AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ 2021: ಗಾಯಾಳು ಮುಂಬೈ ಇಂಡಿಯನ್ಸ್ ವೇಗದ ಬೌಲರ್ ಅರ್ಜುನ್ ತೆಂಡೂಲ್ಕರ್ ಬದಲಿಗೆ ಟೀಮ್ ಸೇರಿದ ಸಿಮರ್ಜೀತ್ ಸಿಂಗ್

ಅರ್ಜುನ್ ಅವರ ಗಾಯದ ಬಗ್ಗೆಯಾಗಲಿ ಅಥವಾ ಅವರ ರಿಪ್ಲೇಸ್ ಮೆಂಟ್ ಆಗಿ ಸಿಂಗ್ ಅವರನ್ನು ಮಿಕ್ಕಿದ ಐಪಿಎಲ್ ಸೀಸನ್​ಗೆ ಕಳಿಸಬೇಕಾದ ಅನಿವಾರ್ಯತೆ ಬಗ್ಗೆಯಾಗಲೀ ಮುಂಬೈ ಇಂಡಿಯನ್ಸ್ ವಿವರಗಳನ್ನು ಬಹಿರಂಗಪಡಿಸಿಲ್ಲ.

ಐಪಿಎಲ್ 2021: ಗಾಯಾಳು ಮುಂಬೈ ಇಂಡಿಯನ್ಸ್ ವೇಗದ ಬೌಲರ್ ಅರ್ಜುನ್ ತೆಂಡೂಲ್ಕರ್ ಬದಲಿಗೆ ಟೀಮ್ ಸೇರಿದ ಸಿಮರ್ಜೀತ್ ಸಿಂಗ್
ಅರ್ಜುನ್ ತೆಂಡೂಲ್ಕರ್
TV9 Web
| Edited By: |

Updated on:Sep 30, 2021 | 12:34 AM

Share

ಮುಂಬೈ ಇಂಡಿಯನ್ಸ್ ತಂಡದ ಆಲ್-ರೌಂಡರ್ ಅರ್ಜುನ್ ತೆಂಡೂಲ್ಕರ್ ಅವರ ಹಣೆಬರಹವೇ ಸರಿ ಇದ್ದಂತಿಲ್ಲ. ಲೆಜೆಂಡರಿ ಕ್ರಿಕೆಟರ್ ಸಚಿನ್ ತೆಂಡೂಲ್ಕರ್ ಅವರ ಮಗನಾಗಿದ್ದರೂ ಅರ್ಜುನ ಕರೀಯರ್ ಟೇಕಾಫ್ ಅಗುತ್ತಿಲ್ಲ. ಮುಂಬೈ ಇಂಡಿಯನ್ಸ್ ಬುಧವಾರದಂದು ಬಿಡುಗಡೆ ಮಾಡಿರುವ ಪ್ರಕಟಣೆಯೊಂದರ ಪ್ರಕಾರ ಅರ್ಜುನ್ ಗಾಯಗೊಂಡು ಭಾರತಕ್ಕೆ ವಾಪಸ್ಸಾಗುತ್ತಿದ್ದಾರೆ ಮತ್ತು ಅವರ ರಿಪ್ಲೇಸ್ ಮೆಂಟ್ ಆಗಿ ದೆಹಲಿಯ ವೇಗದ ಬೌಲರ್ ಸಿಮರ್ಜೀತ್ ಸಿಂಗ್ ಅವರನ್ನು ದುಬೈಗೆ ಕಳಿಸಲಾಗಿದೆ. ಬಲಗೈ ವೇಗದ ಬೌಲರ್ ಸಿಮರ್ ಜೀತ್ ಐಪಿಎಲ್ ಮಾರ್ಗಸೂಚಿಯ ಪ್ರಕಾರ ಕಡ್ಡಾಯ ಕ್ವಾರಂಟೀನ್ ಅವಧಿ ಮುಗಿಸಿಕೊಂಡು ಟೀಮಿನ ಜೊತೆ ಅಭ್ಯಾಸ ಆರಂಭಿಸಿದ್ದಾರೆ ಎಂದು ಫ್ರಾಂಚೈಸಿಯ ಪ್ರಕಟಣೆ ತಿಳಿಸಿದೆ.

