AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deodhar Trophy 2023: ರಿಂಕು ಸಿಂಗ್ ಅರ್ಧಶತಕ ವ್ಯರ್ಥ: ಗೆದ್ದು ಬೀಗಿದ ಪೂರ್ವ ವಲಯ

East Zone vs Central Zone: ದೇಶೀಯ ಅಂಗಳದಲ್ಲಿ ನಡೆಯುತ್ತಿರುವ ದೇವಧರ್ ಟ್ರೋಫಿ ಟೂರ್ನಿಯಲ್ಲಿ ಕೇಂದ್ರ ವಲಯ ವಿರುದ್ಧದ ಪಂದ್ಯದಲ್ಲಿ ಪೂರ್ವ ವಲಯ ತಂಡವು ಭರ್ಜರಿ ಜಯ ಸಾಧಿಸಿದೆ.

Deodhar Trophy 2023: ರಿಂಕು ಸಿಂಗ್ ಅರ್ಧಶತಕ ವ್ಯರ್ಥ: ಗೆದ್ದು ಬೀಗಿದ ಪೂರ್ವ ವಲಯ
Rinku Singh
TV9 Web
| Edited By: |

Updated on: Jul 24, 2023 | 6:15 PM

Share

Deodhar Trophy 2023: ಪುದುಚೇರಿಯಲ್ಲಿ ನಡೆಯುತ್ತಿರುವ ದೇವಧರ್ ಟ್ರೋಫಿಯ 2ನೇ ಪಂದ್ಯದಲ್ಲಿ ಕೇಂದ್ರ ವಲಯದ ವಿರುದ್ಧ ಪೂರ್ವ ವಲಯ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪೂರ್ವ ವಲಯ ತಂಡದ ನಾಯಕ ಸೌರಭ್ ತಿವಾರಿ ಕೇಂದ್ರ ವಲಯವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಮೊದಲ ಬ್ಯಾಟ್ ಮಾಡಿದ ಕೇಂದ್ರ ವಲಯ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕ ಆಟಗಾರ ಮಾಧವ್ ಕೌಶಿಕ್ 13 ರನ್​ಗಳಿಸಿ ಔಟಾದರೆ, ಆ ಬಳಿಕ ಬಂದ ಯಶ್ ದುಬೆ 17 ರನ್​ಗಳಿಗೆ ಇನಿಂಗ್ಸ್ ಅಂತ್ಯಗೊಳಿಸಿದರು.

ಇನ್ನು ತಂಡದ ನಾಯಕ ವೆಂಕಟೇಶ್ ಅಯ್ಯರ್ (8) ರನ್ನು ಬೇಗನೆ ಔಟ್ ಮಾಡುವಲ್ಲಿ ಶಹಬಾಝ್ ಅಹ್ಮದ್ ಯಶಸ್ವಿಯಾದರು. ಕೇವಲ 68 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಕೇಂದ್ರ ವಲಯಕ್ಕೆ ಈ ಹಂತದಲ್ಲಿ ರಿಂಕು ಸಿಂಗ್ ಆಸರೆಯಾದರು.

ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ರಿಂಕು ಸಿಂಗ್ ನಿಧಾನಗತಿಯ ಬ್ಯಾಟಿಂಗ್​ಗೆ ಒತ್ತು ನೀಡಿದರು. ಅಲ್ಲದೆ ಒಂದೊಂದೇ ರನ್​ ಕಲೆಹಾಕುತ್ತಾ ತಂಡದ ಮೊತ್ತವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಇದರ ನಡುವೆ ಅರ್ಧಶತಕ ಪೂರೈಸಿದ ರಿಂಕು ಸಿಂಗ್ 63 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 54 ರನ್​ಗಳಿಸಿ ಮುರಾಸಿಂಗ್​ಗೆ ವಿಕೆಟ್​ ಒಪ್ಪಿಸಿದರು.

