ ಸೂಚನೆ
Jailer - RCB
TV9 Web
| Edited By: |

Updated on:Aug 28, 2023 | 6:20 PM

Share

ಸೆಪ್ಟೆಂಬರ್ 1 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಜೆರ್ಸಿಯನ್ನು ಹೊಂದಿರುವ ದೃಶ್ಯವನ್ನು ಯಾವುದೇ ಥಿಯೇಟರ್‌ಗಳಲ್ಲಿ ಪ್ರದರ್ಶಿಸದಂತೆ “ಜೈಲರ್” ಚಲನಚಿತ್ರದ ನಿರ್ಮಾಪಕರಿಗೆ ದೆಹಲಿ ಹೈಕೋರ್ಟ್ ನಿರ್ದೇಶಿಸಿದೆ. ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಚಿತ್ರದ ಪಾತ್ರವೊಂದಕ್ಕೆ ಆರ್​ಸಿಬಿ ಜೆರ್ಸಿಯನ್ನು ಬಳಸಲಾಗಿದೆ. ಇದೀಗ ಈ ಆರ್​ಸಿಬಿ ಜೆರ್ಸಿಯ ಧರಿಸಿರುವ ಪಾತ್ರಧಾರಿಯ ದೃಶ್ಯಕ್ಕೆ ಕತ್ತರಿ ಹಾಕುವಂತೆ ಕೋರ್ಟ್​ ಸೂಚಿಸಿದೆ.

ಈ ಚಿತ್ರದ ಕಾಂಟ್ರಾಕ್ಟ್​ ಕಿಲ್ಲರ್ ಪಾತ್ರದಲ್ಲಿ ಆರ್​ಸಿಬಿ ಜೆರ್ಸಿ ಧರಿಸಿರುವ ವ್ಯಕ್ತಿ ಕಾಣಿಸಿಕೊಂಡಿದ್ದರು. ಅಲ್ಲದೆ ಈ ಪಾತ್ರಧಾರಿ ಮಹಿಳೆಯ ಬಗ್ಗೆ ಅವಹೇಳನಕಾರಿ ಮತ್ತು ಸ್ತ್ರೀದ್ವೇಷದ ಡೈಲಾಗ್​ಗಳನ್ನು ಹೇಳುವುದನ್ನು ಜೈಲರ್​ ಚಿತ್ರದಲ್ಲಿ ಕಾಣಬಹುದು. ಇದರ ವಿರುದ್ಧ ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಕೋರ್ಟ್ ಮೆಟ್ಟಿಲೇರಿದ್ದರು.

ನಮ್ಮ ಅನುಮತಿಯಿಲ್ಲದೆ ತಮ್ಮ ಜೆರ್ಸಿಯನ್ನು ಬಳಸಿ ನಕಾರಾತ್ಮಕವಾಗಿ ಬಿಂಬಿಸಲಾಗಿದೆ. ಇದರಿಂದ ಆರ್​ಸಿಬಿ ಬ್ರ್ಯಾಂಡ್ ಇಮೇಜ್​ಗೆ ಮತ್ತು ಇಕ್ವಿಟಿಗೆ ಹಾನಿಯುಂಟಾಗುತ್ತಿದೆ ಎಂದು ಆರ್​ಸಿಬಿ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ವಾದವನ್ನು ಮುಂದಿಟ್ಟಿದೆ.

ಈ ಮೊಕದ್ದಮೆಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್, ಜೈಲರ್ ಚಿತ್ರದಿಂದ ಈ ದೃಶ್ಯವನ್ನು ಅಥವಾ ಆರ್​ಸಿಬಿ ಜೆರ್ಸಿ ಧರಿಸಿರುವುದನ್ನು ತೆಗೆದು ಹಾಕುವಂತೆ ಸೂಚಿಸಿದೆ. ಅಷ್ಟೇ ಅಲ್ಲದೆ ಚಿತ್ರವು ಟಿವಿ, ಸ್ಯಾಟ್​ಲೈಟ್ ಅಥವಾ ಒಟಿಟಿಯಲ್ಲಿ ಬಿಡುಗಡೆ ಮೊದಲು ಈ ದೃಶ್ಯವನ್ನು ಎಡಿಟ್ ಮಾಡಬೇಕೆಂದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: RCB ಯಿಂದ ಇಬ್ಬರು, CSK ಯಿಂದ ಒಬ್ಬರು: ತಂಡದಲ್ಲಿ ಮುಂಬೈ ಅವರದ್ದೇ ದರ್ಬಾರು..!

ದೆಹಲಿ ಹೈಕೋರ್ಟ್​ನ ಈ ಎಲ್ಲಾ ಆದೇಶಗಳಿಗೂ ಜೈಲರ್​ ನಿರ್ಮಾಪಕರು ಒಪ್ಪಿಗೆ ಸೂಚಿಸಿದ್ದಾರೆ. ಹಾಗೆಯೇ ಸದ್ಯ ಥಿಯೇಟರ್​ನಲ್ಲಿರುವ ಜೈಲರ್ ಚಿತ್ರದಿಂದ, ಸೆಪ್ಟೆಂಬರ್ 1 ರೊಳಗೆ ಆರ್​ಸಿಬಿ ಜೆರ್ಸಿಯ ದೃಶ್ಯವನ್ನು ತೆಗೆದು ಹಾಕುವಂತೆ ಕೋರ್ಟ್ ಸೂಚಿಸಿದೆ. ಹಾಗೆಯೇ ನ್ಯಾಯಾಲಯದ ಸಂಪೂರ್ಣ ಶುಲ್ಕವನ್ನು ಫಿರ್ಯಾದಿದಾರರಿಗೆ ಮರುಪಾವತಿಸಲು ದೆಹಲಿ ಹೈಕೋರ್ಟ್ ಆದೇಶಿಸಿದೆ.

Published On - 6:18 pm, Mon, 28 August 23

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