ಅರ್ಜುನ್ ಅವರ ಗಾಯದ ಬಗ್ಗೆಯಾಗಲಿ ಅಥವಾ ಅವರ ರಿಪ್ಲೇಸ್ ಮೆಂಟ್ ಆಗಿ ಸಿಂಗ್ ಅವರನ್ನು ಮಿಕ್ಕಿದ ಐಪಿಎಲ್ ಸೀಸನ್​ಗೆ ಕಳಿಸಬೇಕಾದ ಅನಿವಾರ್ಯತೆ ಬಗ್ಗೆಯಾಗಲೀ ಮುಂಬೈ ಇಂಡಿಯನ್ಸ್ ವಿವರಗಳನ್ನು ಬಹಿರಂಗಪಡಿಸಿಲ್ಲ.

ಪ್ರಸಕ್ತ ಚಾಂಪಿಯನ್ ಮುಂಬೈ ಇಂಡಿಯನ್ಸ್ ಈ ವರ್ಷದ ಆರಂಭದಲ್ಲಿ ನಡೆದ ಮಿನಿ ಹರಾಜಿನಲ್ಲಿ ಅರ್ಜುನ್ ಅವರನ್ನು ಮೂಲ ಬೆಲೆ ರೂ. 20 ಲಕ್ಷಗಳಿಗೆ ಖರೀದಿಸಿತು. ಭಾರತೀಯ ತಂಡದ ನೆಟ್ಸ್ನಲ್ಲಿ ಹಲವಾರು ಬಾರಿ ಬೌಲಿಂಗ್ ಮಾಡಿರುವ ಅರ್ಜುನ್ಗೆ ಇದುವರೆಗೆ ಐಪಿಎಲ್ ನಲ್ಲಿ ಆಡುವ ಅವಕಾಶ ಸಿಕ್ಕಿಲ್ಲ. ಸೀನಿಯರ್ ಮುಂಬೈ ಟಿ20 ತಂಡದ ಪರವಾಗಿ ಅವರು ಈ ವರ್ಷ ಜನೆವರಿಯಲ್ಲಿ ನಡೆದ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಡಿದರು.

ಸಿಮರ್ಜೀತ್ ಸಿಂಗ್ ಬಗ್ಗೆ ಹೇಳುವುದಾದರೆ, ಅವರು ಇತ್ತೀಚಿಗೆ 6 ಸೀಮಿತ ಓವರ್ ಪಂದ್ಯಗಳ ಸರಣಿಗಳಿಗೆ ಶ್ರೀಲಂಕಾ ಪ್ರವಾಸ ಬೆಳಸಿದ್ದ ಭಾರತೀಯ ತಂಡದ ಭಾಗವಾಗಿದ್ದರು. ಅವರಿಗೆ ಅಲ್ಲಿ ಯಾವುದೇ ಪಂದ್ಯ ಆಡುವ ಅವಕಾಶ ಸಿಗಲಿಲ್ಲವಾದರೂ, ಸೀನಿಯರ್ ಬೌಲರ್​​ಗಳಾದ ಭುವನೇಶ್ವರ ಕುಮಾರ್ ಮತ್ತು ದೀಪಕ್ ಚಹರ್ ಜೊತೆ ನೆಟ್ಸ್​​ನಲ್ಲಿ ಬೌಲ್ ಮಾಡುವ ಅವಕಾಶ ಸಿಕ್ಕಿತ್ತು.

ಈಗ ಜಾರಿಯಲ್ಲಿರುವ ಐಪಿಎಲ್ 2021 ಸೀಸನ್ ಪಾಯಿಂಟ್ಸ್ ಟೇಬಲ್​ನಲ್ಲಿ ಮುಂಬೈ ಇಂಡಿಯನ್ಸ್ 5ನೇ ಸ್ಥಾನದಲ್ಲಿದೆ. ಮಂಗಳವಾರ ನಡೆದ ಪಂದ್ಯದಲ್ಲಿ ಅದು ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿತು. ರೊಹಿತ್ ಶರ್ಮ ನೇತೃತ್ವದ ಅಂಬಾನಿಗಳ ತಂಡ 6ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಹವಣಿಕೆಯಲ್ಲಿದೆ.

ಇದನ್ನೂ ಓದಿ:  ಐಪಿಎಲ್ ಮಾಧ್ಯಮ ಹಕ್ಕು ಖರೀದಿಗೆ ಟೆಂಡರ್‌ ಕರೆದ ಬಿಸಿಸಿಐ! ಕ್ರಿಕೆಟ್ ಬಿಗ್​ಬಾಸ್​ಗಳ ಆತುರದ ನಿರ್ಧಾರಕ್ಕೆ ಕಾರಣವೇನು?

Published On - 12:33 am, Thu, 30 September 21

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್