ಇತ್ತ ರಿಂಕು ವಿಕೆಟ್ ಸಿಗುತ್ತಿದ್ದಂತೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಪೂರ್ವ ವಲಯ ಬೌಲರ್​ಗಳು ಕೇಂದ್ರ ವಲಯ ತಂಡವನ್ನು 50 ಓವರ್​ಗಳಲ್ಲಿ 207 ರನ್​ಗಳಿಗೆ ಆಲೌಟ್ ಮಾಡಿದರು. ಪೂರ್ವ ವಲಯ ಪರ ಮುರಾಸಿಂಗ್, ಆಕಾಶ್ ದೀಪ್ ಹಾಗೂ ಶಹಬಾಝ್ ಅಹ್ಮದ್ ತಲಾ 3 ವಿಕೆಟ್ ಕಬಳಿಸಿ ಮಿಂಚಿದರು.

ಇನ್ನು 208 ರನ್​ಗಳ ಸುಲಭ ಗುರಿ ಪಡೆದ ಪೂರ್ವ ವಲಯ ತಂಡಕ್ಕೆ ಅಭಿಮನ್ಯು ಈಶ್ವರನ್ ಹಾಗೂ ಉತ್ಕರ್ಷ್ ಸಿಂಗ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 91 ರನ್​ ಪೇರಿಸಿ ಅಭಿಮನ್ಯು ಈಶ್ವರನ್ (38) ಔಟಾದರು.

ಮತ್ತೊಂದೆಡೆ ಆಕರ್ಷಕ ಅರ್ಧಶತಕ ಬಾರಿಸಿದ ಉತ್ಕರ್ಷ್ ಸಿಂಗ್ 104 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 89 ರನ್ ಕಲೆಹಾಕಿದರು. ಈ ಹಂತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಆದಿತ್ಯಗೆ ವಿಕೆಟ್ ಒಪ್ಪಿಸಿ ಶತಕ ವಂಚಿತರಾದರು.

ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದದ ಸುಭ್ರಾಂಶು ಸೇನಾಪತಿ ಅಜೇಯ 33 ರನ್ ಬಾರಿಸುವ ಮೂಲಕ 46.1 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಪೂರ್ವ ವಲಯ ತಂಡವು 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಪೂರ್ವ ವಲಯ ಪ್ಲೇಯಿಂಗ್ 11: ವಿರಾಟ್ ಸಿಂಗ್ , ಸೌರಭ್ ತಿವಾರಿ (ನಾಯಕ) , ಅಭಿಮನ್ಯು ಈಶ್ವರನ್ , ಸುಭ್ರಾಂಶು ಸೇನಾಪತಿ , ಕುಮಾರ್ ಕುಶಾಗ್ರಾ (ವಿಕೆಟ್ ಕೀಪರ್) , ಶಹಬಾಝ್ ಅಹ್ಮದ್ , ಮಣಿಶಂಕರ್ ಮುರಾಸಿಂಗ್ , ಆಕಾಶ್ ದೀಪ್ , ಅವಿನೋವ್ ಚೌಧರಿ , ಮುಖ್ತಾರ್ ಹುಸೇನ್ , ಉತ್ಕರ್ಷ್ ಸಿಂಗ್.

ಇದನ್ನೂ ಓದಿ: R Ashwin: ಅಶ್ವಿನ್ ಈಗ ಭಾರತದ 2ನೇ ಯಶಸ್ವಿ ಬೌಲರ್..!

ಕೇಂದ್ರ ವಲಯ ಪ್ಲೇಯಿಂಗ್ 11: ವೆಂಕಟೇಶ್ ಅಯ್ಯರ್ (ನಾಯಕ) , ಆರ್ಯನ್ ಜುಯಲ್ (ವಿಕೆಟ್ ಕೀಪರ್) , ಮಾಧವ್ ಕೌಶಿಕ್ , ರಿಂಕು ಸಿಂಗ್ , ಯಶ್ ದುಬೆ , ಶಿವಂ ಮಾವಿ , ಶಿವಂ ಚೌಧರಿ , ಕರ್ಣ್ ಶರ್ಮಾ , ಆದಿತ್ಯ ಸರ್ವತೆ , ಅನಿಕೇತ್ ಚೌಧರಿ , ಯಶ್ ಠಾಕೂರ್.

Follow Us
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